ಕ್ಷೇತ್ರ ಹೊಂದಾಣಿಕೆಯೇ ಸವಾಲು


Team Udayavani, Feb 14, 2021, 3:18 PM IST

Field coordination is the challenge

ಚಿತ್ರದುರ್ಗ: ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗೆ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ತಯಾರಿ ನಡೆಸುತ್ತಿದ್ದು, ಈ ನಿಟ್ಟಿನಲ್ಲಿ ಕ್ಷೇತ್ರಗಳ ಪುನರ್‌ ವಿಂಗಡಣೆ ಮಾಡಲು ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದೆ.

ಈ ನಿಟ್ಟಿನಲ್ಲಿ ಜಿಲ್ಲೆಯ ಚುನಾವಣಾ ತಹಶೀಲ್ದಾರ್‌ ಹಾಗೂ ಸಿಬ್ಬಂದಿ ಅಗತ್ಯ ಮಾಹಿತಿ ಸಿದ್ಧಪಡಿಸಿಕೊಂಡು ಫೆ. 22 ರಂದು ಚುನಾವಣಾ ಆಯೋಗದ ಕಚೇರಿಗೆ ತೆರಳಲು ಆಯೋಗ ಅ ಧಿಸೂಚನೆ ನೀಡಿದೆ. ಚುನಾವಣಾ ಆಯೋಗ ಜಿಲ್ಲೆಯ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಸ್ಥಾನಗಳನ್ನು ನಿಗ ದಿಪಡಿಸಿದ್ದು ಅದಕ್ಕೆ ಸಂಬಂಧಿ ಸಿ ಕ್ಷೇತ್ರಗಳನ್ನು ಹೊಂದಾಣಿಕೆ ಮಾಡುವ ಸವಾಲು ಈಗ ಜಿಲ್ಲಾಡಳಿತದ ಮುಂದಿದೆ. ಜಿಲ್ಲಾ ಪಂಚಾಯಿತಿಯಲ್ಲಿ ಈವರೆಗೆ 37 ಜಿಪಂ ಕ್ಷೇತ್ರಗಳಿದ್ದವು. ಚುನಾವಣಾ ಆಯೋಗ ಇದಕ್ಕೆ ಮತ್ತೆ 4 ಕ್ಷೇತ್ರಗಳನ್ನು ಸೇರಿಸಲು ಸೂಚಿಸಿದ್ದು, ಇದರಿಂದಾಗಿ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಸಂಖ್ಯೆ 41ಕ್ಕೆ ಏರಿಕೆಯಾಗಲಿದೆ.

ಚಿತ್ರದುರ್ಗ, ಚಳ್ಳಕೆರೆ, ಹೊಳಲ್ಕೆರೆ ಹಾಗೂಹಿರಿಯೂರು ತಾಲೂಕಿನಲ್ಲಿ ತಲಾ ಒಂದೊಂದು ಜಿಪಂ ಕ್ಷೇತ್ರಗಳು  ಹೆಚ್ಚಳವಾಗಲಿದ್ದು, ಮೊಳಕಾಲ್ಮೂರು ಹಾಗೂ ಹೊಸದುರ್ಗ ತಾಲೂಕಿನ ಜಿಪಂ ಕ್ಷೇತ್ರಗಳಲ್ಲಿ ಯಾವುದೇ ಬದಲಾವಣೆ ಇಲ್ಲ.

ಇದನ್ನೂ ಓದಿ:ಶಿಥಿಲಾವಸ್ಥೆಯ ಕಚೇರಿಯನ್ನು ಸ್ವತಃ ಸ್ವಚ್ಚಗೊಳಿಸಿದ ಕಲಬುರಗಿ ತಹಶೀಲ್ದಾರ್

ತಾಲೂಕು ಪಂಚಾಯಿತಿಗೆ ಶಾಕ್‌: ರಾಜ್ಯದಲ್ಲಿ ಈಗಾಗಲೇ ತಾಲೂಕು ಪಂಚಾಯಿತಿಗಳನ್ನು ರದ್ದು ಮಾಡಬೇಕು ಎಂಬ ಚರ್ಚೆ ನಡೆಯುತ್ತಿದ್ದು, ಈ ಬಗ್ಗೆ ಕೇಂದ್ರಕ್ಕೆ ಶಿಫಾರಸು ಕೂಡಾ ಕಳುಹಿಸಲಾಗುತ್ತಿದೆ. ಇದರಿಂದ ಸಾಕಷ್ಟು ತಾಲೂಕು ಪಂಚಾಯಿತಿ ಸದಸ್ಯರು, ಅಧ್ಯಕ್ಷರು ಅಸಮಾಧಾನ ವ್ಯಕ್ತಪಡಿಸಿ, ರದ್ದು ಮಾಡುವ ಬದಲು ಅನುದಾನ ಕೊಡಿ ಎಂದು ಅಭಿಪ್ರಾಯಪಟ್ಟಿದ್ದರು. ಈಗ ರಾಜ್ಯ ಚುನಾವಣಾ ಆಯೋಗ ತಾಲೂಕು ಪಂಚಾಯಿತಿಗಳಲ್ಲೂ ಮರು ಹೊಂದಾಣಿಕೆ ಅಥವಾ ಪುನರ್‌ ವಿಂಗಡಣೆ ಮಾಡಲು ಸೂಚನೆ ನೀಡಿದೆ. ಜಿಲ್ಲಾ ಪಂಚಾಯಿತಿಯಲ್ಲಿ 4 ಕ್ಷೇತ್ರಗಳು ಹೆಚ್ಚಾದರೆ, ತಾಲೂಕು ಪಂಚಾಯಿತಿಯಲ್ಲಿ ಬರೋಬ್ಬರಿ 27 ಕ್ಷೇತ್ರಗಳು ಕಡಿಮೆಯಾಗಲಿವೆ.

ಕ್ಷೇತ್ರ ಪುನರ್‌ ವಿಂಗಡಣೆ ಮಾನದಂಡಗಳೇನು?: ಪ್ರತಿ ಜಿಲ್ಲಾ ಪಂಚಾಯಿತಿಗೆ 35 ರಿಂದ 40 ಸಾವಿರ ಜನಸಂಖ್ಯೆ ಇರುವಂತೆ ನೋಡಿಕೊಂಡು, ಯಾವುದೇ ಗ್ರಾಮ ಪಂಚಾಯಿತಿಗಳನ್ನು ವಿಭಜನೆ ಮಾಡದೆ ಜಿಪಂ ಕ್ಷೇತ್ರ ರಚನೆ ಮಾಡಬೇಕು. ಸಂಚಾರ, ಸಂಪರ್ಕ ವ್ಯವಸ್ಥೆ, ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ನದಿ, ಜಲಾಶಯ, ಬೆಟ್ಟ, ಗುಡ್ಡ, ಅರಣ್ಯ ಇತ್ಯಾದಿಗಳನ್ನು ಪಟ್ಟಿ ಮಾಡಬೇಕು. ಆಯಾ ಕ್ಷೇತ್ರ ವ್ಯಾಪ್ತಿಯಲ್ಲಿ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ಗ್ರಾಮದ ಹೆಸರನ್ನೇ ಕ್ಷೇತ್ರದ ಹೆಸರನ್ನಾಗಿ ನಾಮಕರಣ ಮಾಡಬೇಕು. 2011ನೇ ಜನಗಣತಿ ಆಧಾರದಲ್ಲಿ ಯಾವುದೇ ಬದಲಾವಣೆ ಇಲ್ಲದಿದ್ದರೂ, ಕ್ಷೇತ್ರವಾರು ಜನಸಂಖ್ಯೆಯಲ್ಲಿ ಆಗಿರುವ ಗಣನೀಯ ಬದಲಾವಣೆಗಳನ್ನು ಗಮನಿಸಿ ಹೊಸ ಕ್ಷೇತ್ರಗಳನ್ನು ರಚಿಸಬೇಕಿದೆ.

ಜಿಲ್ಲಾಡಳಿತ ಏನು ಮಾಡಲಿದೆ?: ಹೊಸ ಜಿಲ್ಲಾ  ಪಂಚಾಯಿತಿಕ್ಷೇತ್ರಗಳು ಕೇವಲ 4 ಮಾತ್ರ ಹೆಚ್ಚಾಗುವುದರಿಂದ ಇಡೀ ತಾಲೂಕನ್ನು ಮುಂದಿಟ್ಟುಕೊಂಡು ನಾಲ್ಕು ತಾಲೂಕುಗಳಲ್ಲಿ ನಾಲ್ಕು ಕ್ಷೇತ್ರಗಳನ್ನು ಹೊಂದಿಸಬಹುದು. ಆದರೆ ಈಗ ಇರುವ 136 ತಾಲೂಕು ಪಂಚಾಯಿತಿ ಕ್ಷೇತ್ರಗಳನ್ನು 109ಕ್ಕೆ ಇಳಿಸುವ ಸವಾಲಿದೆ. ಪ್ರತಿ ತಾಲೂಕಿನಲ್ಲಿ ಸಮೀಕ್ಷೆ ನಡೆಸಿ ಭೌಗೋಳಿಕವಾಗಿ ಗಮನಿಸಿ, ಜನಸಂಖ್ಯೆ ಮಿತಿ ಇಟ್ಟುಕೊಂಡು ಚುನಾವಣಾ ಆಯೋಗದ ನಿಬಂಧನೆಗಳಂತೆ ಕ್ಷೇತ್ರ ಪುನರ್‌ ವಿಂಗಡಣೆ ಮಾಡಿಕೊಂಡು ಫೆ. 22 ರಂದು ಚುನಾವಣಾ ತಹಶೀಲ್ದಾರ್‌ ಆಯೋಗದ ಮುಂದೆ ಹೋಗಬೇಕಿದೆ.

ತಿಪ್ಪೇಸ್ವಾಮಿ ನಾಕೀಕೆರೆ

ಟಾಪ್ ನ್ಯೂಸ್

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.