ಕೃಷಿ ಕಾಯ್ದೆ ರೈತರಿಗೆ ಮಾರಕವಲ್ಲ: ಸುರೇಶ್
Team Udayavani, Dec 9, 2020, 4:12 PM IST
ಚಿತ್ರದುರ್ಗ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಮಸೂದೆಗಳು ರೈತರ ಪರವಾಗಿವೆ. ಯಾವುದೂ ಮಾರಕವಾಗಿಲ್ಲ. ಇದನ್ನು ಸಹಿಸದ ವಿರೋಧಿಗಳು ರೈತರನ್ನು ಎತ್ತಿ ಕಟ್ಟುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಸಿದ್ದಾಪುರ ಆರೋಪಿಸಿದರು.
ಬಿಜೆಪಿ ಕಚೇರಿಯಲ್ಲಿ ಮಂಗಳವಾರಸುದ್ದಿಗೋಷ್ಠಿಯಲ್ಲಿ ಮಾತನಾಡಿದಅವರು, ಕೇಂದ್ರ ಸರ್ಕಾರ ಜಾರಿಗೆತಂದಿರುವ ರೈತರ ಉತ್ಪನ್ನ, ವ್ಯಾಪಾರಮತ್ತು ವಾಣಿಜ್ಯ ಮಸೂದೆ, ರೈತರಬೆಳೆಗಳಿಗೆ ಬೆಲೆ ಭರವಸೆ ಮತ್ತು ಸೇವಾ ಒಪ್ಪಂದ, ಅಗತ್ಯ ಸರಕುಗಳತಿದ್ದುಪಡಿ ಮಸೂದೆ ರೈತ ವಿರೋಧಿಯಾಗಿದೆ ಎಂದು ಕಾಂಗ್ರೆಸ್ ಸೇರಿದಂತೆ ವಿವಿಧ ಸಂಘಟನೆಗಳು ರೈತರನ್ನು ಪ್ರಚೋದಿ ಸಿ ಭಾರತ ಬಂದ್ ನಡೆಸಿವೆ. ಆದರೆ ಬಂದ್ ವಿಫಲವಾಗಿದೆ ಎಂದರು.
ದಲ್ಲಾಳಿಗಳು, ಮಧ್ಯವರ್ತಿಗಳು ಇದನ್ನು ಲಾಭವನ್ನಾಗಿ ಮಾಡಿಕೊಂಡುರೈತರನ್ನು ಪ್ರಧಾನಿ ನರೇಂದ್ರಮೋದಿಯವರ ವಿರುದ್ಧ ಪ್ರಚೋದಿಸುತ್ತಿರುವುದು ಸರಿಯಲ್ಲ. ಮೂರು ಕಾಯ್ದೆಗಳಿಂದ ರೈತರಿಗೆ ಲಾಭವೇ ವಿನಃ ನಷ್ಟವಲ್ಲ. ಇದನ್ನು ವಿರೋಧಿಸುವವರು ಅರ್ಥ ಮಾಡಿಕೊಂಡು ರೈತರ ದಿಕ್ಕು ತಪ್ಪಿಸಬಾರದು ಎಂದು ತಾಕೀತು ಮಾಡಿದರು.
ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ವೆಂಕಟೇಶ ಯಾದವ್ಮಾತನಾಡಿ, ರೈತರ ಆದಾಯವನ್ನು ದ್ವಿಗುಣಗೊಳಿಸುವುದಕ್ಕಾಗಿ ಕೇಂದ್ರಸರ್ಕಾರ ಮೂರು ಮಸೂದೆಗಳನ್ನು ಜಾರಿಗೆ ತಂದಿದೆ. ರೈತರ ಏಳಿಗೆ,ಅಭಿವೃದ್ಧಿ, ರಕ್ಷಣೆಗೆ ಈ ಮಸೂದೆಗಳು ಸಹಕಾರಿಯಾಗಲಿದೆ. ದೆಹಲಿಯಲ್ಲಿ ಪ್ರತಿಭಟನೆಯಲ್ಲಿ ತೊಡಗಿರುವರೈತರು ಭಾರತ ಬಂದ್ಗೆ ಕರೆನೀಡಿರುವುದಕ್ಕೆ ಇತರೆ ಸಂಘಟನೆಗಳು ಬೆಂಬಲಿಸುತ್ತಿರುವುದು ಹಾಸ್ಯಾಸ್ಪದ. ಆತ್ಮನಿರ್ಭರ ಯೋಜನೆಯಡಿ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಪರಿಹಾರ ಜಮಾ ಆಗುತ್ತಿದೆ. ಕಾಂಗ್ರೆಸ್ ಸರ್ಕಾರದಲ್ಲಿ ರೈತರಿಗೆ ದುಸ್ತರವಾಗಿದ್ದ ಯೂರಿಯಾವನ್ನು ಈಗ ಸುಲಭವಾಗಿಸಿಗುವಂತೆ ಮಾಡಲಾಗಿದೆ. ಇದು ಪ್ರಧಾನಿ ಮೋದಿ ಅವರಿಗೆ ರೈತರಮೇಲಿರುವ ಕಾಳಜಿಯನ್ನು ತೋರಿಸುತ್ತದೆ ಎಂದರು.
ರೈತ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಸೂರಮ್ಮನಹಳ್ಳಿ ನಾಗರಾಜ್,ಪ್ರಧಾನ ಕಾರ್ಯದರ್ಶಿ ಜಿ.ಎಸ್.ಕಲ್ಲೇಶಯ್ಯ, ವಕ್ತಾರ ನಾಗರಾಜ್ ಬೇದ್ರೆ, ಕೇಶವಮೂರ್ತಿ, ಎನ್. ತಿಪ್ಪೇಸ್ವಾಮಿ ಸುದ್ದಿಗೋಷ್ಠಿಯಲ್ಲಿದ್ದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
KBCಯಲ್ಲಿ 12.5 ಲಕ್ಷ ಗೆದ್ದು ಬಡ ಮಕ್ಕಳ ಆಶಾಕಿರಣವಾದ ರವಿ ಕಟಪಾಡಿ | Udayavani
Whatsapp ಅನ್ನು ಓವರ್ ಟೇಕ್ ಮಾಡಿದ ಸಿಗ್ನಲ್!!??
ದ.ಕ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಚಾಲನೆ
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ; ಪ್ರಥಮ ಡೋಸ್ ನೀಡಿ ಚಾಲನೆ
ಉಡುಪಿಯಲ್ಲಿ ಕೋರೋನಾ ಲಸಿಕೆ ಪಡೆದ ಮೊದಲ ವ್ಯಕ್ತಿಯ ಮಾತು
ಹೊಸ ಸೇರ್ಪಡೆ
ಮುಂಬೈ : ಬಾಯ್ಫ್ರೆಂಡ್ ಜತೆ ಪತ್ನಿ ಪರಾರಿ: ಪತಿ ದೂರು
ಚಿಕ್ಕಬಳ್ಳಾಪುರ : ದ್ವಿತೀಯ ಹಂತದ ಕೋವಿಡ್ ಲಸಿಕೆ ಅಭಿಯಾನ ಆರಂಭ- 2358 ಫಲಾನುಭವಿಗಳಿಗೆ
ರಸ್ತೆ ನಿರ್ಮಾಣ ವಿಚಾರ : ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ಮಧ್ಯೆ ಘರ್ಷಣೆ : ಹಲವರಿಗೆ ಗಾಯ
ರಕ್ಷಣಾ ಇಲಾಖೆಯ ಸಂಸದೀಯ ಸ್ಥಾಯಿ ಸಮಿತಿ .ಜ.20 ರಂದು ಕಾರವಾರ ನೌಕಾನೆಲೆಗೆ ಭೇಟಿ
ಹುದ್ದೆ ನೇಮಕಾತಿಗೆ ವ್ಯಕ್ತಿಯಿಂದ ಹಣ ಸ್ವೀಕರಿಸುತ್ತಿದ್ದ ಮಹಿಳಾ ಅಧಿಕಾರಿ ಎಸಿಬಿ ಬಲೆಗೆ