ಗಡಿ ಭಾಗದ ಚೆಕ್ಪೋಸ್ಟ್ಗೆ ಚುನಾವಣಾಧಿಕಾರಿ ಭೇಟಿ
Team Udayavani, Apr 9, 2018, 5:06 PM IST
ಚಳ್ಳಕೆರೆ: ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಆಂಧ್ರಪ್ರದೇಶಕ್ಕೆ ಹೊಂದಿಕೊಂಡಿರುವ ಹಲವಾರು ಪ್ರದೇಶಗಳಿವೆ. ಈ ಪ್ರದೇಶಗಳಲ್ಲಿ ಈಗಾಗಲೇ ಪೊಲೀಸ್ ಹಾಗೂ ಕಂದಾಯ ಇಲಾಖೆ ಸಹಯೋಗದೊಂದಿಗೆ ಚೆಕ್ಪೋಸ್ಟ್ ಸ್ಥಾಪಿಸಲಾಗಿದೆ. ಚುನಾವಣಾಧಿಕಾರಿ ಬಿ. ಆನಂದ್ ಚೆಕ್ಪೋಸ್ಟ್ಗೆ ಭೇಟಿ ನೀಡಿ ಪರಿಶೀಲಿಸಿದರು.
ದೊಡ್ಡಚೆಲ್ಲೂರು, ಕಡೇಹುಡೆ, ಸಿದ್ದೇಶ್ವರನದುರ್ಗ, ಪಾತಪ್ಪನಗುಡಿ ಮುಂತಾದ ಪ್ರದೇಶಗಳಿಗೆ ದಿಢೀರ್ ಭೇಟಿ ನೀಡಿ ಅಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳೊಂದಿಗೆ ಚರ್ಚೆ ನಡೆಸಿದರು. ಚೆಕ್ಪೋಸ್ಟ್ ಮೂಲಕ ಹಾದುಹೋಗುವ ಎಲ್ಲ ವಾಹನಗಳ ತಪಾಸಣೆ ನಡೆಸಬೇಕು. ಅನುಮಾನ ಕಂಡುಬಂದಲ್ಲಿ ಕೂಡಲೇ ಹಿರಿಯ ಅಧಿಕಾರಿಗಳ ಗಮನಕ್ಕೆ ತರುವಂತೆ ಸೂಚನೆ ನೀಡಿದರು.
ಗಡಿಭಾಗದಲ್ಲಿರುವ ಆಂಧ್ರಪ್ರದೇಶದ ಹಲವಾರು ಗ್ರಾಮಗಳ ಜನರಿಗೂ ತಾಲೂಕಿನ ಜನರಿಗೂ ಅನ್ಯೋನ್ಯತೆ ಇದೆ. ಹಾಗಾಗಿ ಅಕ್ರಮ ಮದ್ಯ ಸೇರಿದಂತೆ ಇನ್ನಿತರ ಚಟುವಟಿಕೆಗಳು ನಡೆಯುವ ಸಾಧ್ಯತೆ ಇದೆ. ಆದ್ದರಿಂದ ಸಿಬ್ಬಂದಿ ಜಾಗರೂಕರಾಗಿರಬೇಕು ಎಂದರು.
ಇದೇ ಸಂದರ್ಭದಲ್ಲಿ ವಿವಿಧ ಗ್ರಾಮಗಳಿಗೆ ತೆರಳಿ ವಿವಿ ಪ್ಯಾಟ್ ಬಳಕೆ ಬಗ್ಗೆ ಮತದಾರರೊಂದಿಗೆ ಚರ್ಚೆ ನಡೆಸಿದರು. ಚುನಾವಣಾ ಸಿಬ್ಬಂದಿ ಗ್ರಾಮೀಣ ಜನರಿಗೆ ಇನ್ನೂ ಹೆಚ್ಚಿನ ಮಾರ್ಗದರ್ಶನ ನೀಡುವ ಅವಶ್ಯಕತೆ ಇದೆ. ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು ಜನರು ಈ ಬಗ್ಗೆ ತಿಳಿದುಕೊಳ್ಳುವ ಆಸಕ್ತಿ ಹೊಂದಿದ್ದು, ಸಂಬಂಧಪಟ್ಟ ಅಧಿಕಾರಿಗಳು ಜನರಿಗೆ ಸೂಕ್ತ ರೀತಿಯಲ್ಲಿ ತಿಳುವಳಿಕೆ ನೀಡಬೇಕೆಂದರು. ಈ ಸಂದರ್ಭದಲ್ಲಿ ಚುನಾವಣಾ ಸಿಬ್ಬಂದಿ ಶ್ರೀಧರ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್