ಬರ ಅಧ್ಯಯನ ತಂಡದೆದುರು ಕಣ್ಣೀರಿಟ್ಟ ರೈತರು


Team Udayavani, Nov 19, 2018, 3:53 PM IST

cta-1.jpg

ಚಿತ್ರದುರ್ಗ: ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ಕೇಂದ್ರ ಬರ ಅಧ್ಯಯನ ತಂಡ ಭಾನುವಾರ ಭೇಟಿ ನೀಡಿ ಬೆಳೆ ಹಾನಿ ಅಧ್ಯಯನ ನಡೆಸಿತು. ಕೇಂದ್ರ ನೀತಿ ಆಯೋಗದ ಜಂಟಿ ಸಲಹೆಗಾರ ಮಾನಸ್‌ ಚೌಧರಿ ನೇತೃತ್ವದ ನಾಲ್ವರು ಅಧಿಕಾರಿಗಳನ್ನೊಳಗೊಂಡ ಕೇಂದ್ರ ಬರ ಅಧ್ಯಯನ ತಂಡದಲ್ಲಿ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಡೆಪ್ಯೂಟಿ ಜನರಲ್‌ ಮ್ಯಾನೇಜರ್‌ ಸತ್ಯಕುಮಾರ್‌, ಕೇಂದ್ರ ಆರ್ಥಿಕ ವೆಚ್ಚಗಳ ಇಲಾಖೆ ಜಂಟಿ ನಿರ್ದೇಶಕ ಸುಭಾಶ್ಚಂದ್ರ ಮೀನಾ ಹಾಗೂ
ಎಂಎನ್‌ಸಿಎಫ್‌ಸಿಯ ಸಹಾಯಕ ನಿರ್ದೇಶಕಿ ಡಾ| ಶಾಲಿನಿ ಸಕ್ಸೇನಾ ಇದ್ದರು.

ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಲಿಂಗದಹಳ್ಳಿ ಮೂಲಕ ಚಿತ್ರದುರ್ಗ ಜಿಲ್ಲೆಗೆ ಆಗಮಿಸಿದ ತಂಡ, ಚಳ್ಳಕೆರೆ ತಾಲೂಕಿನ ಕೆಂಚಮ್ಮನಹಳ್ಳಿ ಭೇಟಿ ನೀಡಿ ಬರ ಪರಿಸ್ಥಿತಿಯನ್ನು ಅವಲೋಕಿಸಿತು. ಅಲ್ಲಿಂದ ಪರಶುರಾಂಪುರ ಗ್ರಾಮಕ್ಕೆ ಆಗಮಿಸಿ ಹತ್ತಾರು ವರ್ಷಗಳ ಕಾಲ ಮಳೆಯಿಲ್ಲದೆ ಸಂಪೂರ್ಣ ಒಣಗಿರುವ ಕೆರೆ ಪರಿಶೀಲನೆ ನಡೆಸಿತು. ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಂಡಿರುವ ಕೆರೆ ಕಾಮಗಾರಿ ಹಾಗೂ ಜನ ಜಾನುವಾರುಗಳಿಗೆ ಮಾಡಲಾಗಿರುವ ಟ್ಯಾಂಕರ್‌ ನೀರು ಪೂರೈಕೆ ವ್ಯಸ್ಥೆಯನ್ನು ಪರಿಶೀಲಿಸಿತು. ಬಳಿಕ ತಿಮ್ಮನಹಳ್ಳಿಯ ಜಮೀನುಗಳಲ್ಲಿ ಶೇಂಗಾ ಕಾಯಿ ಕಟ್ಟದೆ ಒಣಗಿರುವ ಬೆಳೆ ವೀಕ್ಷಣೆ ಮಾಡಿದ ತಂಡದ ಸದಸ್ಯರು, ರೈತರ ಸಮಸ್ಯೆಗಳನ್ನು ಆಲಿಸಿದರು. ಪುರ್ಲೆಹಳ್ಳಿ, ನನ್ನಿವಾಳ ಗ್ರಾಮಗಳ ಬರಪೀಡಿತ ಪ್ರದೇಶ ಹಾಗೂ ಗೋಶಾಲೆಗೆ ಭೇಟಿ ನೀಡಿದರು.

ಕಣ್ಣೀರಿಟ್ಟ ರೈತರು: ಬರ ಅಧ್ಯಯನ ತಂಡದ ಎದುರು ಬೆಳೆ ಕಳೆದುಕೊಂಡ ರೈತರು ಕಣ್ಣೀರಿಟ್ಟರು. ಹೀಗೆ ಬಂದು ಹಾಗೆ ಹೋಗುವ ಕೆಲಸ ಮಾಡಬೇಡಿ. ಸತತ ಹತ್ತು ವರ್ಷಗಳಿಂದ ಜಿಲ್ಲೆಯ ರೈತರು ತೀವ್ರ ಬರಗಾಲಕ್ಕೆ ತುತ್ತಾಗಿ ಸಾಲದ ಸುಳಿಯಲ್ಲಿ ಸಿಲುಕಿದ್ದಾರೆ. ಸಾಲ ಮಾಡಿ ಬಿತ್ತನೆ ಮಾಡಿದ ಶೇಂಗಾ, ಸೂರ್ಯ ಕಾಂತಿ, ಮೆಕ್ಕೆಜೋಳ, ಈರುಳ್ಳಿ ಸೇರಿದಂತೆ ತೋಟಗಾರಿಕೆ ಬೆಳೆಗಳು ಸಂಪೂರ್ಣ ಒಣಗಿ ಹೋಗಿ ಕೋಟ್ಯಂತರ ರೂ.ಗಳ ಬೆಳೆ ಹಾನಿಯಾಗಿದೆ. ಸಾವಿರ ಅಡಿ ಕೊಳವೆಬಾವಿ ಕೊರೆಸಿದರೂ ಹನಿ ನೀರು ಬರುತ್ತಿಲ್ಲ. ಜಾನುವಾರುಗಳನ್ನು ಮಾರಾಟ ಮಾಡಿ ಉದ್ಯೋಗಕ್ಕಾಗಿ ಗುಳೆ ಹೋಗಬೇಕಾಗಿದೆ ಎಂದು ಅಹವಾಲು ಹೇಳಿಕೊಂಡರು. ಬರದ ಬವಣೆಯಿಂದ ಬೇಸತ್ತಿರುವ ರೈತರಿಗೆ ಹೆಚ್ಚಿನ ಪರಿಹಾರ ಕೊಡಿಸುವಂತೆ ಮನವಿ ಮಾಡಿದರು.

ಅಧಿಕಾರಿಗಳು ನೀಡುವ ಅಂಕಿ ಅಂಶಗಳನ್ನು ಪಡೆದು ವಾಪಸ್‌ ಹೋದರೆ ಮತ್ತೆ ಅವರು ಬರುವುದು ಬರ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಿದಾಗಲೇ. ಕೇಂದ್ರ ಬರ ಅಧ್ಯಯನ ತಂಡ “ಬಂದ ಪುಟ್ಟ ಹೋದ ಪುಟ್ಟ’ ಎನ್ನುವಂತಾಗಿದೆ. ಕೇಂದ್ರ ಬರ ಅಧ್ಯಯನ ತಂಡ ನೀಡಿದ ಬೆಳೆ ಹಾನಿ ವರದಿಯಿಂದ ಒಂದಿಷ್ಟೂ ಉಪಯೋಗವಾಗಿಲ್ಲ ಎಂದು ಆರೋಪಿಸಿದರು. 

ಸತತ ಬರದ ದವಡೆಗೆ ಸಿಲುಕಿರುವ ಜಿಲ್ಲೆಯಲ್ಲಿ ಈ ವರ್ಷ ಬೆಳೆ ಹಾನಿಯಾಗಿ ನೂರಾರು ಕೋಟಿ ರೂ. ನಷ್ಟವಾಗಿದೆ. ಕೇಂದ್ರ ತಂಡ ಬರಪೀಡಿತ ಪ್ರದೇಶಗಳಿಗೆ ಹಾಗೆ ಬಂದು ಹೀಗೆ ಹೋಗಿದ್ದು ರೈತರ ಕಣ್ಣೊರೆಸುವ ತಂತ್ರವಾಗಿದೆ ಎಂದು ಹಲವಾರು ರೈತರು ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.