ರೈತರು ಸಂಘಟಿತರಾದರಷ್ಟೇ ಸೌಲಭ್ಯ ಪಡೆಯಲು ಸಾಧ್ಯ


Team Udayavani, Jun 26, 2018, 12:04 PM IST

chitradurga-1.jpg

ಚಿತ್ರದುರ್ಗ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರನ್ನು ಕಡೆಗಣಿಸುತ್ತಿವೆ. ಇದರಿಂದ ರೈತರು ಎಚ್ಚೆತ್ತುಕೊಂಡು ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ನುಲೇನೂರು ಶಂಕರಪ್ಪ ಕರೆ ನೀಡಿದರು.

ನಗರದ ಎಪಿಎಂಸಿ ಆವರಣದಲ್ಲಿರುವ ರೈತ ಭವನದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ಸೋಮವಾರ ನಡೆದ ತಾಲೂಕು ಹಾಗೂ ಜಿಲ್ಲಾ ಸಮಿತಿ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ರೈತರ ಬದುಕು ಹಸನಾಗಬೇಕಾದರೆ ಭದ್ರಾ ಮೇಲ್ದಂಡೆ ಯೋಜನೆ ನಿಗದಿತ ಅವಧಿಯೊಳಗೆ ಪೂರ್ಣಗೊಳ್ಳಬೇಕು. ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿದರೆ ಮಾತ್ರ ಕಾಮಗಾರಿ ಯಾವ ಹಂತದಲ್ಲಿದೆ ಎಂಬುದು ಗೊತ್ತಾಗುತ್ತದೆ. ಒಂದು ವೇಳೆ ಕಾಮಗಾರಿ ವಿಳಂಬವಾದಲ್ಲಿ ಹೋರಾಟ ಮಾಡುವ ಮೂಲಕ ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಎಚ್ಚರಿಸಬೇಕು ಎಂದರು.

ಕೃಷಿಗಾಗಿ ಸಾಲ ಮಾಡಿರುವ ರೈತರು ಮರ್ಯಾದೆಗೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಹೋರಾಟದಿಂದ ಮಾತ್ರ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಸಾಧ್ಯ. ಭದ್ರಾ ಮತ್ತು ಸಾಸ್ವೆಹಳ್ಳಿ ಯೋಜನೆಯನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದರು.

ರೈತ ಸಂಘದ ತಾಲೂಕು ಅಧ್ಯಕ್ಷ ಬಸ್ತಿಹಳ್ಳಿ ಜಿ. ಸುರೇಶ್‌ಬಾಬು ಮಾತನಾಡಿ, ಅನ್ನ ನೀಡುವ ಅನ್ನದಾತ ಸಮಸ್ಯೆಗಳ ಸುಳಿಯಲ್ಲಿ ಸಿಲುಕಿದ್ದಾನೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸಾಲ ಮನ್ನಾ ಮಾಡುವಂತೆ ಒತ್ತಾಯಿಸುತ್ತ ಬರುತ್ತಿದ್ದರೂ ಬರೀ ಭರವಸೆಗಳಷ್ಟೇ ಸಿಗುತ್ತಿವೆ. ಅದಕ್ಕಾಗಿ ರೈತರು ಸಂಘಟಿತರಾಗಿ ಹೋರಾಟಕ್ಕೆ ಮುಂದಾಗಬೇಕು ಎಂದು ತಿಳಿಸಿದರು.

ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಜುಲೈ 5 ರಂದು ಮಂಡಿಸಲಿರುವ ಬಜೆಟ್‌ ಕಾದು ನೋಡುತ್ತೇವೆ. ಒಂದು ವೇಳೆ ರೈತರ ಸಾಲ ಮನ್ನಾ ಮಾಡದಿದ್ದರೆ ಉಗ್ರ ಚಳವಳಿ ಮಾಡಲಾಗುವುದು. ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ ಸಿಗಬೇಕು. ಅಕ್ರಮ-ಸಕ್ರಮ ಯೋಜನೆಯಡಿ ರೈತರ ಹೊಲಗಳಿಗೆ ಪರಿವರ್ತಕಗಳನ್ನು ಅಳವಡಿಸಿ ನ್ಯೂನತೆಗಳನ್ನು ಸರಿಪಡಿಸಬೇಕು. ಪ್ರತಿ ತಿಂಗಳು ರೈತರ ಸಭೆ ಕರೆದು ಸಮಸ್ಯೆಗಳನ್ನು ಜಿಲ್ಲಾಡಳಿತ ಹಾಗೂ ಸರ್ಕಾರದ ಗಮನಕ್ಕೆ ತರುವ ಕೆಲಸ ಆಗಬೇಕು ಎಂದರು.

ಧಾರವಾಡ ಜಿಲ್ಲೆಯ ನವಲಗುಂದ-ನರಗುಂದದಲ್ಲಿ ಜುಲೈ 21 ರಂದು ರೈತ ಹುತಾತ್ಮರ ದಿನಾಚರಣೆ ನಡೆಯಲಿದೆ. ನಮ್ಮ ಜಿಲ್ಲೆಯಿಂದ ಕನಿಷ್ಠ 500 ರೈತರಾದರೂ ಪಾಲ್ಗೊಂಡು ಹುತಾತ್ಮ ರೈತರಿಗೆ ಗೌರವ ಸಮರ್ಪಿಸಬೇಕು ಎಂದು ಮನವಿ ಮಾಡಿದರು. 

ನಿವೃತ್ತ ಶಿಕ್ಷಕ ಈಶ್ವರಪ್ಪ ಮಾತನಾಡಿ, ರೈತರಲ್ಲಿ ಸಂಘಟನೆ ಇಲ್ಲದಿದ್ದರೆ ಏನು ಮಾಡಲೂ ಸಾಧ್ಯವಿಲ್ಲ. ಎಲ್ಲಾ ಸರ್ಕಾರಗಳು ರೈತರ ಪರವಾಗಿವೆ ಎಂದು ಮೊಸಳೆ ಕಣ್ಣೀರು ಸುರಿಸುತ್ತವೆ. ಹಗಲಿರುಳು ರೈತರು ಕಷ್ಟ ಪಟ್ಟರೂ ಸುಖವಾಗಿಲ್ಲ. ಏಕೆಂದರೆ ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ಸಿಗುತ್ತಿಲ್ಲ. ರೈತರ ನೋವು ಕಡಿಮೆಯಾಗಬೇಕಾದರೆ ಹೋರಾಟ ಗಟ್ಟಿಯಾಗಬೇಕು ಎಂದು ಅಭಿಪ್ರಾಯಪಟ್ಟರು.

ಸಾಲ ಮನ್ನಾ ಮಾಡಿ ಎಂದು ಸರ್ಕಾರದ ಮೇಲೆ ಬಲವಾದ ಒತ್ತಡ ಹೇರುವ ರೈತರೇ ಇಲ್ಲದಂತಾಗಿದ್ದಾರೆ. ಸಂಘಟನೆಗಳು ಬಲವಾಗಬೇಕಾದರೆ ಪ್ರತಿ ಹಳ್ಳಿ ಹಳ್ಳಿಗಳಲ್ಲಿ ರೈತ ಸಂಘ ಹುಟ್ಟಿಕೊಳ್ಳಬೇಕು. ಆಗ ಮಾತ್ರ ರೈತರ
ಬಲವನ್ನು ಯಾವ ಸರ್ಕಾರಗಳೂ ಕುಗ್ಗಿಸಲು ಸಾಧ್ಯವಿಲ್ಲ ಎಂದರು.

ಸಭೆಯಲ್ಲಿ ತಾಪಂ ಸದಸ್ಯ ಕರಿಯಪ್ಪ, ರೈತ ಮುಖಂಡರಾದ ತಿಮ್ಮಣ್ಣ, ಕೆಂಚಯಲ್ಲಪ್ಪ, ಸಿದ್ದಮ್ಮ, ಇಮಾಂಸಾಬ್‌, ತಿಪ್ಪೇಸ್ವಾಮಿ, ಚಂದ್ರು, ಶೇಖರಪ್ಪ, ಲಕ್ಷ್ಮೀನರಸಿಂಹಸ್ವಾಮಿ, ಚಿಕ್ಕಪ್ಪನಹಳ್ಳಿ ಸ್ವಾಮಿ, ತಿಪ್ಪೇಸ್ವಾಮಿ ಮೊದಲಾದವರು
ಭಾಗವಹಿಸಿದ್ದರು.

ಮುಂಬರುವ ತಾಪಂ ಹಾಗೂ ಜಿಪಂ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿಯೂ ರೈತ ಸಂಘದಿಂದ ಅಭ್ಯರ್ಥಿಗಳನ್ನು ಸ್ಪರ್ಧೆಗಿಳಿಸಲಾಗುವುದು. ಅವರನ್ನು ಗೆಲ್ಲಿಸಿಕೊಳ್ಳುವ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಅಧಿಕಾರ   ಹಿಡಿಯಲು ಈಗಿನಿಂದಲೇ ಸಿದ್ಧತೆ ಮಾಡಬೇಕು. 

 ಬಸ್ತಿಹಳ್ಳಿ ಸುರೇಶ್‌ಬಾಬು, ರೈತ ಸಂಘದ ತಾಲೂಕು ಅಧ್ಯಕ್ಷ

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.