ಎಂಪಿಎಂ ಕಾರ್ಖಾನೆಗೆ ಅರಣ್ಯಲೀಸ್ ಬೇಡ
ಪಶ್ಚಿಮಘಟ್ಟ ಪ್ರದೇಶದ ಅರಣ್ಯ ನಾಶವಾದರೆ ಸಕಲ ಜೀವರಾಶಿಗಳಿಗೆ ಕುತ್ತು
Team Udayavani, Nov 25, 2020, 7:39 PM IST
ಚಿತ್ರದುರ್ಗ: ಮಲೆನಾಡಿನ ಪಶ್ಚಿಮಘಟ್ಟ ಶ್ರೇಣಿಯ ನಿತ್ಯಹರಿದ್ವರ್ಣ ಸಸ್ಯರಾಶಿ ಹೊಂದಿರುವ ಅರಣ್ಯವನ್ನುಸರ್ಕಾರ ಮತ್ತೆ ಭದ್ರಾವತಿಯ ಮೈಸೂರು ಪೇಪರ್ ಮಿಲ್(ಎಂಪಿಎಂ) ಕಾರ್ಖಾನೆಗೆ ನೀಡಲು ಮುಂದಾಗಿದ್ದು, ಇದರ ವಿರುದ್ಧ ರೈತರು, ಪರಿಸರ ಪ್ರೇಮಿಗಳು ಹಾಗೂ ಈ ಭಾಗದ ಜನತೆ ಎಚ್ಚೆತ್ತುಕೊಳ್ಳಬೇಕು ಎಂದು ಸಾಮಾಜಿಕ ಕಾರ್ಯಕರ್ತಶ್ರೀಪಾಲ್ ಹೇಳಿದರು.
ರೈತ ಸಂಘ ಹಾಗೂ ಹಸಿರುಸೇನೆಯಿಂದನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, 1980 ರಲ್ಲಿ ಎಂಪಿಎಂಗೆ 20005.42 ಹೆಕ್ಟೇರ್ ಅರಣ್ಯ ಭೂಮಿಯನ್ನು 40ವರ್ಷಗಳ ಸೀಮಿತ ಅವ ಧಿಗೆ ಲೀಸ್ ಗೆ ನೀಡಲಾಗಿತ್ತು. ಈ ವರ್ಷಕ್ಕೆ ಈ ಒಪ್ಪಂದ ಮುಗಿದಿದೆ ಎಂದು ತಿಳಿಸಿದರು.
ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಹಾಗೂ ಚಿಕ್ಕಮಗಳೂರು ಜಿಲ್ಲೆ ವ್ಯಾಪ್ತಿಗೆ ಹರಡಿಕೊಂಡಿರುವ ಈ ಭೂಮಿಯಲ್ಲಿ ಅಕೇಶಿಯಾ, ನೀಲಗಿರಿ, ಪೈನೂಸ್ ಪ್ಲಾಂಟೇಶನ್ ಮಾಡಲಾಗಿದೆ. ತಕ್ಷಣ ಇದೆಲ್ಲವನ್ನೂ ತೆರವುಗೊಳಿಸಿ ಸ್ವಾಭಾವಿಕ ಅರಣ್ಯ ಬೆಳೆಸಬೇಕು. 40 ವರ್ಷದ ಗುತ್ತಿಗೆ ಅವ ಧಿ ಮುಗಿದ ನಂತರ ಸರ್ಕಾರ ಮತ್ತೆ ಲೀಸ್ಗೆ ನೀಡಲು ಟೆಂಡರ್ ಕರೆದಿದೆ. ಈಗಾಗಲೇ ಎಂಪಿಎಂ ಕಾರ್ಖಾನೆ ಮುಚ್ಚಿ 5 ವರ್ಷಗಳಾಗಿವೆ. ಅಲ್ಲಿನ ಎಲ್ಲಾ ಯಂತ್ರೋಪಕರಣಗಳು ಹಾಳಾಗಿವೆ. ಅಲ್ಲಿ ಕೆಲಸ ಮಾಡಿದ್ದ ಕಾರ್ಮಿಕರಿಗೆ ಕೊಡಬೇಕಾದಭತ್ಯೆಗಳನ್ನು ಸರಿಯಾಗಿ ನೀಡಿಲ್ಲ. ಹೀಗಿರುವಾಗ ಮತ್ತೆ ಅರಣ್ಯ ಭೂಮಿಯನ್ನು ಲೀಸ್ಗೆ ನೀಡಿ ಕಾರ್ಖಾನೆ ಆರಂಭಿಸುವುದು ಅಸಾಧ್ಯ. ಈ ನಿಟ್ಟಿನಲ್ಲಿ ಪರಿಸರದಲ್ಲಿ ಆಗುತ್ತಿರುವ ಬದಲಾವಣೆ ತಡೆಯಲು ಪಶ್ಚಿಮ ಘಟ್ಟದಲ್ಲಿ ಅರಣ್ಯ ಬೆಳೆಸಲು ಮುಂದಾಗಬೇಕು ಎಂದು ಒತ್ತಾಯಿಸಿದರು.
ಪರಿಸರ, ನೆಲ, ಜಲವನ್ನೆಲ್ಲಾ ಖಾಸಗಿಯವರಿಗೆಮಾರಾಟ ಮಾಡಿ ಬದುಕನ್ನು ದಿವಾಳಿಯಾಗಿಸುವ ಮುನ್ನ ಬೀದಿಗಿಳಿದು ಹೋರಾಟ ಮಾಡುವ ಅನಿವಾರ್ಯತೆಯಿದೆ. ಕಾಪೊìರೇಟ್ ಕಂಪನಿಗಳ ಬಗ್ಗೆ ಕಾಳಜಿಯಿರುವ ಸರ್ಕಾರ ಅರಣ್ಯ ಭೂಮಿಯಲ್ಲಿ ಪ್ಲಾಂಟೇಷನ್ ಬೆಳೆಸುವುದು ಬೇಡ. ದೊಡ್ಡ ಮಟ್ಟದ ಹೋರಾಟ ಮಾಡೋಣ ಎಂದು ಆಹ್ವಾನಿಸಿದರು.
ಇದನ್ನೂ ಓದಿ:ಕುಮಾರವ್ಯಾಸನ ತಾಳೆಗರಿ ಹಸ್ತಪ್ರತಿ ಸಂರಕ್ಷಣೆ
ಪತ್ರಕರ್ತ ಶಶಿ ಸಂಪಳ್ಳಿ ಮಾತನಾಡಿ,ಈಗಾಗಲೇ ಎಲ್ಲವನ್ನು ಒಂದೊಂದಾಗಿ ಖಾಸಗೀಕರಣಗೊಳಿಸುತ್ತಿರುವ ರಾಜ್ಯ ಸರ್ಕಾರ ಎಂ.ಪಿ.ಎಂ.ಕಾರ್ಖಾನೆಗೆ ಕೊಟ್ಟ ಅರಣ್ಯಭೂಮಿಅವ ಧಿ ಮುಗಿದಿದ್ದರೂ ಮತ್ತೆ ಖಾಸಗಿಯವರಿಗೆ ಗುತ್ತಿಗೆ ನೀಡಲು ಸಂಚು ಹೂಡುತ್ತಿದೆ. ಇದರಿಂದ ಇಡೀ ಪರಿಸರ ನಾಶವಾಗಲಿದೆ. ಭೂಮಿ ನಂಬಿಕೊಂಡಿರುವ ರೈತ, ಅಲ್ಲಿನ ಸಕಲ ಜೀವರಾಶಿಗಳಿಗೆ ಕುತ್ತು ಬರಲಿದೆ. ಇನ್ನಾದರೂ ಸಂಘಟನೆಗಳು, ಹೋರಾಟಗಾರರು, ರೈತರು ಬೀದಿಗಿಳಿದು ದೊಡ್ಡ ಮಟ್ಟದ ಹೋರಾಟ ಮಾಡಬೇಕಿದೆ ಎಂದರು.
ಡಿ.ಎಸ್.ಎಸ್. ರಾಜ್ಯ ಸಂಚಾಲಕ ಶಿವಮೊಗ್ಗದಗುರುಮೂರ್ತಿ ಮಾಡನಾಡಿ, ಎಂ.ಪಿ.ಎಂ.ಗೆ ನೀಡಿದ್ದ 82 ಸಾವಿರ ಎಕರೆ ಅರಣ್ಯಭೂಮಿಯ ನಲವತ್ತು ವರ್ಷದಗುತ್ತಿಗೆ ಅವಧಿ ಪೂರ್ಣಗೊಂಡಿದ್ದರು ಮತ್ತೆ ನಲವತ್ತು ವರ್ಷ ಮುಂದುವರೆಸಿ ಖಾಸಗೀಕರಣಗೊಳಿಸಲು ಬಿಡಬಾರದು. ಆದಿತ್ಯ ಬಿರ್ಲಾ ಸಂಸ್ಥೆಗೆ ಕೊಡುವುದಾಗಿಹೇಳಿದಾಗ ನಾವುಗಳು ವಿರೋ ಧಿಸಿದ್ದೆವು. ಹಾಗಾಗಿ ಈಗ ಶಿವಮೊಗ್ಗ, ಚಿತ್ರದುರ್ಗ ಜಿಲ್ಲೆಯ ಜನರು, ರೈತರು, ಹೋರಾಟಗಾರರಲ್ಲಿ ಜಾಗ್ರತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ. ಇದೊಂದು ಜನಾಂದೋಲನವಾಗಬೇಕು ಎನ್ನುವುದು ಉದ್ದೇಶ ಎಂದು ಹೇಳಿದರು.
ಸ್ವರಾಜ್ ಇಂಡಿಯಾ ಪಕ್ಷದ ಜಿಲ್ಲಾಧ್ಯಕ್ಷ ಜೆ.ಯಾದವರೆಡ್ಡಿ ಮಾತನಾಡಿ, ಪಶ್ಚಿಮಘಟ್ಟಗಳ ಕಾಡು ನಾಶವಾದರೆ ಮನುಷ್ಯನ ಬದುಕಿಗೆ ಕೊಳ್ಳಿಯಿಟ್ಟಂತಾಗುತ್ತದೆ. ಅಲ್ಲಿ ನೀಲಗಿರಿ, ಅಕೇಷಿಯಾ ಬೆಳೆಸುವುದು ಬೇಡ. ಇದರಿಂದ ಪರಿಸರ ನಾಶವಾಗುತ್ತದೆ ಎಂದರು.
ರೈತ ಸಂಘದ ಜಿಲ್ಲಾಧ್ಯಕ್ಷ ಬಸ್ತಿಹಳ್ಳಿ ಜಿ.ಸುರೇಶ್ ಬಾಬು ಮಾತನಾಡಿ, ರೈತರು ಜಾಗ್ರತರಾಗುವವರೆಗೆ ಸರ್ಕಾರ ತನ್ನ ಹಠಮಾರಿ ಧೋರಣೆಯಿಂದಹಿಂದೆ ಸರಿಯುವುದಿಲ್ಲ. ನೆಲ, ಜಲ, ಅರಣ್ಯವನ್ನು ಉಳಿಸಿಕೊಳ್ಳಬೇಕಿದೆ. ಎಲ್ಲಾ ಸರ್ಕಾರಗಳು ಲಾಭಕ್ಕೆ ನಿಂತಿವೆ. ಸುಗ್ರೀವಾಜ್ಞೆ ಮೂಲಕ ಭೂಸುಧಾರಣೆ ಕಾಯಿದೆ ಜಾರಿಗೆ ತಂದಿರುವ ರಾಜ್ಯ ಸರ್ಕಾರ ವಿದ್ಯುತ್ ದರ ಹೆಚ್ಚಿಸಿ ಜನಸಾಮಾನ್ಯರ ಮೇಲೆ ಹೊರೆ ಹೇರಿದೆ. ದೇಶದ ಸಂಪತ್ತನ್ನು ರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿ ಎಂದು ತಿಳಿಸಿದರು. ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ನುಲೇನೂರು ಶಂಕ್ರಪ್ಪ, ಹಿರಿಯ ಉಪಾಧ್ಯಕ್ಷ ಕೆ.ಪಿ.ಭೂತಯ್ಯ, ಹೊರಕೇರಪ್ಪ,ಕಮ್ಯುನಿಸ್ಟ್ ಪಕ್ಷದ ಜಿ.ಸಿ.ಸುರೇಶ್ಬಾಬು, ರವಿಕುಮಾರ್ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ
Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ
Uttara Kannada BJP; ಅನಂತ್ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ
MUST WATCH
ಹೊಸ ಸೇರ್ಪಡೆ
Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ
Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ
Mukhtar Ansari: ಕುಖ್ಯಾತ ಗ್ಯಾಂಗ್ಸ್ಟರ್, 5 ಬಾರಿ ಶಾಸಕ ಅನ್ಸಾರಿ ಸಾವು
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!