ಮೆಕ್ಕೆಜೋಳಕ್ಕೆ ಅನಗತ್ಯವಾಗಿ ಯೂರಿಯಾ ಬಳಸಬೇಡಿ


Team Udayavani, Jul 24, 2020, 1:22 PM IST

ಮೆಕ್ಕೆಜೋಳಕ್ಕೆ ಅನಗತ್ಯವಾಗಿ ಯೂರಿಯಾ ಬಳಸಬೇಡಿ

ಚಿತ್ರದುರ್ಗ: ರೈತರು ಮೆಕ್ಕೆಜೋಳಕ್ಕೆ ಹೆಚ್ಚಿನ ಪ್ರಮಾಣದ ಯೂರಿಯಾ ಬಳಸುತ್ತಿರುವುದು ಕಂಡುಬಂದಿದ್ದು, ವಿಜ್ಞಾನಿಗಳ ಶಿಫಾರಸಿನಂತೆ ಪ್ರತಿ ಎಕರೆಗೆ ಗರಿಷ್ಠ 43 ಕೆಜಿ ಯೂರಿಯಾ ಬಳಸಬಹುದಾಗಿದೆ ಎಂದು ರೈತರಿಗೆ ಕೃಷಿ ಇಲಾಖೆ ಸೂಚನೆ ನೀಡಿದೆ.

ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಈಗ ಬಿತ್ತನೆಯಾಗಿರುವ ಮೆಕ್ಕೆಜೋಳ ಬೆಳೆಗೆ ಚಿತ್ರದುರ್ಗ, ಹೊಳಲ್ಕೆರೆ ಮತ್ತು ಹೊಸದುರ್ಗ ತಾಲೂಕುಗಳಲ್ಲಿ ಯೂರಿಯಾ ಮೇಲುಗೊಬ್ಬರವಾಗಿ ಹಾಕಲಾಗುತ್ತಿದೆ. ಯೂರಿಯಾ ರಸಗೊಬ್ಬರವನ್ನು ರೈತರು ಮೆಕ್ಕೆಜೋಳದ ಬೆಳೆಗೆ ವೈಜ್ಞಾನಿಕವಾಗಿ ಮಾಡಿರುವ ಶಿಫಾರಸಿಗಿಂತಲೂ ಅಧಿಕವಾಗಿ ಬಳಸುತ್ತಿರುವುದು ಕಂಡು ಬಂದಿದೆ. ರೈತರು ಪ್ರತಿ ಎಕರೆಗೆ ಎರಡು ಚೀಲ ಯೂರಿಯಾವನ್ನು ಅಂದರೆ 100 ಕೆಜಿ ಯೂರಿಯಾವನ್ನು ಮೇಲುಗೊಬ್ಬರವಾಗಿ ಬಳಸುತ್ತಿರುವುದು ಕಂಡು ಬಂದಿದೆ. ಆದರೆ ಬೆಳೆಯ 45 ರಿಂದ 50 ದಿನಗಳ ಹಂತದಲ್ಲಿ ಒಂದು ಬಾರಿ ಮಾತ್ರ ಯೂರಿಯಾ ರಸಗೊಬ್ಬರ ಕೊಡಬೇಕು. ಕೆಲವೆಡೆ ರೈತರು ಅನಗತ್ಯವಾಗಿ ಬೆಳೆಯ ವಿವಿಧ ಹಂತಗಳಲ್ಲಿ ಎರಡರಿಂದ ಮೂರು ಸಾರಿ, ಮಳೆ ಬಂದಂತೆಲ್ಲಾ ಯೂರಿಯಾ ಬಳಸುತ್ತಿರುವುದು ಕಂಡು ಬಂದಿದ್ದು, ಇದು ಅವೈಜ್ಞಾನಿಕವಾಗಿದೆ. ಯೂರಿಯಾ ಅಧಿಕ ಬಳಕೆಯಿಂದ ಮೆಕ್ಕೆಜೋಳದ ಬೆಳೆ ಹುಲುಸಾಗಿ ಬೆಳೆದು ಕೀಟ ಮತ್ತು ರೋಗ ಬಾಧೆಗಳಿಗೆ ಸುಲಭವಾಗಿ ತುತ್ತಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ.

ಯೂರಿಯಾ ನೀರಿನಲ್ಲಿ ಬೇಗನೆ ಕರಗಿ, ಭೂಮಿಯಲ್ಲಿ ಇಂಗಿ ಮತ್ತು ಗಾಳಿಯಲ್ಲಿ ಆವಿಯಾಗಿ ಪೋಷಕಾಂಶಗಳು ನಷ್ಟವಾಗಿ ರೈತರಿಗೆ ಆರ್ಥಿಕವಾಗಿ ನಷ್ಟವಾಗುತ್ತದೆ. ಯೂರಿಯಾ ಅಧಿಕ ಬಳಕೆಯಿಂದ ಮಣ್ಣಿನ ರಚನೆ ಹಾಳಾಗಿ ಭೂ ಫಲವತ್ತತೆ ಕಡಿಮೆಯಾಗುವ ಸಂಭವವಿದೆ. ರೈತರು ಯೂರಿಯಾ ರಸಗೊಬ್ಬರವನ್ನು ಅಗತ್ಯಕ್ಕಿಂತ ಹೆಚ್ಚಾಗಿ ಬಳಸದೆ ಮಣ್ಣು ಪರೀಕ್ಷೆ ಫಲಿತಾಂಶದ ಶಿಫಾರಸಿನ ಆಧಾರದ ಮೇಲೆ ಅಥವಾ ಗರಿಷ್ಠ ಎಕರೆಗೆ ಒಂದು ಚೀಲ ಮಾತ್ರ (45 ಕೆಜಿ), ಬೆಳೆಯ 45 ರಿಂದ 50 ದಿನಗಳ ಹಂತದಲ್ಲಿ ಒಂದು ಬಾರಿ ಮಾತ್ರ ಮೇಲ್ಗೊಬ್ಬರವಾಗಿ ಬಳಸಲು ರೈತರಿಗೆ ಮನವಿ ಮಾಡಲಾಗಿದೆ. ಹೆಚ್ಚಿನ ಮಾಹಿತಿಗೆ ತಾಲೂಕಿನ ರೈತ ಸಂಪರ್ಕ ಕೇಂದ್ರಗಳ ಕೃಷಿ ಅಧಿಕಾರಿಗಳನ್ನು ಅಥವಾ ಸಹಾಯಕ ಕೃಷಿ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಟಾಪ್ ನ್ಯೂಸ್

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.