ಸರ್ಕಾರದ ಸೌಲಭ್ಯ ನಿರಾಶ್ರಿತರಿಗೆ ತಲುಪಿಸಲು ಕರೆ


Team Udayavani, May 23, 2019, 10:02 AM IST

cd-tdy-2..

ಚಿತ್ರದುರ್ಗ: ನಿರಾಶ್ರಿತರಿಗೆ ಸರ್ಕಾರ ನೂರಾರು ಸೌಲಭ್ಯಗಳನ್ನು ನೀಡಿದ್ದು ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್‌.ಆರ್‌. ದಿಂಡಲಕೊಪ್ಪ ಹೇಳಿದರು.

ತಾಲೂಕಿನ ಗೋನೂರು ಸಮೀಪದ ಮುತ್ತಯ್ಯನಹಟ್ಟಿಯಲ್ಲಿರುವ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ನಿರಾಶ್ರಿತರಿಗಾಗಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಪುಸ್ತಕ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಗೋನೂರು ನಿರಾಶ್ರಿತರ ಪರಿಹಾರ ಕೇಂದ್ರ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಸ್ವಚ್ಛತೆ, ಗುಣಮಟ್ಟದ ಆಹಾರ ಸೇರಿದಂತೆ ಎಲ್ಲವನ್ನೂ ವ್ಯವಸ್ಥಿತ ರೀತಿಯಲ್ಲಿ ನೀಡಲಾಗುತ್ತಿದೆ. ಇಲ್ಲಿನ ಅಧಿಧೀಕ್ಷಕ ಮಹದೇವಯ್ಯನವರು ನಿಮ್ಮ ಮೇಲೆ ತೋರುತ್ತಿರುವ ಕಾಳಜಿಯೇ ಇದಕ್ಕೆ ಕಾರಣ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಪುಸ್ತಕ ಓದಿ ಗಳಿಸುವ ಜ್ಞಾನಾರ್ಜನೆಯಿಂದ ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ. ಪುಸ್ತಕ ಓದುವ ಹವ್ಯಾಸ ತುಂಬಾ ಒಳ್ಳೆಯದು. ನಿಮಗೆ ಪುಸ್ತಕ ಓದುವ ಆಸಕ್ತಿಯಿದ್ದರೆ ಓದಿ. ಇಲ್ಲವೇ ಬೆರೆಯವರು ಓದಿ ಎಲ್ಲರಿಗೂ ವಿಚಾರಗಳನ್ನು ತಿಳಿಸಬಹುದು. ಇಲ್ಲಿನ ಸವಲತ್ತುಗಳನ್ನು ಸದುಪಯೋಗಪಡಿಸಿಕೊಂಡು ನೆಮ್ಮದಿಯ ಜೀವನವನ್ನು ನಿಮ್ಮದಾಗಿಸಿಕೊಳ್ಳಿ ಎಂದರು.

ಹಿರಿಯ ನ್ಯಾಯವಾದಿ ಬಿ.ಕೆ. ರಹಮತ್‌ವುಲ್ಲಾ ಮಾತನಾಡಿ, ಗೋನೂರು ನಿರಾಶ್ರಿತರ ಪರಿಹಾರ ಕೇಂದ್ರ ಸ್ವಚ್ಛತೆ ಸೇರಿದಂತೆ ಎಲ್ಲ ವಿಚಾರದಲ್ಲೂ ಹೈಟೆಕ್‌ ಆಗಿದೆ. ಇಲ್ಲಿ ನಿರಾಶ್ರಿತರಿಗೆ ದೊರೆಯುತ್ತಿರುವ ಸವಲತ್ತು ಯಾವ

ಅಧಿಕಾರಿಗಳಿಗೂ ಇಲ್ಲ ಎನ್ನುವುದು ಇಲ್ಲಿ ಬಂದು ನೋಡಿದಾಗ ತಿಳಿಯುತ್ತದೆ. ಸರ್ಕಾರ ಇಷ್ಟೊಂದು ಸೌಲಭ್ಯಗಳನ್ನು ನೀಡಿರುವುದು ನಿಮ್ಮ ಅದೃಷ್ಟ. ನಾನಾ ಕಾರಣಗಳಿಂದ ಕೆಲವರು ಇಲ್ಲಿ ಬಂದು ನಿರಾಶ್ರಿತರಂತೆ ಜೀವನ ಮಾಡುತ್ತಿರಬಹುದು. ಮನಸ್ಸಿನಲ್ಲಿರುವ ಕಲ್ಮಶ ತೆಗೆದು ಹಾಕಿ ಸಮಾಜದಲ್ಲಿ ಎಲ್ಲರಂತೆ ಗುರುತಿಸಿಕೊಂಡು ಜೀವನ ಮಾಡಿ ಎಂದು ಹಾರೈಸಿದರು.

ಚಿತ್ರದುರ್ಗ ವಕೀಲರ ಸಂಘದ ಕಾರ್ಯದರ್ಶಿ ಅನಿಲ್ಕುಮಾರ್‌ ಮಾತನಾಡಿ, ಪುಸ್ತಕಗಳನ್ನು ಓದಿದಷ್ಟೂ ಜ್ಞಾನ ವೃದ್ಧಿಯಾಗುತ್ತದೆ. ಪುಸ್ತಕ ಎಂದರೆ ಬಹುದೊಡ್ಡ ಸಂಪತ್ತು. ನಾನಾ ವಿಚಾರಗಳನ್ನು ತಿಳಿದುಕೊಳ್ಳಬಹುದು. ನಿರಾಶ್ರಿತ ರೆಂಬುದನ್ನು ಮರೆತು ಇಲ್ಲಿಂದ ಹೊರ ಹೋಗಿ ಸಮಾಜಮುಖೀಯಾಗಿ ಬಾಳಿರಿ ಎಂದರು.

ನ್ಯಾಯವಾದಿ ಪ್ರತಾಪ್‌ ಜೋಗಿ ಮಾತನಾಡಿ, ಪುಸ್ತಕ ಎಂದರೆ ಜ್ಞಾನಭಂಡಾರ. ಇಂತಹ ಜ್ಞಾನಭಂಡಾರ ಓದುವುದರಿಂದ ಮಾನಸಿಕ ಸ್ಥೈರ್ಯವನ್ನು ಹೆಚ್ಚಿಸಿಕೊಂಡು ಮನಸ್ಸಿನ ನೋವನ್ನು ನಿವಾರಿಸಿಕೊಳ್ಳಬಹುದು. ಮಹಾನ್‌ ನಾಯಕರ ಪುಸ್ತಕಗಳನ್ನು ಓದಿ ಅವರ ಆದರ್ಶಗಳನ್ನು ಪಾಲಿಸಬೇಕು. ಜೊತೆಗೆ ದೇಶಭಕ್ತಿಯನ್ನು ಮೈಗೂಡಿಸಿಕೊಳ್ಳಬೇಕು ಎಂದರು.

ಗೋನೂರು ನಿರಾಶ್ರಿತರ ಪರಿಹಾರ ಕೇಂದ್ರದ ಅಧೀಕ್ಷಕ ಮಹದೇವಯ್ಯ, ಜೈಲು ಅಧೀಕ್ಷಕಿ ಅಪೇಕ್ಷ ಎಸ್‌. ಪವಾರ್‌ ಇದ್ದರು.

ಟಾಪ್ ನ್ಯೂಸ್

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.