ಸರ್‌. ಎಂ. ವಿಶ್ವೇಶ್ವರಯ್ಯ ಕೊಡುಗೆ ಅಪಾರ: ಪವನ್‌


Team Udayavani, Sep 16, 2020, 7:15 PM IST

ಸರ್‌. ಎಂ. ವಿಶ್ವೇಶ್ವರಯ್ಯ ಕೊಡುಗೆ ಅಪಾರ: ಪವನ್‌

ಮೊಳಕಾಲ್ಮೂರು: ಕನ್ನಂಬಾಡಿ ಅಣೆಕಟ್ಟನ್ನು ನಿರ್ಮಾಣಕ್ಕೆ ಅಂದಿನ ಅಭಿಯಂತರರಾದ ಭಾರತ ರತ್ನ ಸರ್‌.ಎಂ. ವಿಶ್ವೇಶ್ವರಯ್ಯ ಶ್ರಮಿಸಿದರು. ಗುಣಮಟ್ಟದ ಕಾಮಗಾರಿ ಕೈಗೊಂಡು ವಿಶ್ವ ಖ್ಯಾತಿ ಗಳಿಸಿದರು ಎಂದು ಕಿರಿಯ ಸಹಾಯಕ ಅಭಿಯಂತರ ಪವನ್‌ ಹೇಳಿದರು.

ಪಟ್ಟಣದ ಜಿಪಂ ಕಾರ್ಯಪಾಲಕ ಇಂಜಿನಿಯರ್‌ರವರ ಕಾರ್ಯಾಲಯದಲ್ಲಿ ನಡೆದ ಇಂಜಿನಿಯರ್‌ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿಶ್ವದ ಗಮನಸೆಳೆದಿರುವ ಕೃಷ್ಣರಾಜಸಾಗರ ಆಣೆಕಟ್ಟೆಯನ್ನು ನಿರ್ಮಿಸಿದರು. ಆ ಭಾಗದ ರೈತರು ಹಾಗೂಪ್ರತಿಯೊಬ್ಬ ನಾಗರಿಕರು ಅಭಿವೃದ್ಧಿಯತ್ತ ಸಾಗಲು ಸರ್‌ ಎಂ. ವಿಶ್ವೇಶ್ವರಯ್ಯನವರು ಉತ್ತಮ ಗುಣಮಟ್ಟದ ಕಾಮಗಾರಿಯನ್ನು ನಿರ್ಮಿಸಿ ಆಭಾಗದ ಜನತೆಗೆ ಆಶಾ ಜ್ಯೋತಿಯಾಗಿದ್ದಾರೆ. ಇವರ ಆದರ್ಶ ಗುಣಗಳನ್ನು ಪಾಲಿಸಿ ಕೀರ್ತಿ ಗಳಿಸಬೇಕು. ರಾಜ್ಯ ಹಾಗೂ ದೇಶದಾದ್ಯಂತ ಇಂಜಿನಿಯರ್‌ಗಳು ಹಲವಾರು ಆಣೆಕಟ್ಟೆಗಳುಹಾಗೂ ಬೃಹತ್‌ ವಿನ್ಯಾಸದ ಕಟ್ಟಡಗಳನ್ನು ನಿರ್ಮಿಸಿದ್ದಾರೆ. ದೇಶವನ್ನು ಅಭಿವೃದ್ಧಿಯತ್ತಕೊಂಡೊಯ್ಯುವಲ್ಲಿ ಇಂಜಿಯರ್‌ಗಳ ಪಾತ್ರ ಮಹತ್ವದ್ದಾಗಿದೆ ಎಂದರು.

ಈ ಸಂದರ್ಭದಲ್ಲಿ ಸರ್‌.ಎಂ. ವಿಶ್ವೇಶ್ವರಯ್ಯ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಸಹಾಯಕ ಅಭಿಯಂತರರಾದ ಕೆ.ಪಿ. ತಿಪ್ಪೇಸ್ವಾಮಿ, ಜಬೀವುಲ್ಲಾ, ಸಿಬ್ಬಂದಿ ಬಿ.ಟಿ. ಮಂಜುನಾಥ, ವರದರಾಜ್‌, ಸಂದೀಪ್‌, ಆನಂದ, ಮುಖಂಡರಾದ ನಾಗರಾಜ್‌, ಪಾಲಯ್ಯ ಮತ್ತಿತರರು ಇದ್ದರು.

ವಿಶ್ವೇಶ್ವರಯ್ಯ ಪುತ್ಥಳಿಗೆ ಮಾಲಾರ್ಪಣೆ : ಚಿತ್ರದುರ್ಗ: ನಗರದ ಲೋಕೋಪಯೋಗಿ ಇಲಾಖೆ ಕಚೇರಿಯಲ್ಲಿ ಇಂಜಿನಿಯರ್ಸ್‌ ದಿನಾಚರಣೆ ಆಚರಿಸಲಾಯಿತು.

ಕಚೇರಿ ಆವರಣದಲ್ಲಿರುವಸರ್‌.ಎಂ. ವಿಶ್ವೇಶ್ವರಯ್ಯ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿಸ್ಮರಣೆ ಮಾಡಲಾಯಿತು. ಕರ್ನಾಟಕ ಇಂಜಿನಿಯರ್‌ಗಳ ಸಂಘ, ಕರ್ನಾಟಕ ಇಂಜಿನಿಯರಿಂಗ್‌ ಸೇವಾ ಸಂಘ, ಸರ್ಕಾರಿ ನೌಕರರ ಸಂಘ, ಜಿಲ್ಲಾ ಗುತ್ತಿಗೆದಾರರ ಸಂಘ, ಜಿಲ್ಲಾ ಪ್ರಾಕ್ಟಿಸಿಂಗ್‌ ಆರ್ಕಿಟೆಕ್ಟ್ ಹಾಗೂ ಇಂಜಿನಿಯರ್ಸ್‌

ಅಸೋಸಿಯೇಷನ್‌ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ವೇಳೆ ಸರ್ಕಾರಿ ನೌಕರರ ಸಂಘದಜಿಲ್ಲಾಧ್ಯಕ್ಷ ಮಂಜುನಾಥ್‌, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಸತೀಶ್‌, ವಾಸವಿ ವಿದ್ಯಾಸಂಸ್ಥೆ ಅಧ್ಯಕ್ಷ ಪಿ.ಎಲ್‌. ಸುರೇಶ್‌ರಾಜು, ಜಿಲ್ಲಾ ಹೋಟೆಲ್‌ ಮಾಲಿಕರ ಸಂಘದ ಅಧ್ಯಕ್ಷ ಅರುಣ್‌ಕುಮಾರ್‌ ಸೇರಿದಂತೆ ಹಲವು ಅಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.