ಇಂಗ್ಲಿಷ್‌ ಪರೀಕ್ಷೆ ನಿರ್ಭೀತಿಯಿಂದ ಬರೀರಿ


Team Udayavani, Jun 17, 2020, 9:15 AM IST

ಇಂಗ್ಲಿಷ್‌ ಪರೀಕ್ಷೆ ನಿರ್ಭೀತಿಯಿಂದ ಬರೀರಿ

ಸಾಂದರ್ಭಿಕ ಚಿತ್ರ

ಚಿತ್ರದುರ್ಗ: ಕೋವಿಡ್ ಲಾಕ್‌ಡೌನ್‌ ಕಾರಣಕ್ಕೆ ಬಾಕಿ ಉಳಿದಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್‌ ವಿಷಯದ ಪರೀಕ್ಷೆ ಜೂ.18ಕ್ಕೆ ನಿಗದಿಯಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಪಪೂ ಶಿಕ್ಷಣ ಇಲಾಖೆ ಭರದ ತಯಾರಿ ನಡೆಸುತ್ತಿವೆ.

ಈ ಸಂಬಂಧ ಈಗಾಗಲೇ ಇಲಾಖಾ ಮಟ್ಟದಲ್ಲಿ ಹಾಗೂ ಜಿಲ್ಲಾಡಳಿತದ ಸಭೆ ನಡೆದಿದ್ದು, ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಹಾಜರಾಗಲು ಅಗತ್ಯ ಸಾರಿಗೆ ವ್ಯವಸ್ಥೆಯನ್ನೂ ಮಾಡಲಾಗುತ್ತಿದೆ. ಇದಕ್ಕಾಗಿ ಹೆಲ್ಪ್ಲೈನ್‌ ತೆರೆಯಲಾಗಿದೆ. ಈ ಹಿಂದೆ ನಡೆದ ಪರೀಕ್ಷೆಗಳಿಗೆ 14 ಪರೀಕ್ಷಾ ಬ್ಲಾಕ್‌ಗಳನ್ನು ಮಾಡಿಕೊಳ್ಳಲಾಗಿತ್ತು. ಆದರೆ ಈಗ ಕೋವಿಡ್  ಸೋಂಕಿನ ಆತಂಕ ಹಾಗೂ ಹೊರಗಿನ ವಿದ್ಯಾರ್ಥಿಗಳು ಜಿಲ್ಲೆಯಲ್ಲೇ ಪರೀಕ್ಷೆ ಬರೆಯುವುದರಿಂದ 8 ಬ್ಲಾಕ್‌ ಹೆಚ್ಚಾಗಿದೆ. ಒಟ್ಟು 20 ಬ್ಲಾಕ್‌ ಗಳ 682 ಪರೀಕ್ಷಾ ಕೊಠಡಿಗಳಲ್ಲಿ 15,339 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಚಿತ್ರದುರ್ಗ ಮೂಲದ ವಿದ್ಯಾರ್ಥಿಗಳು ದಕ್ಷಿಣಕನ್ನಡ, ದಾವಣಗೆರೆ, ಬೆಂಗಳೂರು, ಮೈಸೂರು ಮತ್ತಿತರೆಡೆ ಅಧ್ಯಯನ ಮಾಡುತ್ತಿರುವ ಮಕ್ಕಳು ಜಿಲ್ಲೆಯಲ್ಲೇ ಪರೀಕ್ಷೆಗೆ ನೋಂದಣಿ ಮಾಡಿಸಿಕೊಂಡಿದ್ದು, ಈ ಸಂಖ್ಯೆ 820ಕ್ಕೆ ಮುಟ್ಟಿದೆ. ಈ ಎಲ್ಲಾ ವಿದ್ಯಾರ್ಥಿಗಳಿಗೆ ಅವರ ಊರು, ಮನೆಯ ಹತ್ತಿರದ ಪರೀಕ್ಷಾ ಕೇಂದ್ರಗಳಲ್ಲೇ ಅವಕಾಶ ಕಲ್ಪಿಸಿದ್ದು, ಪ್ರಶ್ನೆ ಹಾಗೂ ಉತ್ತರ ಪತ್ರಿಕೆಗಳನ್ನು ಒದಗಿಸುವಂತೆ ಪಿಯು ಮಂಡಳಿಗೆ ಜಿಲ್ಲೆಯಿಂದ ಮನವಿ ಮಾಡಲಾಗಿದೆ.

ಒಂದು ಕೊಠಡಿಗೆ 24 ವಿದ್ಯಾರ್ಥಿಗಳು: ಕೋವಿಡ್ ಸೋಂಕು ಭೀತಿಯ ನಡುವೆಯೂ ಪರೀಕ್ಷೆ ನಡೆಸುತ್ತಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ತಯಾರಿ ನಡೆಸಲಾಗುತ್ತಿದೆ. ಈ ಹಿಂದೆ ಒಂದು ಕೊಠಡಿಯಲ್ಲಿ 30 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದರು. ಆದರೆ ಈಗ ಒಂದು ಕೊಠಡಿಗೆ 24 ವಿದ್ಯಾರ್ಥಿಗಳನ್ನು ಮಾತ್ರ ಕೂರಿಸಲಾಗುತ್ತದೆ. ಪ್ರತಿ ಡೆಸ್ಕ್ ನಡುವೆ 3 ಅಡಿ ಅಂತರ ಇಟ್ಟುಕೊಂಡು ವ್ಯವಸ್ಥೆ ಮಾಡಲಾಗಿದೆ. ರೋಗ ಲಕ್ಷಣ ಕಂಡು ಬರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿಟ್ಟು ಪರೀಕ್ಷೆ ಬರೆಸಲು ಹೆಚ್ಚುವರಿಯಾಗಿ ಒಂದು ಕೊಠಡಿ ಇಟ್ಟುಕೊಳ್ಳಲಾಗಿದೆ. ವಿದ್ಯಾರ್ಥಿಗಳಿಗೆ ಉಚಿತ ಬಸ್‌ ವ್ಯವಸ್ಥೆ ಕಲ್ಪಿಸಲು ತಯಾರಿ ನಡೆದಿದೆ.

ಹೊರ ಜಿಲ್ಲೆಗಳಲ್ಲಿ ಅಧ್ಯಯನ ಮಾಡುವ ಚಿತ್ರದುರ್ಗ ಮೂಲದ ವಿದ್ಯಾರ್ಥಿಗಳ ಮೊಬೈಲ್‌ಗೆ ಪಿಯು ಮಂಡಳಿಯಿಂದ ಈಗಾಗಲೇ ಪರೀಕ್ಷಾ ಕೇಂದ್ರದ ವಿವರವುಳ್ಳ ಮೆಸೇಜ್‌ ಹೋಗಿದೆ. ಹಳೆಯ ಹಾಲ್‌ ಟಿಕೆಟ್‌ ತಂದರೂ ಪ್ರವೇಶ ಕಲ್ಪಿಸುತ್ತೇವೆ ಅಥವಾ ಆನ್‌ಲೈನ್‌ನಲ್ಲಿ ಹೊಸದಾಗಿಯೂ ಪ್ರಿಂಟ್‌ ತೆಗೆದುಕೊಳ್ಳಬಹುದು. ಈಗಾಗಲೇ ಬಸ್‌ಗಳು ಓಡಾಡುತ್ತಿರುವ ಮಾರ್ಗಗಳಲ್ಲಿ ವಿದ್ಯಾರ್ಥಿಗಳು ಹಾಲ್‌ ಟಿಕೆಟ್‌ ತೋರಿಸಿದರೆ ಉಚಿತವಾಗಿ ಪ್ರಯಾಣಿಸಬಹುದು. -ಎಂ.ಸಿ. ಶೋಭಾ, ಪಿಯು ಡಿಡಿ, ಚಿತ್ರದುರ್ಗ

ಟಾಪ್ ನ್ಯೂಸ್

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

18

Road mishap: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ; ಓರ್ವ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.