ಪರಿಸರ ಸ್ನೇಹಿ ಗಣಿಗಾರಿಕೆ ಅಗತ್ಯ: ಸಹಾ


Team Udayavani, Dec 17, 2018, 5:24 PM IST

cta-2.jpg

ಚಿತ್ರದುರ್ಗ: ಗಣಿಗಾರಿಕೆ ಪ್ರದೇಶದ ಒಳಗೆ ಮತ್ತು ಗಣಿಗಾರಿಕೆ ನಡೆಯುತ್ತಿರುವ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ಫೋಟ
ಮಾಡುವ ಸಂದರ್ಭದಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಗಣಿ ಸುರಕ್ಷತಾ ಇಲಾಖೆಯ ಉಪ ಪ್ರಧಾನ ನಿರ್ದೇಶಕ ಉತ್ಪಾಲ್‌ ಸಹಾ ಹೇಳಿದರು.

ನಗರದ ತರಾಸು ರಂಗಮಂದಿರದಲ್ಲಿ ಗಣಿ ಸುರಕ್ಷತಾ ಸಂಘ ಹಾಗೂ ಮಿನರಲ್‌ ಎಂಟರ್‌ಪ್ರೈಸಸ್‌ ಸಹಯೋಗದಲ್ಲಿ
ಭಾನುವಾರ ಆಯೋಜಿಸಿದ್ದ ಮೂರನೇ ವಲಯ ಮಟ್ಟದ ಗಣಿ ಸುರಕ್ಷಾ ಸಪ್ತಾಹದ ಸಮಾರೋಪ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬಹುತೇಕ ಗಣಿ ಕಂಪನಿಗಳು ಬ್ಲಾಸ್ಟಿಂಗ್‌ ಮಾಡುವಾಗ ಮತ್ತು ಡ್ರಿಲ್‌ ಕೊರೆಯುವಾಗ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದಿಲ್ಲ. ಅನಾನುಭವಿಗಳು ಬ್ಲಾಸ್ಟಿಂಗ್‌ ಮಾಡುತ್ತಿರುತ್ತಾರೆ ಎಂದು ಆಕ್ಷೇಪಿಸಿದರು.

ನೈಸರ್ಗಿಕ ಖನಿಜ ಸಂಪನ್ಮೂಲ ಅಭಿವೃದ್ಧಿ ಕಾಯ್ದೆ ಜಾರಿಗೆ ಬಂದ ನಂತರ ಅಕ್ರಮಕ್ಕೆ ಕಡಿವಾಣ ಬಿದ್ದಿದೆ. 2015 ರಿಂದ ಜಾರಿಗೆ ಬಂದಿರುವ ಹೊಸ ನಿಯಮಗಳನ್ನು ಉಲ್ಲಂಘಿಸದೆ ಪರಿಸರ ಸ್ನೇಹಿ ಹಾಗೂ ಸುಸ್ಥಿರ ಗಣಿಗಾರಿಕೆ ಮಾಡಬೇಕು ಎಂದರು.

ವೈಜ್ಞಾನಿಕವಾಗಿ ಮಾಡುವ ಸುಸ್ಥಿರ ಗಣಿಗಾರಿಕೆಯು ಉತ್ಪಾದನೆ, ಮೂಲ ಸೌಕರ್ಯವನ್ನು ಅವಲಂಬಿಸಿದೆ. ಸ್ವಾತಂತ್ರ್ಯಾ ನಂತರದಿಂದ ಸುಸ್ಥಿರ ಗಣಿಗಾರಿಕೆಗೆ ಸಂಬಂಧಿಸಿದಂತೆ ಸೂಕ್ತ ನಿಯಮಗಳನ್ನು ರೂಪಿಸಿರಲಿಲ್ಲ. ಗಣಿಗಾರಿಕೆ ಗೊತ್ತಿಲ್ಲದವರು ಲಾಭವನ್ನೇ ಮಾನದಂಡವನ್ನಾಗಿ ಮಾಡಿಕೊಂಡು ಬೇಕಾಬಿಟ್ಟಿ ಗಣಿಗಾರಿಕೆ ಮಾಡಿದರು. ಗಣಿಗಾರಿಕೆ ನಡೆಯುವ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬ್ಲಾಸ್ಟಿಂಗ್‌ನಿಂದ ತೊಂದರೆಯಾಗುತ್ತಿದ್ದರೆ ಸುಪ್ರೀಂ ಕೋರ್ಟ್‌ಗೆ ಮರು ಪರಿಶೀಲನಾ ಅರ್ಜಿ ಸಲ್ಲಿಸಿ ನ್ಯಾಯ ಪಡೆಯಬಹುದು ಎಂದು ತಿಳಿಸಿದರು.

ಪ್ರತಿಯೊಂದು ಗಣಿಗಾರಿಕೆಯಲ್ಲಿ ಸ್ವಯಂ ಸುರಕ್ಷತೆಯ ತಂತ್ರ ಜೀವನದ ಮಂತ್ರವಾಗಬೇಕು. ಗಣಿಯಲ್ಲಿ ಕೆಲಸ ಮಾಡುವ ವ್ಯಕ್ತಿಗಳಿಗೆ ಅವಶ್ಯಕವಾದ ಸುರಕ್ಷಾ ಸಲಕರಣೆಗಳನ್ನು ಗಣಿ ಸಂಸ್ಥೆಗಳು ಪೂರೈಸಬೇಕು. ಅಪಾಯವಾಗದಂತೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು. ಗಣಿ ವ್ಯವಸ್ಥಾಪಕ ಸೇರಿದಂತೆ ಗಣಿಗಾರಿಕೆಯ ಕೆಲಸದಲ್ಲಿ ತೊಡಗಿರುವ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸಬೇಕು ಎಂದು ಕರೆ ನೀಡಿದರು.

ಬೆಂಗಳೂರು ಪ್ರಾದೇಶಿಕ ಗಣಿ ಸುರಕ್ಷತಾ ಮಹಾನಿರ್ದೇಶಕ ಜಿ. ವಿಜಯಕುಮಾರ್‌ ಮಾತನಾಡಿ, ಪ್ರಕೃತಿಗೆ ವಿರುದ್ಧವಾಗಿ ಕಾನೂನು ಉಲ್ಲಂಘಿಸಿ ಗಣಿಗಾರಿಕೆ ಮಾಡಬಾರದು. ಗಣಿಗಾರಿಕೆ ಪ್ರದೇಶದ ಸುತ್ತಲಿನ ನಿವಾಸಿಗಳಿಗೆ ಸಮಸ್ಯೆ ಆಗದಂತೆ ಕಂಪನಿಗಳು ಎಚ್ಚರ ವಹಿಸಬೇಕು. ವಾಮಮಾರ್ಗ ಅನುಸರಿದರೆ ಕಂಟಕ ತಪ್ಪಿದ್ದಲ್ಲ ಎಂದು ಎಚ್ಚರಿಕೆ ನೀಡಿದರು.

ಗಣಿ ಸುರಕ್ಷಾ ಸಂಘದ ಅಧ್ಯಕ್ಷ ವಾಸು ಗೌಡ, ಕರ್ನಾಟಕ ವಲಯದ ಗೌರವ ಕಾರ್ಯದರ್ಶಿ ಧನಂಜಯ ಜೆ. ರೆಡ್ಡಿ,
ಕಾರ್ಯನಿರ್ವಾಹಕ ನಿದೇಶಕ ಡಾ| ಮೇದಾ ವೆಂಕಟಯ್ಯ ಮತ್ತಿತರರು ಇದ್ದರು.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.