ರೈತರ ಬಂಗಾರ ಹರಾಜು ಕ್ರಮ ಸರಿಯಲ್ಲ
Team Udayavani, Nov 8, 2020, 7:31 PM IST
ಹೊಳಲ್ಕೆರೆ: ಪಟ್ಟಣದಲ್ಲಿರುವ ಕೆನರಾ ಬ್ಯಾಂಕ್ ರೈತರ ಬಂಗಾರ ಹರಾಜು ಹಾಕಲು ಮುಂದಾಗಿರುವ ಕ್ರಮ ಸರಿಯಲ್ಲ ಎಂದು ತಾಲೂಕು ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಒತ್ತಾಯಿಸಿ ಬ್ಯಾಂಕ್ ಎದುರು ಪ್ರತಿಭಟನೆ ನಡೆಸಿದರು.
ರಾಜ್ಯ ರೈತಾಪಿ ಕೆಲಸಕ್ಕಾಗಿ ಬ್ಯಾಂಕ್ ಗಳಿಗೆ ಮನೆಯಲ್ಲಿದ್ದ ಬಂಗಾರ ಒತ್ತೆ ಇಟ್ಟು, ಕೃಷಿ ಕಾಯಕ ಕೈಗೊಳ್ಳಲು ಸಾಲ ಪಡೆದ ರೈತರ ಬಂಗಾರವನ್ನು ಸಾಲ ತೀರಿಸಿಲ್ಲ,ಎನ್ನುವ ಸಬೂಬು ಹೇಳಿ ಬಂಗಾರ ಹರಾಜು ಮಾಡುವ ಕ್ರಯ ಸರಿಯಲ್ಲ. ಬ್ಯಾಂಕ್ ವ್ಯವಸ್ಥಾಪಕರು ತಕ್ಷಣ ಹರಾಜುಕೈಬಿಡಬೇಕೆಂದು ಕಾರ್ಯಕರ್ತರು ಒತ್ತಾಯಿಸಿ ಹರಾಜು ಕ್ರಮ ಖಂಡಿಸಿದರು. ಬಳಿಕ ಬ್ಯಾಂಕ್ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದ್ದರು.
ತಾಲೂಕಿನಲ್ಲಿ ಕಳೆದ ಐದಾರು ವರ್ಷಗಳಿಂದ ಬರಗಾಲ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಾಲೂಕಿನ ಕೃಷಿ ಕ್ಷೇತ್ರಸಂಪೂರ್ಣ ನೆಲಕಚ್ಚಿದೆ. ಮಳೆ ಇಲ್ಲದೆ ಬೆಳೆಗಳು ಕುಸಿದು ಬಿದ್ದಿವೆ. ಅಲ್ಲಲ್ಲಿ ಬೆಳೆದು ನಿಂತಿದ್ದ ಬೆಳೆಗಳಿಗೆ ಅಕಾಲಿಕ ಮಳೆಗಾಳಿ ಬಂದಿರುವ ಪರಿಣಾಮ ಬೆಳೆ ನಾಶವಾಗಿದೆ. ರೈತರಿಗೆ ಕೆಲಸವಿಲ್ಲ. ಕೋವಿಡ್ ಹಿನ್ನೆಲೆ ಬೆಳೆದ ಹಣ್ಣು ತರಕಾರಿ, ಈರುಳ್ಳಿ, ಮೆಣಸಿನಕಾಯಿ ಸೇರಿದಂತೆ ಹಲವಾರು ಬೆಳೆಗೆ ಸೂಕ್ತ ಮಾರುಕಟ್ಟೆ ಇಲ್ಲದೆ ರೈತರು ಆರ್ಥಿಕ ನಷ್ಟಕ್ಕೆ ತುತ್ತಾಗಿದ್ದಾರೆ. ರೈತರಿಗೆ ಸೂಕ್ತ ಕಾಲಾವಕಾಶ ನೀಡಬೇಕು. ರೈತರ ಬಂಗಾರದ ಸಾಲ ಸಂದಾಯ ಮಾಡುವ ತನಕ ಬ್ಯಾಂಕ್ ಯಾವುದೇ ಹರಾಜು ಮಾಡಬಾರದು ಎಂದು ಒತ್ತಾಯಿಸಿದರು.
ರಾಜ್ಯ ರೈತರ ಸಂಘದ ಅಧ್ಯಕ್ಷ ಈಚಘಟ್ಟದ ಸಿದ್ದವೀರಪ್ಪ, ತಾಲೂಕು ಆಧ್ಯಕ್ಷ ಕೋಟ್ರೆ ಶಂಕರಪ್ಪ, ರೈತ ಮುಖಂಡ ಬಸವರಾಜಪ್ಪ, ನಗರಾಧ್ಯಕ್ಷ ಲೋಕೇಶ್, ಕಾರ್ಯದರ್ಶಿ ಅಜಯ್, ಉಮೇಶ್, ಸದಾಶಿವಪ್ಪ, ಸಂಜೀವ್, ಶಿವು, ಚಂದ್ರಯ್ಯ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ