ಹೊಸದುರ್ಗಕ್ಕೆ 10 ಟಿಎಂಸಿ ನೀರು ಕೊಡಿ
Team Udayavani, Jun 15, 2020, 9:06 AM IST
ಹೊಸದುರ್ಗ: ವಾಣಿವಿಲಾಸ ಸಾಗರದ ನೀರು ನಿಂತಿರುವ ಸ್ಥಳ ಹೊಸದುರ್ಗ ಭೂಪ್ರದೇಶಕ್ಕೆ ಸೇರಿದ್ದು ಬಹಳಷ್ಟು ಜಮೀನು ಮುಳುಗಡೆ ಪ್ರದೇಶಕ್ಕೆ ಹೋಗಿರುವುದರಿಂದ ವಿವಿ ಸಾಗರದ 30 ಟಿಎಂಸಿ ನೀರಿನಲ್ಲಿ 10 ಟಿಎಂಸಿ ನೀರು ಹೊಸದುರ್ಗಕ್ಕೆ ಮೀಸಲಿಡಬೇಕು ಎಂದು ಶಾಸಕ ಗೂಳಿಹಟ್ಟಿ ಡಿ ಶೇಖರ್ ಮುಖ್ಯ ಮಂತ್ರಿ ಯಡಿಯೂರಪ್ಪನವರಲ್ಲಿ ಮನವಿ ಮಾಡಿದ್ದಾರೆ.
ಹೊಸದುರ್ಗ ಪಟ್ಟಣದ ಬಹುತೇಕ ಭೂಪ್ರದೇಶ ಸೇರಿದಂತೆ, ಅಣೆಕಟ್ಟು ನಿರ್ಮಾಣಕ್ಕಾಗಿ ಸ್ಥಳಾಂತರ ಮಾಡಿರುವ ಹೊಸದುರ್ಗ ಜನತೆಗೆ ವಿವಿ ಸಾಗರದ ಹಿನ್ನೀರಿನ ಉಪಯೋಗವೇ ಆಗುತ್ತಿಲ್ಲ ಎಂದ ಅವರು, ವಿವಿ ಸಾಗರದ 30 ಟಿಎಂಸಿ ನೀರಿನಲ್ಲಿ 10 ಟಿಎಂಸಿ ನೀರನ್ನು ಮೀಸಲಿಡುವ ಮೂಲಕ ಹೊಸದುರ್ಗ ತಾಲೂಕಿನ ಜನತೆಗೆ ಅನುಕೂಲ ಕಲ್ಪಿಸಬೇಕು ಎಂದರು.
ಹೊಸದುರ್ಗ ತಾಲೂಕಿನ ಹಲವೆಡೆ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಬಹಳಷ್ಟು ಕಡೆ ಹಳ್ಳದ ಹರಿಯುವಿಕೆಯಿಂದ ಉತ್ತಮ ಮಣ್ಣು ಕೊರಕಲು ಉಂಟಾಗಿ ರೈತರು ಸಮಸ್ಯೆ ಎದುರಿಸುವಂತಾಗಿದೆ. ಆ ಹಿನ್ನೆಲೆಯಲ್ಲಿ ಬರದ ನಾಡಾದ ಹೊಸದುರ್ಗ ತಾಲೂಕಿಗೆ 10 ಟಿಎಂಸಿ ನೀರು ಹಂಚಿಕೆ ಮಾಡುವ ಮೂಲಕ ನ್ಯಾಯ ಒದಗಿಸಿಕೊಡಬೇಕೆಂದು ಆಗ್ರಹಿಸಿದ್ದಾರೆ.
ಜಿಲ್ಲೆಯ ಬಹುತೇಕ ತಾಲೂಕುಗಳಿಗೆ ಕುಡಿಯುವ ನೀರು ಸೇರಿದಂತೆ ಕೆರೆ ತುಂಬಿಸುವ ಕೆಲಸ ಆಗಿದ್ದು ಚಾನೆಲ್ ಗಳಿಗೆ ನೀರು ಹರಿಸಿರುವುದರಿಂದ ಜಿಲ್ಲೆಯ ಕೆಲ ತಾಲೂಕುಗಳ ರೈತರಿಗೆ ಅನುಕೂಲವಾಗಿದೆ. ಆದರೆ ಹೊಸದುರ್ಗದ ಜನತೆ ವಿವಿ ಸಾಗರದ ನೀರು ಪಡೆಯುವಲ್ಲಿ ವಿಫಲವಾಗಿದೆ. ನಮ್ಮ ಮನವಿಗೆ ಸಿಎಂ ಯಡಿಯೂರಪ್ಪನವರು ಸ್ಪಂದಿಸಲಿದ್ದಾರೆ ಎಂಬ ಭರವಸೆಯನ್ನು ಶಾಸಕರು ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ