ಗೋಶಾಲೆಗೆ ಮೇವು ಪೂರೈಸಿ


Team Udayavani, Jul 29, 2017, 2:13 PM IST

29-CIT-1.jpg

ಚಳ್ಳಕೆರೆ: ತಾಲೂಕಿನ ದೊಡ್ಡ ಉಳ್ಳಾರ್ತಿ ಗೋಶಾಲೆಗೆ ಮೇವು ನೀಡಬೇಕು ಎಂದು ಒತ್ತಾಯಿಸಿ ರೈತರು ಜಾನುವಾರುಗಳೊಂದಿಗೆ ರಸ್ತೆ ತಡೆದು ಶುಕ್ರವಾರ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅಖೀಲ ಭಾರತ ಕಿಸಾನ್‌ ಸಭಾದ ದೊಡ್ಡ ಉಳ್ಳಾರ್ತಿ ಕರಿಯಣ್ಣ, ಜಾನುವಾರುಗಳಿಗೆ ತಿನ್ನಲು ಮೇವಿಲ್ಲದೆ ನಿತ್ರಣಗೊಂಡಿವೆ. ಮೇವು ಪೂರೈಸುವಂತೆ ಜಿಲ್ಲಾ ಹಾಗೂ ತಾಲ್ಲೂಕು ಆಡಳಿತಕ್ಕೆ ಲಿಖೀತ ಮನವಿ ನೀಡಿದರೂ ಪ್ರಯೋಜನವಾಗಿಲ್ಲ. ಈಗಾಗಲೇ ಸರಬರಾಜು ಮಾಡಿರುವ ಮೇವು ಗುತ್ತಿಗೆದಾರರಿಗೆ ಸರ್ಕಾರ ನೀಡಬೇಕಾದ ಬಾಕಿಯನ್ನು ಪಾವತಿಸಿಲ್ಲ. ಗುತ್ತಿಗೆದಾರರು ಮೇವು ತರಲು ನಿರಾಕರಿಸಿದ್ದಾರೆ. ಜಾನುವಾರುಗಳು ಗೋಶಾಲೆಯಲ್ಲಿ ಅಸುನೀಗಿದರೆ ಅದರ ಸಂಪೂರ್ಣ ಜವಾಬ್ದಾರಿಯನ್ನು ಜಿಲ್ಲಾಡಳಿತವೇ ಹೊರಬೇಕು ಎಂದರು. 

ಪ್ರತಿಭಟನಾ ಸ್ಥಳಕ್ಕಾಗಮಿಸಿದ ಟಿ.ಸಿ. ಕಾಂತರಾಜು ಪ್ರತಿಭಟನಕಾರರೊಂದಿಗೆ ಚರ್ಚೆ ನಡೆಸಿದರು. ಬಳಿಕ ಮಾತನಾಡಿದ ಅವರು, ಪ್ರಸ್ತುತ ಮಳೆಯಿಲ್ಲದೆ ಮೇವಿನ ಕೊರತೆ ಉಂಟಾಗಿದೆ. ಜಾನುವಾರುಗಳನ್ನು ರಕ್ಷಿಸುವುದು ನಮ್ಮ ಆದ್ಯಕರ್ತವ್ಯವಾಗಿದೆ. ಈ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಈಗಾಗಲೇ ಸಮಾಲೋಚನೆ ನಡೆಸಲಾಗಿದೆ. ಬಾಕಿ ಇರುವ ಹಣ ಸರ್ಕಾರ ಬಿಡುಗಡೆ ಮಾಡಿದ ಕೂಡಲೇ ಗುತ್ತಿಗೆದಾರರನ್ನು ಕರೆಸಿ ಮೇವು ಪೂರೈಸಲು ಸೂಚನೆ ನೀಡಲಾಗುವುದು ಎಂದರು.

ತಾತ್ಕಾಲಿಕವಾಗಿ 16 ಕೋಟಿ ರೂ. ಬಾಕಿಯಲ್ಲಿ 5 ಕೋಟಿ ರೂ. ಜಿಲ್ಲಾಡಳಿತಕ್ಕೆ ತಲುಪಿದೆ. ನೂತನ ಜಿಲ್ಲಾಧಿಕಾರಿಗಳು ಅಧಿಕಾರ ವಹಿಸಿಕೊಂಡಿದ್ದು, ಎರಡೂರು ದಿನಗಳಲ್ಲಿ ಇಲ್ಲಿನ ಪರಿಸ್ಥಿತಿ ತಿಳಿಸಿ ಹಣ ಬಿಡುಗಡೆ ಮಾಡಿಸಿ ಗುತ್ತಿಗೆದಾರರಿಗೆ ಹಣ ಪಾವತಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈ ವೇಳೆ ಪ್ರತಿಭಟನಾಕಾರರು ಮೇವು ಪೂರೈಸುವ ತನಕ ಬಾರ್ಕ್‌ ಸಂಸ್ಥೆಯ ಒಳ ಆವರಣದಲ್ಲಿ ಜಾನುವಾರುಗಳನ್ನು ಮೇಯಲು ಅವಕಾಶ ಮಾಡಿಕೊಡಬೇಕು. ಮಳೆ ಬಂದಲ್ಲಿ ಗೋಶಾಲೆಗಳಲ್ಲಿನ ಎಲ್ಲ ಜಾನುವಾರುಗಳು ಖಾಲಿಯಾಗುತ್ತವೆ ಎಂದರು. ಇದಕ್ಕೆ
ಧ್ವನಿಗೂಡಿಸಿದ ತಹಶೀಲ್ದಾರ್‌ ಕಾಂತರಾಜು ಬಾರ್ಕ್‌ ಸಂಸ್ಥೆಯ ಅಧಿಕಾರಿಗಳಿಗೆ ವಾಸ್ತವ ಸ್ಥಿತಿ ತಿಳಿಸಿ ಅನುಮತಿ ನೀಡುವಂತೆ ಮನವಿ ಮಾಡಿದರು. ತಹಶೀಲ್ದಾರ್‌ ಕೋರಿಕೆ ಮೇರೆಗೆ ಪ್ರಭಾರ ವ್ಯವಸ್ಥಾಪಕ ಸಾಯಿಕುಮಾರ್‌ ಮಾತನಾಡಿ, ಇದು ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯಾಗಿದ್ದು, ಅವರ ಅನುಮತಿ ಸಿಕ್ಕ ನಂತರ ಜಾನುವಾರುಗಳನ್ನು ಮೇಯಲು ಬಿಡಲಾಗುವುದು.ಇದಕ್ಕೆ ಬಾರ್ಕ್‌ ಸಂಸ್ಥೆ ವಿಧಿಸುವ ಷರತ್ತುಗಳಿಗೆ ರೈತರು ಒಪ್ಪಿಗೆ
ನೀಡಬೇಕು ಎಂದರು. 

ರೈತ ಸಂಘದ ಜಿಲ್ಲಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಮಾತನಾಡಿ, ಜಿಲ್ಲಾ ಆಡಳಿತ ತಾಲೂಕಿನ ಎಲ್ಲ ಗೋಶಾಲೆಗಳನ್ನು ಮುಚ್ಚದೆ ಸಾಧ್ಯವಾದಷ್ಟು ಮಟ್ಟಿಗೆ ಮೇವು ಸರಬರಾಜು ಮಾಡಿ, ಜಾನುವಾರುಗಳ ರಕ್ಷಣೆಗೆ ಮುಂದಾಗಬೇಕು ಎಂದು ಮನವಿ ಮಾಡಿದರು. ಗ್ರಾಪಂ ಅಧ್ಯಕ್ಷ ಗೋವಿಂದರಾಜು,
ಗ್ರಾಮದ ಮುಖಂಡರಾದ ಕರಿಯಣ್ಣ, ಶ್ರೀಕಂಠಮೂರ್ತಿ, ದುಗ್ಗಾವರ ರಂಗಣ್ಣ, ವರವಿನ ಬೋರಯ್ಯ, ತಿಮ್ಮಾರೆಡ್ಡಿ, ಗಂಗಾಧರ, ಓಂಕಾರಪ್ಪ, ನಾಗರಾಜು, ಬೋರಯ್ಯ, ವರದರಾಜು, ಓಬಯ್ಯ, ಚನ್ನಕೇಶವ ಮೂರ್ತಿ, ಅಜ್ಜಯ್ಯ ಇತರರು ಇದ್ದರು. 

ಟಾಪ್ ನ್ಯೂಸ್

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.