ಗಾಂಜಾ ಮಾರಾಟ-ಸೇವನೆ: ಎಂಟು ಜನರ ಬಂಧನ


Team Udayavani, May 18, 2022, 1:09 PM IST

ganja

ಚಿತ್ರದುರ್ಗ: ನಗರದ ಜೋಗಿಮಟ್ಟಿ ರಸ್ತೆಯ ಜಟ್‌ಪಟ್‌ ನಗರದಿಂದ ಕುರುಬರ ಗುಡ್ಡಕ್ಕೆ ಹೋಗುವ ಮಾರ್ಗದಲ್ಲಿ ಆಟೋದಲ್ಲಿ ಗಾಂಜಾ ಮಾರಾಟ ಮತ್ತು ಗಾಂಜಾ ಸೇವಿಸುತ್ತಿದ್ದ ಒಟ್ಟು ಎಂಟು ಮಂದಿಯನ್ನು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತರಿಂದ 80 ಸಾವಿರ ರೂ. ಮೌಲ್ಯದ ಗಾಂಜಾ ಸೊಪ್ಪು, ಆಟೋ ಹಾಗೂ ನಗದು ವಶಕ್ಕೆ ಪಡೆಯಲಾಗಿದೆ ಎಂದು ಎಸ್ಪಿ ಕೆ.ಪರಶುರಾಮ್‌ ಮಂಗಳವಾರ ಎಸ್ಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಗಾಂಜಾ ಮಾರಾಟ ಮಾಡುತ್ತಿದ್ದ ಚಿತ್ರದುರ್ಗ ನಗರದ ಸೋಮಶೇಖರ, ಭರತ್‌ ಹಾಗೂ ಗಾಂಜಾ ಸೇವಿಸುತ್ತಿದ್ದ ದಸ್ತಗಿರಿ, ಸಾತ್ವಿಕ್‌, ಬಾಬು ಫಕೃದ್ದೀನ್‌, ದಾದಾಪೀರ್‌, ಭಾಸ್ಕರಾಚಾರಿ, ಗೌಸ್‌ ಪೀರ್‌ ಬಂಧಿತರು. ಆರೋಪಿಗಳು ಆಂಧ್ರಪ್ರದೇಶದ ವಿಶಾಖ ಪಟ್ಟಣದಿಂದ ಗೋವಿಂದಪ್ಪ ಎಂಬುವವರ ಬಳಿಯಿಂದ ರೈಲಿನ ಮೂಲಕ ಗಾಂಜಾ ಸೊಪ್ಪು ಖರೀದಿಸಿ ತಂದು ಚಿತ್ರದುರ್ಗದಲ್ಲಿ ಸಣ್ಣ ಕವರ್‌ ಗಳಲ್ಲಿ ತುಂಬಿಸಿ 400 ರೂ.ಗಳಿಗೆ ಒಂದರಂತೆ ಮಾರಾಟ ಮಾಡುತ್ತಿದ್ದರು. ಇದೇವೇಳೆ ನಗರದ ಕಾಲೇಜು ವಿದ್ಯಾರ್ಥಿಗಳಿಗೂ ಸರಬರಾಜು ಮಾಡುತ್ತಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದಾರೆ.

ಎಸ್ಪಿ ಕೆ.ಪರಶುರಾಮ್, ಹೆಚ್ಚುವರಿ ರಕ್ಷಣಾಧಿಕಾರಿ ಕುಮಾರಸ್ವಾಮಿ, ಡಿವೈಎಸ್ಪಿ ಪಾಂಡುರಂಗ ಮಾರ್ಗ ದರ್ಶನದಲ್ಲಿ ಸಿಪಿಐ ನಯೀಮ್‌, ಎಎಸ್‌ಐ ಸೈಯದ್‌ ಸಿರಾಜುದ್ದೀನ್‌, ಸಿಬ್ಬಂದಿಗಳಾದ ಶ್ರೀನಿವಾಸ, ರಂಗಸ್ವಾಮಿ, ಬೀರೇಶ್‌, ಶಿವರಾಜ್‌ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಕುಮಾರಸ್ವಾಮಿ ಹಾಜರಿದ್ದರು.

ಮಹಜರ್‌ ವೇಳೆ ಕಿಂಗ್‌ಪಿನ್‌ ಪರಾರಿ

ದಾಳಿ ವೇಳೆ ಬಂಧಿಸಿ, ಮಹಜರ್‌ ನಡೆಸುವಾಗ ಪ್ರಕರಣದ ಪ್ರಮುಖ ಆರೋಪಿ ಶ್ರೀನಿವಾಸ ಅಲಿಯಾಸ್‌ ಜಪಾನ್‌ ಸೀನ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ಮೂತ್ರ ವಿಸರ್ಜನೆ ಮಾಡುವುದಾಗಿ ತಿಳಿಸಿದ್ದು, ಓರ್ವ ಸಿಬ್ಬಂದಿ ಜೊತೆಗೆ ದೂರಕ್ಕೆ ತೆರಳಿ ಅಲ್ಲಿಂದ ತಪ್ಪಿಸಿಕೊಂಡಿದ್ದಾನೆ. ಇದು ನಮ್ಮ ಸಿಬ್ಬಂದಿ ನಿರ್ಲಕ್ಷ್ಯವಾಗಿದ್ದು, ಈ ಬಗ್ಗೆಯೂ ವಿಚಾರಣೆ ನಡೆಸಿ ಕ್ರಮ ಜರುಗಿಸುವುದಾಗಿ ಎಸ್ಪಿ ಕೆ.ಪರಶುರಾಮ್‌ ತಿಳಿಸಿದರು.

ಮಹಜರ್‌ ಸ್ಥಳದಲ್ಲಿ ಆರೋಪಿಗಳ ಸಂಖ್ಯೆ ಹೆಚ್ಚಾಗಿತ್ತು. ಪೊಲೀಸ್‌ ಸಿಬ್ಬಂದಿ ಸಂಖ್ಯೆ ಕಡಿಮೆಯಿತ್ತು. ಈ ಕಾರಣಕ್ಕೆ ತಪ್ಪಿಸಿಕೊಂಡಿದ್ದಾನೆ. ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.