ಪರಿಸರ ಕಾಳಜಿ ಬೆಳೆಸಿಕೊಳ್ಳುವುದು ಅಗತ್ಯ


Team Udayavani, Jan 30, 2019, 9:53 AM IST

cta-3.jpg

ಚಳ್ಳಕೆರೆ: ಶಿಕ್ಷಣ ಇಲಾಖೆ ಹಲವಾರು ಬದಲಾವಣೆಗಳ ಮೂಲಕ ಶಿಕ್ಷಣ ಕ್ರಾಂತಿಯನ್ನೇ ಮಾಡುತ್ತಿದೆ. ಶಾಲೆಗಳಲ್ಲಿ ಕಲಿಯುವ ವಿದ್ಯಾರ್ಥಿಗಳಲ್ಲಿ ವೃತ್ತಿಪರ ಶಿಕ್ಷಣ, ಜ್ಞಾನದ ಜೊತೆಗೆ ಪರಿಸರ ಜಾಗೃತಿಯುಂಟು ಮಾಡುವ ಕೆಲಸವೂ ನಡೆದಿದೆ. ಈ ನಿಟ್ಟಿನಲ್ಲಿ ವೃತ್ತಿ ಶಿಕ್ಷಕರ ಕಾರ್ಯ ಶ್ಲಾಘನೀಯ ಎಂದು ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನದ ಅಧಿಕಾರಿ ಹಾಗೂ ಪರಿವೀಕ್ಷಕ ಸಿ.ಎಂ. ತಿಪ್ಪೇಸ್ವಾಮಿ ಹೇಳಿದರು.

ನಗರದ ಹೊರವಲಯದ ಆದರ್ಶ ವಿದ್ಯಾಲಯದ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ವೃತ್ತಿ ಶಿಕ್ಷಕರ ಸಮಾವೇಶದಲ್ಲಿ ಶಿಕ್ಷಣ ಇಲಾಖೆ ಹೊರ ತಂದಿರುವ ‘ಹಸಿರು ಸಿರಿ’ ಕೃತಿಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಈ ಕೃತಿಯಲ್ಲಿ ಶಾಲಾ ಆವರಣದಲ್ಲಿ ಪರಿಸರ ಜಾಗೃತಿ ಮೂಡಿಸುವ ಬಗ್ಗೆ ಗಮನ ಸೆಳೆಯಲಾಗಿದೆ. ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕದ ಜ್ಞಾನವನ್ನು ಅರಿತರೆ ಸಾಲದು, ಬದಲಾಗಿ ಬದುಕಿಗೆ ಅಮೂಲ್ಯವಾದ ಪರಿಸರ ಕಾಳಜಿ ಬಗ್ಗೆಯೂ ಅರಿತುಕೊಳ್ಳಬೇಕೆಂದರು.

ಜಿಲ್ಲಾ ಶಿಕ್ಷಣಾಧಿಕಾರಿ ಪಿ. ರಾಮಯ್ಯ ಮಾತನಾಡಿ, ನಗರ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಚಟುವಟಿಕೆಯ ಜೊತೆಗೆ ಕೃಷಿ ಬಗ್ಗೆಯೂ ಮಾಹಿತಿ ನೀಡಬೇಕಿದೆ. ನಗರ ಪ್ರದೇಶದ ವಿದ್ಯಾರ್ಥಿಗಳು ಕೃಷಿಯ ಬಗ್ಗೆ ಹೆಚ್ಚು ತಿಳಿದುಕೊಳ್ಳುವ ಅವಶ್ಯಕತೆ ಇದೆ. ಕೃಷಿಯೇ ಎಲ್ಲರ ಬದುಕಿಗೆ ಆಧಾರವಾಗಿರುವುದರಿಂದ ಶಾಲಾ ಹಂತದಲ್ಲೇ ವಿದ್ಯಾರ್ಥಿಗಳಿಗೆ ಇದರ ಬಗ್ಗೆ ತಿಳಿವಳಿಕೆ ನೀಡಬೇಕು ಎಂದು ಕರೆ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಸ್‌. ವೆಂಕಟೇಶಪ್ಪ ಪ್ರಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳಿಗೆ ಕಲಿಕೆ ಜೊತೆಗೆ ನೈಸರ್ಗಿಕ ಸಂಪತ್ತು ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಮಹತ್ವಪೂರ್ಣವಾದುದು. ಪ್ರತಿಯೊಂದು ಶಾಲೆಯಲ್ಲೂ ಶಿಕ್ಷಕರು ಪಠ್ಯೇತರ ಚಟುವಟಿಕೆಗಳನ್ನು ಹೆಚ್ಚೆಚ್ಚು ಹಮ್ಮಿಕೊಳ್ಳಬೇಕಿದೆ. ಶಾಲಾ ಆವರಣದಲ್ಲಿ ಕೈತೋಟ ಬೆಳೆಸುವ ಮೂಲಕ ಗಿಡಮರ ಸಂರಕ್ಷಣೆಯ ಬಗ್ಗೆ ತಿಳಿಸಿಕೊಡಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆದರ್ಶ ಶಾಲೆಯ ಮುಖ್ಯ ಶಿಕ್ಷಕ ಶ್ರೀನಿವಾಸ್‌ ವಹಿಸಿದ್ದರು. ವಿಷಯ ಪರಿವೀಕ್ಷಕರಾದ ಸುನೀತಾ, ಗೋವಿಂದಪ್ಪ, ಕೃಷಿ ಅಧಿಕಾರಿ ಗಿರೀಶ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.