ಬೆಸ್ಕಾಂ ಕಾರ್ಯವೈಖರಿಗೆ ರೈತರ ಆಕ್ರೋಶ


Team Udayavani, Feb 16, 2021, 6:34 PM IST

ಬೆಸ್ಕಾಂ ಕಾರ್ಯವೈಖರಿಗೆ ರೈತರ ಆಕ್ರೋಶ

ಹೊಳಲ್ಕೆರೆ: ನೀರಾವರಿ ಅಧಾರಿತ ಕೃಷಿ ಹಾಗೂ ತೋಟಗಾರಿಕೆ ಬೆಳೆ ಉಳಿಸಿಕೊಳ್ಳಲು ನೀರು ಬೇಕು. ಆದರೆ ಕೊಳವೆಬಾವಿಗಳಿಗೆ ಬೆಸ್ಕಾಂ ಸಮರ್ಪಕ ವಿದ್ಯುತ್‌ ಸಂಪರ್ಕ ಕಲ್ಪಿಸುತ್ತಿಲ್ಲ ಎಂದು ಆರೋಪಿಸಿ ತಾಲೂಕು ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಪಟ್ಟಣದ ಬೆಸ್ಕಾಂ ಕಚೇರಿ ಮುಂಭಾಗದಲ್ಲಿ ಅನಿರ್ದಿಷ್ಟ ಧರಣಿ ನಡೆಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ರೈತ ಸಂಘದ ಕಾರ್ಯಾಧ್ಯಕ್ಷ ಈಚಘಟ್ಟದ ಸಿದ್ಧವೀರಪ್ಪ ಮಾತನಾಡಿ, ಕಳೆದ ಎರಡು ವರ್ಷಗಳಿಂದ ಸಮರ್ಪಕ ವಿದ್ಯುತ್‌ಸೌಲಭ್ಯವಿಲ್ಲದೆ ತಾಲೂಕಿನ ರೈತರು ಸಂಕಷ್ಟದಲ್ಲಿದ್ದಾರೆ.ತೋಟಗಾರಿಕೆ ಬೆಳೆಗಳನ್ನು ಉಳಿಸಿಕೊಳ್ಳಲು ಹೋರಾಟನಡೆಸುವ ಸ್ಥಿತಿ ನಿರ್ಮಾಣವಾಗಿದೆ. ಇಂಧನ ಇಲಾಖೆ ದಿನಕ್ಕೆ 7 ಗಂಟೆ ಬದಲಿಗೆ 1 ಗಂಟೆ ವಿದ್ಯುತ್‌ ನೀಡುತ್ತಿದೆ. ಇದರಿಂದ ತೋಟಗಾರಿಕೆ ಬೆಳೆ ನೀರಿಲ್ಲದೆ ಒಣಗುವ ಸ್ಥಿತಿ ತಲುಪಿದೆ. ಜತೆಗೆ ರಾತ್ರಿ ಹೊತ್ತು ವಿದ್ಯುತ್‌ ನೀಡುವ ಕ್ರಮ ಸರಿಯಲ್ಲ. ರಾತ್ರಿ ಹೊತ್ತು ದೂರದ ತೋಟಗಳಲ್ಲಿ ಒಬ್ಬರೇ ನೀರು ಕಟ್ಟಲು ಸಾಧ್ಯವಿಲ್ಲ. ವನ್ಯಮೃಗ ಹಾಗೂ ವಿಷ ಜಂತುಗಳಿಗೆ ರೈತರು ಬಲಿಯಾಗುತ್ತಿದ್ದಾರೆ.

ಹಾಗಾಗಿ ನಿತ್ಯ 5 ಗಂಟೆ ವಿದ್ಯುತ್‌ ಸೌಲಭ್ಯ ಕಲ್ಪಿಸಿ ಕೊಡುವ ತನಕ ಬೆಸ್ಕಾಂ ಕಚೇರಿ ಆವರಣ ಬಿಟ್ಟು ಯಾವ ರೈತರೂ ಮನೆಗಳಿಗೆ ಹೋಗುವುದಿಲ್ಲ ಎಂದು ಘೋಷಿಸಿದರು. ಪ್ರತಿಭಟನೆಯಲ್ಲಿ ರೈತ ಸಂಘದ ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ, ಜಿಲ್ಲಾಧ್ಯಕ್ಷ ಚಿಕ್ಕಬ್ಬಿಗೆರೆ ನಾಗರಾಜು, ಜಿಲ್ಲಾ ಕಾರ್ಯಾಧ್ಯಕ್ಷ ಎಸ್‌. ಬಯಲಪ್ಪ,ಹೊಳಲ್ಕೆರೆ ತಾಲೂಕು ಅಧ್ಯಕ್ಷ ಅಪ್ಪರಸನಹಳ್ಳಿ ಎಂ.ಬಸವರಾಜಪ್ಪ, ನಗರಾಧ್ಯಕ್ಷ ಲೋಕೇಶ್‌, ಕಾರ್ಯದರ್ಶಿಅಜಯ್‌, ಕೋಟ್ರೆ ಶಂಕರಪ್ಪ ಸೇರಿದಂತೆ ಹೊಸದುರ್ಗ, ಚಳ್ಳಕೆರೆ, ಹಿರಿಯೂರು, ಚಿತ್ರದುರ್ಗ ರೈತ ಸಂಘದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

ಇದಕ್ಕೂ ಮುನ್ನ ಪಟ್ಟಣದ ಚಿತ್ರದುರ್ಗ ಪೆಟ್ರೋಲ್‌ ಬಂಕ್‌ನಿಂದ ಬೆಸ್ಕಾಂ ಕಚೇರಿ ತನಕ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಕೆರೆಗಳಿಗೆ ನೀರು ತುಂಬಿಸುವ ಕೆಲಸದಿಂದ ತಾಲೂಕಿನಲ್ಲಿರುವ ವಿದ್ಯುತ್‌ ಸಮಸ್ಯೆಗೆಮುಕ್ತಿ ಸಿಗುವುದಿಲ್ಲ. ಅದರ ಬದಲಿಗೆ ಇನ್ನಷ್ಟು ಭೀಕರ ಪರಿಸ್ಥಿತಿ ಎದುರಿಸಬೇಕಾಗಿ ಬರಬಹುದು. ತಕ್ಷಣ ತಾಲೂಕಿನ ವಿದ್ಯುತ್‌ಸಾಮರ್ಥ್ಯವನ್ನು ದ್ವಿಗುಣಗೊಳಿಸಬೇಕು. ಅದಕ್ಕೆ ಬೇಕಾದ ಎಲ್ಲಾ ಮಾದರಿಯ ಸಿದ್ಧತೆಗಳನ್ನು ಸರಕಾರ ಕೈಗೊಳ್ಳಬೇಕು. –ಈಚಘಟ್ಟದ ಸಿದ್ಧವೀರಪ್ಪ, ರೈತ ಸಂಘದ ಕಾರ್ಯಾಧ್ಯಕ್ಷ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.