ಸಂಚಾರಿ ನಿಯಮ ಪಾಲಿಸಿ: ಬಸವರಾಜ್
Team Udayavani, Aug 29, 2020, 8:39 PM IST
ಮೊಳಕಾಲ್ಮೂರು: ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಬ್ಬ ವಾಹನ ಚಾಲಕರು ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದಲ್ಲಿ ರಸ್ತೆ ಅಪಘಾತ ತಡೆಯಲು ಸಾಧ್ಯ ಎಂದು ಪಿಎಸ್ಐ ಎಂ.ಕೆ. ಬಸವರಾಜ್ ತಿಳಿಸಿದರು.
ಪಟ್ಟಣದಲ್ಲಿ ವಾಹನ ಚಾಲಕರ ಟ್ರೇಡ್ ಯೂನಿಯನ್ ಘಟಕ ವತಿಯಿಂದ ಆಯೋಜಿಸಿದ್ದ ಚಾಲಕರ ಗುರುತಿನ ಚೀಟಿ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಸ್ತೆಗಳಲ್ಲಿ ಸಂಚರಿಸುವ ಆಟೋ, ಟ್ರಾಫಿಕ್ಸ್ ಹಾಗೂ ಇನ್ನಿತರ ವಾಹನಗಳ ಚಾಲಕರು ವಾಹನ ಚಾಲನಾ ಪರವಾನಗಿ ಪಡೆದುಕೊಂಡಲ್ಲಿ ಮಾತ್ರ ವಾಹನ ಚಲಾಯಿಸಬೇಕು. ವಾಹನ ಚಾಲಕರು ಆರ್.ಟಿ.ಒ ಕಚೇರಿಯ ಸಂಚಾರಿ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು ಎಂದರು. ತಹಶೀಲ್ದಾರ್ ಮಲ್ಲಿಕಾರ್ಜುನ ಮಾತನಾಡಿ, ವಾಹನ ಚಾಲಕರು ರಸ್ತೆ ನಿಯಮವನ್ನು ಸರಿಯಾಗಿ ಪಾಲಿಸಿದ್ದಲ್ಲಿ ಚಾಲಕರು ಸುರಕ್ಷಿತವಾ ಗಿರಲು ಸಾಧ್ಯ. ವಾಹನ ಚಾಲಕರೊಂದಿಗೆ ಪ್ರಯಾಣಿಸುವ ಪ್ರಯಾಣಿಕರನ್ನು ರಕ್ಷಿಸುವ ಮೂಲಕ ಚಾಲನೆ ಮಾಡಬೇಕು. ವಾಹನ ಚಾಲನೆ ಮಾಡುವ ಸಂದರ್ಭದಲ್ಲಿ ಮೊಬೈಲ್ನಲ್ಲಿ ಮಾತನಾಡಬಾರದು ಎಂದರು.
ತಾಪಂ ಇಒ ಪ್ರಕಾಶ್, ಕಾರ್ಮಿಕ ಇಲಾಖೆ ಅಧಿ ಕಾರಿ ಕುಸುಮ, ಸಿಪಿಐ ಎಂ.ಎನ್.ಎಚ್. ಮಾರಣ್ಣ, ನಾರಾಯಣಸ್ವಾಮಿ, ಗಿರೀಶ್, ಸೈಯದ್ ಸಾದತ್, ನೂರ್ ಮಹಮ್ಮದ್, ಮಂಜು, ಬಿ.ಪಿ.ಮಂಜುನಾಥ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ