ರಿಯಾಯತಿ ದರದಲ್ಲಿ ಕಲ್ಲು-ಮರಳು ಸಿಗಲಿ

•ಅಧಿಕಾರಿಗಳಿಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ರಾಜಶೇಖರ ಪಾಟೀಲ್ ಸೂಚನೆ

Team Udayavani, Jul 2, 2019, 10:26 AM IST

cd-tdy-1..

ಚಿತ್ರದುರ್ಗ: ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ರಾಜಶೇಖರ ಬಿ. ಪಾಟೀಲ್ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಚಿತ್ರದುರ್ಗ: ಜಿಲ್ಲೆಯಲ್ಲಿ ಜನರು ನಿರ್ಮಿಸುವ ಆಶ್ರಯ ಮನೆಗಳಿಗೆ ರಿಯಾಯತಿ ದರದಲ್ಲಿ ಕಲ್ಲು ಮತ್ತು ಮರಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ರಾಜಶೇಖರ ಬಿ. ಪಾಟೀಲ್, ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಗಣಿ ಮತ್ತು ಭೂವಿಜ್ಞಾನ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆ ಸತತ ಬರಗಾಲಕ್ಕೆ ತುತ್ತಾಗುತ್ತಿದ್ದು, ಜನರು ಬರಗಾಲದಿಂದ ಬೆಂದು ಹೋಗಿದ್ದಾರೆ. ನಗರ ಹಾಗೂ ಗ್ರಾಮೀಣ ಭಾಗದ ಜನರು ಆಶ್ರಯ ಮನೆ ನಿರ್ಮಿಸಿಕೊಳ್ಳಲು ಮರಳು ಮತ್ತು ಕಲ್ಲು ಅಗತ್ಯವಾಗಿದೆ. ಆದರೆ ಮರಳು ಮತ್ತು ಕಲ್ಲುಗಾರಿಕೆ ಮಾಲೀಕರು ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಆದ್ದರಿಂದ ಹೆಚ್ಚು ದರವನ್ನು ನಿಗದಿಪಡಿಸದೆ ರಿಯಾಯತಿ ದರದಲ್ಲಿ ದೊರೆಯುವಂತೆ ನೋಡಿಕೊಳ್ಳಬೇಕೆಂದರು.

ಚಿತ್ರದುರ್ಗ ಜಿಲ್ಲೆಯ ಗಣಿ ಬಾಧಿತ ಪ್ರದೇಶಗಳ ಪುನಶ್ಚೇತನಕ್ಕಾಗಿ ಸಿಇಸಿ ವರದಿಯನ್ವಯ 3800 ಕೋಟಿ ರೂ. ಅನುದಾನ ಹಂಚಿಕೆಯಾಗಿದೆ. ಇದನ್ನು ಮುಂದಿನ 10 ವರ್ಷದ ಯೋಜನೆಗೆ ಮೀಸಲಿಡಲಾಗಿದೆ. ಯೋಜನೆಗಳನ್ನು ರೂಪಿಸುವಾಗ ಗಣಿ ಬಾಧಿತ ಪ್ರದೇಶಗಳಲ್ಲಿ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಹಾನಿಯಾದ ಪ್ರದೇಶಗಳಲ್ಲಿ ಡಿಎಂಎಫ್‌ ನಿಧಿಯನ್ನು ಮಾರ್ಗಸೂಚಿಯನ್ವಯ ಬಳಸಬೇಕು. ಸರ್ಕಾರದಿಂದ ಕಾಲ ಕಾಲಕ್ಕೆ ಬಂದಂತಹ ಮಾರ್ಗಸೂಚಿಗಳನ್ನು ಶಾಸಕರು ಕೇಳಿದಾಗ ನೀಡಬೇಕು ಎಂದು ತಿಳಿಸಿದರು. ಮರಳು ಗಣಿಗಾರಿಕೆಯಲ್ಲಿ ಮತ್ತಷ್ಟು ಸುಧಾರಣೆ ತರುವ ನಿಟ್ಟಿನಲ್ಲಿ ಉಪಮುಖ್ಯಮಂತ್ರಿಗಳ

ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿಯನ್ನು ರಚಿಸಲಾಗಿದೆ. ಈಗಾಗಲೇ ಒಂದು ಸಭೆಯೂ ನಡೆದಿದೆ. ಜು. 3 ರಂದು ಮತ್ತೂಂದು ಸಭೆ ಇದ್ದು ಈ ಸಭೆಯಲ್ಲಿ ಕೆಲವೊಂದು ಸುಧಾರಣಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ತೀರ್ಮಾನಿಸಲಾಗುತ್ತದೆ ಮತ್ತು ತೆಲಂಗಾಣ ಮಾದರಿಯಲ್ಲಿ ಸಾರ್ವಜನಿಕರಿಗೆ ಮರಳು ನೀಡುವ ಯೋಚನೆಯೂ ಇದೆ ಎಂದು ಹೇಳಿದರು.

ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ ಮಾತನಾಡಿ, ಜಿಲ್ಲೆಯ 100 ವರ್ಷಗಳ ಇತಿಹಾಸದಲ್ಲಿ ಸುಮಾರು 76 ವರ್ಷಗಳ ಕಾಲ ಬರಗಾಲಕ್ಕೆ ತುತ್ತಾಗಿದೆ. ಆಶ್ರಯ ಮನೆ ನಿರ್ಮಿಸಲು ಮರಳು ಸಿಗದೆ ಜನರು ಪರದಾಡುತ್ತಿದ್ದಾರೆ. ಮರಳು ಖರೀದಿಸಲು ಬೇರೆಡೆ ಹೋದರೆ ದುಬಾರಿ ವೆಚ್ಚ ಭರಿಸಬೇಕಾಗುತ್ತದೆ. ಆದ್ದರಿಂದ ತಹಶೀಲ್ದಾರರ ಅನುಮತಿ ಮೇರೆಗೆ ಸ್ಥಳೀಯವಾಗಿ ಮರಳು ದೊರಕುವಂತೆ ಮಾಡಬೇಕು. ತಾಲೂಕು ಮಟ್ಟದಲ್ಲಿ ಮರಳು ಶೇಖರಣಾ ಯಾರ್ಡ್‌ ತೆರೆಯಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಕೆ. ಅರುಣ್‌ ಮಾತನಾಡಿ, ಜಿಲ್ಲೆಯಲ್ಲಿ ಬಡವರಿಗೆ ಮನೆ ನಿರ್ಮಿಸಿಕೊಳ್ಳಲು ಶೇ. 25 ರಷ್ಟು ರಿಯಾಯತಿ ದರದಲ್ಲಿ ಮರಳು ನೀಡಬೇಕು. ಅಕ್ರಮವಾಗಿ ಮರಳು ಬೇರೆಡೆಗೆ ಸಾಗಿಸದಂತೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಸಭೆಯಲ್ಲಿ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ, ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ. ಸತ್ಯಭಾಮ, ಅಪರ ಜಿಲ್ಲಾಧಿಕಾರಿ ಸಿ. ಸಂಗಪ್ಪ, ಉಪವಿಭಾಗಾಕಾರಿ ವಿಜಯಕುಮಾರ್‌, ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕ ಮಹಂತೇಶ್‌ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ISRO Success: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

ISRO ಸಾಧನೆ: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

1-aasdasd

IPL ಬೆಟ್ಟಿಂಗ್ ಜಾಲ; ಗಂಡನಿಗೆ ಸಾಲಗಾರರ ಹಿಂಸೆ: ಪತ್ನಿ ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.