ರೈತರ ಬಿಪಿಎಲ್ ಕಾರ್ಡ್ ರದ್ದತಿಗೆ ಆಕ್ಷೇಪ
Team Udayavani, Oct 24, 2021, 1:52 PM IST
ಚಿತ್ರದುರ್ಗ: ಜಿಲ್ಲೆಯಾದ್ಯಂತ ಅನೇಕ ರೈತರ ಬಿಪಿಎಲ್ಕಾರ್ಡ್ಗಳನ್ನು ರದ್ದು ಮಾಡಲಾಗಿದೆ. ಈ ಆದೇಶವನ್ನುಹಿಂಪಡೆದು ಮತ್ತೆ ರೈತರಿಗೆ ಬಿಪಿಎಲ್ ಕಾರ್ಡ್ನೀಡಬೇಕು ಎಂದು ರೈತ ಸಂಘದ ರಾಜ್ಯ ಗೌರವಾಧ್ಯಕ್ಷಈಚಘಟ್ಟ ಸಿದ್ಧವೀರಪ್ಪ ಒತ್ತಾಯಿಸಿದರು.
ನಗರದ ಪ್ರವಾಸಿಮಂದಿರದಲ್ಲಿ ಶನಿವಾರಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಸೇರಿದಂತೆ ಇಡೀ ದೇಶದಲ್ಲಿ ಕೊರೊನಾ ಸಂಕಷ್ಟದಿಂದಜನರು ತತ್ತರಿಸಿದ್ದಾರೆ. ಅದರಿಂದ ಇನ್ನೂ ಹೊರ ಬಂದಿಲ್ಲ.ದುಡಿಯುವ ಕೈಗಳಿಗೆ ಕೆಲಸವಿಲ್ಲದೆ ಕಷ್ಟಪಡುತ್ತಿದ್ದಾರೆ.
ರೈತರ ಜಮೀನುಗಳಲ್ಲಿ ಬೆಳೆಗಳು ಹಾಳಾಗಿ ನಷ್ಟಅನುಭವಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಜಿಲ್ಲೆಯಲ್ಲಿಅನೇಕ ಜನರ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗಿದೆಎಂದು ಅಸಮಾಧಾನ ವ್ಯಕ್ತಪಡಿಸಿದರು.ಅನೇಕ ಜನರ ಜಮೀನುಗಳು ಅವರತಂದೆಯ ಹೆಸರಿನಲ್ಲಿವೆ. ಮಕ್ಕಳು ಆ ಜಮೀನನ್ನುಅನುಭವಿಸುತ್ತಿದ್ದಾರೆ.
ಇತ್ತೀಚಿನ ಮಳೆ ಪರಿಸ್ಥಿತಿ, ದುಬಾರಿಕೂಲಿ, ಕೃಷಿ ಉತ್ಪನ್ನಗಳಿಗೆ ಬೆಲೆ ಸಿಗದೆ ಇರುವುದು, ಈಎಲ್ಲಾ ಅಂಶಗಳಿಂದ ಕೃಷಿ ಮಾಡುವುದೇ ದುಸ್ತರವಾಗಿದೆ.ಸೂಕ್ತ ಬೆಲೆ ಇಲ್ಲದ ಕಾರಣ ಎಷ್ಟೋ ರೈತರು ಬೆಳೆ ಕಟಾವುಮಾಡಿಲ್ಲ. ಹೊಲದಲ್ಲೇ ಕೊಳೆಯುತ್ತಿದೆ. ಇಂತಹಪರಿಸ್ಥಿತಿಯಲ್ಲಿ ಸರ್ಕಾರ ನೀಡುವ ಪಡಿತರ ಧಾನ್ಯಅವರ ಜೀವನಕ್ಕೆ ನೆರವಾಗುತ್ತಿದೆ. ಈಗ ಬಿಪಿಎಲ್ಕಾರ್ಡ್ ರದ್ದು ಮಾಡಿರುವುದು ಗಾಯದ ಮೇಲೆ ಬರೆಎಳೆದಂತಾಗಿದೆ ಎಂದು ದೂರಿದರು.
ಜಿಲ್ಲೆಯಲ್ಲಿ ಈಗಾಗಲೇ 18 ಸಾವಿರಕ್ಕೂ ಹೆಚ್ಚುಕಾರ್ಡ್ಗಳನ್ನು ರದ್ದು ಮಾಡಲಾಗಿದೆ. ಇನೂ 9 ಸಾವಿರಕಾರ್ಡ್ಗಳ ರದ್ದು ಮಾಡಲು ಸಿದ್ಧತೆ ನಡೆಯುತ್ತಿದೆ.ಕಾರ್ಡ್ಗಳನ್ನು ಹಿಂಪಡೆಯುವ ಮುನ್ನ ರೈತರ ಸ್ಥಿತಿಗತಿಅರಿತುಕೊಳ್ಳಬೇಕು. ಕೆಲವು ಕುಟುಂಬದಲ್ಲಿ ಏಕವ್ಯಕ್ತಿಇದ್ದಾರೆ. ಮಕ್ಕಳು ಮರಿ ಇರುವುದಿಲ್ಲ. ಅಂತಹವರಿಗೆಕಾರ್ಡ್ ನೀಡಲಾಗಿಲ್ಲ. ಕುಟುಂಬದಲ್ಲಿ ಒಬ್ಬರುಆದಾಯ ತೆರಿಗೆ ಕಟ್ಟಿದಲ್ಲಿ ಆ ಕುಟುಂಬ ಎಲ್ಲ ಸದಸ್ಯರಿಗೆಪಡಿತರ ಧಾನ್ಯ ನೀಡಲು ನಿರಾಕರಿಸಲಾಗುತ್ತಿದೆ.
ಇದುಸರಿಯಲ್ಲ, ಈ ಕುರಿತು ಸಂಬಂ ಸಿದ ಅಧಿ ಕಾರಿಗಳುಪರಿಶೀಲನೆ ನಡೆಸಬೇಕೆಂದರು.ಜನರು ಕೊರೋನಾ ಸಂಕಷ್ಟದಿಂದ ಇನ್ನೂ ಹೊರಗೆಬಂದಿಲ್ಲ. ಹಾಗಾಗಿ ರದ್ದು ಮಾಡಿರುವ ಎಲ್ಲ ಕಾಡ್ìಗಳನ್ನು ಮುಂದಿನ ತಿಂಗಳ ಮೊದಲ ವಾರದೊಳಗಾಗಿ ನೀಡಬೇಕು.
ತಪ್ಪಿದಲ್ಲಿ ಮುಂದಿನ ದಿನಗಳಲ್ಲಿ ಹಂತಹಂತವಾಗಿ ಹೋರಾಟ ನಡೆಸಲಾಗುವುದು ಎಂದುಎಚ್ಚರಿಸಿದರು.ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷಡಿ.ಎಸ್.ಹಳ್ಳಿ ಮಲ್ಲಿಕಾರ್ಜುನ್, ಹೊಳಲ್ಕೆರೆ ತಾಲ್ಲೂಕು ಅಧ್ಯಕ್ಷ ಬಸವರಾಜಪ್ಪ, ಚಿತ್ರದುರ್ಗ ತಾಲ್ಲೂಕು ಅಧ್ಯಕ್ಷಜಿ.ಆರ್.ಹಳ್ಳಿ ಪ್ರವೀಣ್, ತೊಡರನಹಾಳ್, ಶಂಕರಪ್ಪ,ಚಿಕ್ಕಂದವಾಡಿ ನಾಗರಾಜ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ
MUST WATCH
ಹೊಸ ಸೇರ್ಪಡೆ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!