74 ವರ್ಷ ಬಳಿಕ ಸರ್ಕಾರಿ ಬಸ್‌ ಭಾಗ್ಯ!

­ಕಣಕುಪ್ಪೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣ! ­ತಳಿರು ತೋರಣದಿಂದ ಸಿಂಗರಿಸಿ, ಪೂಜೆ ಸಲ್ಲಿಕೆ

Team Udayavani, Mar 6, 2021, 6:51 PM IST

bus

ಮಳಕಾಲ್ಮೂರು: ಸ್ವಾತಂತ್ರ್ಯಬಂದು 74 ವರ್ಷಗಳ ನಂತರ ತಾಲೂಕಿನ ಗಡಿಗ್ರಾಮ ಕಣಕುಪ್ಪೆ ಗ್ರಾಮಕ್ಕೆ ಮೊಟ್ಟ ಮೊದಲ ಬಾರಿಗೆ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ ಆರಂಭವಾಗಿದೆ.

ಜಿಲ್ಲಾ ಧಿಕಾರಿ ಕವಿತಾ ಎಸ್‌. ಮನ್ನಿಕೇರಿ ವಾಸ್ತವ್ಯ ಮಾಡಿದ್ದ ಮೊಳಕಾಲ್ಮುರು ತಾಲೂಕಿನ ಗಡಿಗ್ರಾಮ ಕಣಕುಪ್ಪೆ ಗ್ರಾಮಕ್ಕೆ ಸರ್ಕಾರಿ ಬಸ್‌ ಸೌಲಭ್ಯ ಕಲ್ಪಿಸಲಾಗಿದೆ. ಮೊಳಕಾಲ್ಮೂರು ತಹಶೀಲ್ದಾರ್‌ ಹಾಗೂ ಪ್ರೊಬೇಷನರಿ ಎ.ಸಿ ಮಾರುತಿ ಬ್ಯಾಕೋಡ್‌ ಅವರು  ಶುಕ್ರವಾರ ಬಸ್‌ ಸಂಚಾರಕ್ಕೆ ಚಾಲನೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳು ವಾಸ್ತವ್ಯ ಮಾಡಿದ್ದ ವೇಳೆ ಗ್ರಾಮಸ್ಥರು ಬಸ್‌ ಸಂಪರ್ಕ ಕಲ್ಪಿಸಲು ಮನವಿ ಮಾಡಿದ್ದರು. ಈ ವೇಳೆ ಜಿಲ್ಲಾಧಿಕಾರಿಗಳು ಮಾರ್ಚ್‌ ತಿಂಗಳಿಂದ ಗ್ರಾಮಕ್ಕೆ ಬಸ್‌ ಸೌಲಭ್ಯ ಕಲ್ಪಿಸುವ ಭರವಸೆ ನೀಡಿದ್ದರು. ಅದರಂತೆ ಈಗ ಜಿಲ್ಲಾಧಿಕಾರಿಗಳು ಗ್ರಾಮಸ್ಥರ ಬೇಡಿಕೆ ಈಡೇರಿಸಿದ್ದಾರೆ.

ಕಣಕುಪ್ಪೆಯಿಂದ ಬಳ್ಳಾರಿಗೆ ಬಸ್‌: ಜಿಲ್ಲೆಯ ಗಡಿಭಾಗ ಕಣಕುಪ್ಪೆ ಗ್ರಾಮದಿಂದ ಡಿ.ಹಿರೇಹಾಳ್‌, ಓಬಳಾಪುರಂ, ರಾಯದುರ್ಗ ಚೆಕ್‌ಪೋಸ್ಟ್‌, ಹಲಕುಂದಿ, ಮುಂಡರಗಿ ಮಾರ್ಗವಾಗಿ ಬಸ್‌ ಬಳ್ಳಾರಿ ತಲುಪಲಿದೆ. ವಿದ್ಯಾರ್ಥಿಗಳ, ಗ್ರಾಮಸ್ಥರ ಅನುಕೂಲಕ್ಕೆ ತಕ್ಕಂತೆ ಪ್ರತಿ ನಿತ್ಯವೂ ಮುಂಜಾನೆ ಹಾಗೂ ಮಧ್ಯಾಹ್ನದ ವೇಳೆ ಎರಡು ಬಾರಿ ಬಸ್‌ ಸಂಚಾರ ಮಾಡಲಿದೆ. ಕಣಕುಪ್ಪೆ ಗ್ರಾಮಕ್ಕೆ ಯಾವುದೇ ಬಸ್‌ಗಳು ಬಾರದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿತ್ತು. ಈಗ ಈ ಗ್ರಾಮಕ್ಕೆ ಸರ್ಕಾರಿ ಬಸ್‌ ಸಂಚಾರ ಆರಂಭವಾಗಿದ್ದು, ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಮಾರ್ಚ್‌ 5ರಂದು ಗ್ರಾಮಕ್ಕೆ ಬಂದ ಬಸ್‌ಗೆ ತಳಿರು ತೋರಣಗಳಿಂದ ಸಿಂಗರಿಸಿ, ಗ್ರಾಮಸ್ಥರು ಪೂಜೆ ಸಲ್ಲಿಸಿ ಸಂಭ್ರಮಿಸಿದರು.

ಕಣಕುಪ್ಪೆ ಗ್ರಾಮದಿಂದ ಬಳ್ಳಾರಿಗೆ ಸಂಚರಿಸಲಿರುವ ಸರ್ಕಾರಿ ಬಸ್‌ಗೆ ಚಾಲನೆ ನೀಡಿ ಪ್ರಭಾರಿ ತಹಶೀಲ್ದಾರ್‌ ಮಾರುತಿ ಮಾತನಾಡಿ, ಗ್ರಾಮಸ್ಥರು ಮತ್ತು ಶಾಲಾ ವಿದ್ಯಾರ್ಥಿಗಳ ಅನುಕೂಲತೆಗಾಗಿ ಕಲ್ಪಿಸಿರುವ ಸರ್ಕಾರಿ ಬಸ್‌ ಸೌಲಭ್ಯವನ್ನು ಸದ್ಬಳಕೆ  ಮಾಡಿಕೊಳ್ಳಬೇಕು ಎಂದರು.

ಮೊಳಕಾಲ್ಮೂರು ತಹಶೀಲ್ದಾರ್‌ ಹಾಗೂ ಪ್ರೊಬೇಷನರಿ ಎ.ಸಿ ಮಾರುತಿ ಬ್ಯಾಕೋಡ್‌, ಡಿಪೋ ಮ್ಯಾನೇಜರ್‌ ಶಿವಪ್ರಕಾಶ್‌, ಟಿ.ಸಿ. ಯರ್ರಿಸ್ವಾಮಿ, ಕಂದಾಯ ನಿರೀಕ್ಷಕ ಗೋಪಾಲ್‌, ಗ್ರಾಮ ಲೆಕ್ಕಾ ಧಿಕಾರಿ ಶ್ರೀನಿವಾಸ್‌ ಗ್ರಾಮ ಪಂಚಾಯಿತಿ ಸದಸ್ಯರಾದ ನರಸಿಂಹಪ್ಪ, ಮಾಜಿ ಸದಸ್ಯ ಸಣ್ಣಜೋಗಪ್ಪ, ಕಣಕುಪ್ಪೆ ಗ್ರಾಮದ ಮುಖಂಡರಾದ ನರಸಣ್ಣ, ನಾಗರಾರ್ಜುನ, ರಾಜಾ, ಸಣ್ಣಜೋಗಪ್ಪ ಹಾಗೂ ಗ್ರಾಮಸ್ಥರು, ಸಾರಿಗೆ ಇಲಾಖೆ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.