ಮೊದಲ ಮಳೆ: ಕೊಚ್ಚಿ ಹೋದ ಬೆಳೆ

•ಆಲಿಕಲ್ಲು ಮಳೆಯಿಂದ ಬೆಳೆ ಹಾನಿ •ಬತ್ತಿ ಹೋಗಿದ್ದ ವೇದಾವತಿ-ಸುವರ್ಣಮುಖೀ ನದಿಗಳಿಗೆ ಜೀವ ಕಳೆ

Team Udayavani, May 28, 2019, 9:02 AM IST

cd-tdy-1..

ಚಿತ್ರದುರ್ಗ: ಬಿರು ಬಿಸಿಲಿನಿಂದ ಬೆಂದು ಬಸವಳಿದಿದ್ದ ಜಿಲ್ಲೆಯ ಜನರಿಗೆ ಭಾನುವಾರ ರಾತ್ರಿ ಸುರಿದ ಗುಡುಗು, ಸಿಡಿಲು, ಬಿರುಗಾಳಿ ಸಹಿತ ಆಲಿಕಲ್ಲು ಮಳೆ ತಂಪೆರೆದಿದೆ. ಆದರೆ ಇದೇ ವೇಳೆ 174 ಎಕರೆಯಲ್ಲಿನ ಅಡಿಕೆ, ಬಾಳೆ, ಪಪ್ಪಾಯಿ ಫಸಲು ಹಾನಿಯಾಗಿದ್ದು, 18.11 ಲಕ್ಷ ರೂ. ನಷ್ಟವಾಗಿರಬಹುದು ಎಂದು ಅಂದಾಜಿಸಲಾಗಿದೆ.

ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ, ಧರ್ಮಪುರ ಹೋಬಳಿಯ ಮ್ಯಾದನಹೊಳೆ, ಸಮುದ್ರದಹಳ್ಳಿ, ಲಕ್ಕನಾಳ್‌, ಯರಕೇನಾಗೇನಹಳ್ಳಿ, ಚಿಲ್ಲಹಳ್ಳಿ, ಕಂಬದಹಳ್ಳಿ, ಕಂಬತ್ತನಹಳ್ಳಿ, ರಂಗನಾಥಪುರ, ಆದಿವಾಲ ಗೊಲ್ಲರಹಟ್ಟಿ, ವೇಣುಕಲುಗುಡ್ಡ, ಹೂವಿನಹೊಳೆ, ಟಿ. ನಾಗೇನಹಳ್ಳಿ ಮತ್ತಿತರ ಗ್ರಾಮಗಳ ಅಡಿಕೆ, ಬಾಳೆ, ಪಪ್ಪಾಯಿ ಸೇರಿದಂತೆ ಮತ್ತಿತರ ತೋಟಗಾರಿಕಾ ಬೆಳೆ ಸಂಪೂರ್ಣ ನೆಲ ಕಚ್ಚಿದೆ.

ಮ್ಯಾದನಹೊಳೆ, ಸಮುದ್ರದಹಳ್ಳಿಯ ರೈತ ದೇವರಾಜ್‌ ಅವರ 4 ಎಕರೆ ಅಡಿಕೆ, ಬಾಳೆ, ರಂಗನಾಥ ಗೌಡರ 11 ಎಕರೆಯಲ್ಲಿದ್ದ ಅಡಿಕೆ, ಬಾಳೆ ಮತ್ತು ಪಪ್ಪಾಯಿ, ಎಸ್‌.ಎನ್‌. ಭೂಕಾಂತ್‌ ಅವರ 1 ಎಕರೆ ಅಡಿಕೆ, ಯಶೋಧರ ಅವರ ಒಂದೂವರೆ ಎಕರೆ ಅಡಿಕೆ, ಎಸ್‌.ಎನ್‌. ಮೂರ್ಕಣ್ಣಪ್ಪರವರ 3 ಎಕರೆ ಅಡಿಕೆ, ಎಸ್‌.ಆರ್‌. ರಂಗನಾಥ ಅವರ 2 ಎಕರೆ ಅಡಿಕೆ, ಎಚ್.ಎಚ್. ರಾಜಣ್ಣರವರ 2 ಎಕರೆ ಅಡಿಕೆ, ಎಸ್‌.ಆರ್‌.ನಾರಾಯಣ ಅವರ 2 ಎಕರೆ ಅಡಿಕೆ, ಎಸ್‌.ಕೆ. ಬಸವರಾಜ್‌ ಅವರ 1 ಎಕರೆ ಅಡಿಕೆ, ಎಸ್‌.ಕೆ. ಕಣ್ಮೇಶ್‌ ಅವರ 2 ಎಕರೆ ಅಡಿಕೆ, ಎಸ್‌.ಬಿ. ಮಹಲಿಂಗಪ್ಪರವರ ಒಂದೂವರೆ ಎಕರೆ ಅಡಿಕೆ, ಎಸ್‌.ಕೆ. ಶಿವಣ್ಣರವರ 1 ಎಕರೆ ಅಡಿಕೆ, ಎಸ್‌.ಎನ್‌.ಹೆಂಜಾರಪ್ಪ ಒಂದೂವರೆ ಎಕರೆ ಅಡಿಕೆ, ಸಿದ್ದಪ್ಪ ಅವರ ಒಂದೂವರೆ ಎಕರೆ ಅಡಿಕೆ, ಎಸ್‌.ಎಚ್. ಹೊರಕೇರಪ್ಪ ಅವರ 2 ಎಕರೆ ಅಡಿಕೆ, ಎಸ್‌.ಬಿ. ಹಂಪಣ್ಣ ಅವರ 1 ಎಕರೆ ಅಡಿಕೆ, ಕೇಶವಮೂರ್ತಿಯವರ 2 ಎಕರೆ ಅಡಿಕೆ ಸೇರಿದಂತೆ ರೈತರ ಹತ್ತಾರು ಹೆಕ್ಟೇರ್‌ ಪ್ರದೇಶದಲ್ಲಿನ ಫಸಲಿಗೆ ಬಂದಿದ್ದ ಅಡಿಕೆ, ಬಾಳೆ, ಪಪ್ಪಾಯಿ, ದಾಳಿಂಬೆ ಆಲಿಕಲ್ಲು ಮಳೆಯಿಂದಾಗಿ ನಾಶವಾಗಿವೆ. ಅಡಿಕೆ ತೋಟಗಳಲ್ಲಿ ಅಡಿಕೆ ಕಾಯಿಗಳು ಗಾಳಿ ಮತ್ತು ಆಲಿಕಲ್ಲು ಮಳೆಗೆ ನೆಲಕ್ಕುರುಳಿವೆ. ಅಲ್ಲದೆ ನೂರಾರು ಅಡಿಕೆ ಮರಗಳು ಧರಾಶಾಹಿಯಾಗಿವೆ.

ಧರ್ಮಪುರ, ಜವನಗೊಂಡನಹಳ್ಳಿ ಹೋಬಳಿಯ ಕೆಲವು ಹಳ್ಳಿಗಳಲ್ಲಿ ಸುರಿದ ಮಳೆಯಿಂದಾಗಿ ಕೂಡ್ಲಹಳ್ಳಿ ಸಮೀಪ ಹರಿಯುವ ವೇದಾವತಿ ಮತ್ತು ಸುವರ್ಣಮುಖೀ ನದಿಗಳಲ್ಲಿ ನೀರು ಹರಿದಿದೆ. ಅಲ್ಲದೆ ಗೋಕಟ್ಟೆ, ಚೆಕ್‌ಡ್ಯಾಂಗಳು ಒಂದೇ ಮಳೆಗೆ ಭರ್ತಿಯಾಗಿವೆ.

ಬಿರುಗಾಳಿ ಮಳೆಗೆ ಬಾಳೆ ತೋಟಗಳೂ ಹಾನಿಗೀಡಾಗಿವೆ. ಫಸಲಿಗೆ ಬಂದಿದ್ದ ಬಾಳೆ ಕಂದುಗಳು ಮುರಿದುಬಿದ್ದಿವೆ. ಇನ್ನೊಂದು ತಿಂಗಳಲ್ಲಿ ಬಾಳೆಕಾಯಿ ಗೊನೆಗಳು ಕಟಾವಿಗೆ ಬರುತ್ತಿದ್ದವು. ಮಾರುಕಟ್ಟೆಯಲ್ಲಿ ಉತ್ತಮ ದರ ಇದ್ದು ಬೆಳೆಗಾರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವಂತಾಗಿದೆ. ಫಸಲಿಗೆ ಬಂದಿದ್ದ ಪಪ್ಪಾಯಿ ತೋಟಗಳಲ್ಲಿನ ಪಪ್ಪಾಯಿ ಹಣ್ಣುಗಳು ನೆಲಕ್ಕುರುಳಿದ್ದು ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ಅಡಿಕೆ, ತೆಂಗಿನ ತೋಟ ಉಳಿಸಿಕೊಳ್ಳಲು ಉತ್ತಮ ಮಳೆಯಾಗಿರುವ ಸಂತೋಷ ಒಂದು ಕಡೆಯಾದರೆ, ಅಡಿಕೆ ಕಾಯಿ ಬಿದ್ದಿರುವುದು, ಬಾಳೆಗೊನೆ ಮತ್ತು ಅಡಿಕೆ ಮರಗಳು ನೆಲಕ್ಕುರುಳಿರುವುದು ರೈತರಲ್ಲಿ ಆಘಾತ ಮೂಡಿಸಿದೆ.

ಟಾಪ್ ನ್ಯೂಸ್

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.