ಗೋವಿಂದ ಕಾರಜೋಳಗೆ ವಿಧಾನಸಭೆ ಸೋಲಿನ ಕಹಿ ಮರೆಸಿದ ಗೆಲುವು

ಕಾಂಗ್ರೆಸ್‌ ಅಭ್ಯರ್ಥಿ ಬಿ.ಎನ್‌. ಚಂದ್ರಪ್ಪ ಎಣಿಕೆ ಕೇಂದ್ರದಿಂದ ಹೊರ ನಡೆದರು.

Team Udayavani, Jun 5, 2024, 6:08 PM IST

ಗೋವಿಂದ ಕಾರಜೋಳಗೆ ವಿಧಾನಸಭೆ ಸೋಲಿನ ಕಹಿ ಮರೆಸಿದ ಗೆಲುವು

■ ಉದಯವಾಣಿ ಸಮಾಚಾರ
ಚಿತ್ರದುರ್ಗ: ವಿಧಾನಸಭೆ ಚುನಾವಣೆ ಸೋಲಿನ ಬೇಸರದಲ್ಲಿದ್ದ ಬಿಜೆಪಿ ಕಾರ್ಯಕರ್ತರಿಗೆ ಲೋಕಸಭೆ ಚುನಾವಣೆ ಗೆಲುವು ಹುಮ್ಮಸ್ಸು ಮೂಡಿಸಿದೆ. ಒಂದೆಡೆ ದೇಶದಲ್ಲಿ ಮತ್ತೆ ಎನ್‌ಡಿಎ ಮೈತ್ರಿಕೂಟದ ಸರ್ಕಾರ ಬರುವುದು ಖಚಿತವಾಗುತ್ತಿದ್ದರೆ, ಮತ್ತೂಂದೆಡೆ ರಾಜ್ಯದಲ್ಲೂ ಬಿಜೆಪಿ ಅತಿ ಹೆಚ್ಚು ಸ್ಥಾನಗಳಲ್ಲಿ ಜಯ ಸಾ ಧಿಸುವ ಸುದ್ದಿ, ಇದರ ನಡುವೆ ಚಿತ್ರದುರ್ಗ ಅಭ್ಯರ್ಥಿ ಗೋವಿಂದ ಕಾರಜೋಳ ಅವರ ಲೀಡ್‌ ಪ್ರತಿ ಸುತ್ತಿಗೂ ಹೆಚ್ಚಾಗುತ್ತಿದ್ದಂತೆ ಜೈ ಶ್ರೀರಾಮ್‌, ಭಾರತ್‌ ಮಾತಾ ಕೀ ಜೈ, ಮೋದಿ ಮೋದಿ ಘೋಷಣೆಗಳು ಮುಗಿಲು ಮುಟ್ಟುತ್ತಿದ್ದವು.

ಸರ್ಕಾರಿ ವಿಜ್ಞಾನ ಕಾಲೇಜು ಕಟ್ಟಡದಲ್ಲಿ ಮತ ಎಣಿಕೆ ನಡೆಯುತ್ತಿದ್ದರೆ, ಜಗದ್ಗುರು ಜಯದೇವ ಕ್ರೀಡಾಂಗಣ ಹಾಗೂ ಬಿ.ಡಿ.ರಸ್ತೆಯ ಪಂಚಾಚಾರ್ಯ ಕಲ್ಯಾಣ ಮಂಟಪದ ಬಳಿ ನೂರಾರು ಬಿಜೆಪಿ ಕಾರ್ಯಕರ್ತರು ಕೇಸರಿ ಶಾಲಿನೊಂದಿಗೆ ಆಗಮಿಸಿ ಸಂಭ್ರಮಿಸುತ್ತಿದ್ದರು. ಮತ ಎಣಿಕೆ ಆರಂಭದಲ್ಲಿ ಕಾಂಗ್ರೆಸ್‌ ಪರ ವಾತಾವರಣ ಇದ್ದಾಗ ಕಾಂಗ್ರೆಸ್‌ ಕಾರ್ಯಕರ್ತರು ಉತ್ಸಾಹದಲ್ಲಿದ್ದರು.

ಆದರೆ ಬಿಜೆಪಿ ಪರ ವಾತಾವರಣ ಬದಲಾಗುತ್ತಲೇ ಕೇಂದ್ರದಲ್ಲಿದ್ದ ಕಾಂಗ್ರೆಸ್‌ ಅಭ್ಯರ್ಥಿ ಬಿ.ಎನ್‌. ಚಂದ್ರಪ್ಪ ಎಣಿಕೆ ಕೇಂದ್ರದಿಂದ ಹೊರ ನಡೆದರು. ಅವರ ಹಿಂದೆಯೇ ಕಾರ್ಯಕರ್ತರು ಕೂಡ ನಿರಾಸೆಯಿಂದ ಹೆಜ್ಜೆ ಹಾಕಿದರು.

ಇತ್ತ ಗೆಲುವಿನ ಖಾತರಿ ಸಿಗುತ್ತಿದ್ದಂತೆ ಕೇಸರಿ ಪಾಳೆಯದ ಕಾರ್ಯಕರ್ತರು ಜಮಾಯಿಸತೊಡಗಿದರು. ಗೋವಿಂದ ಕಾರಜೋಳ ಮತ ಎಣಿಕೆ ಕೇಂದ್ರಕ್ಕೆ ಬರುವಾಗ ನೂರಾರು ಮಂದಿ ಜೊತೆಗೆ ಬಂದು ವಿಜಯದ ಸಂಕೇತ ತೋರಿಸಿದರು. ಪ್ರಮಾಣಪತ್ರ ಪಡೆದು
ತೆರಳುವಾಗ ಹಾರ, ತುರಾಯಿ, ಘೋಷಣೆ ಜೊತೆಗೆ ಕಾರಜೋಳ ಅವರ ಜೊತೆಗೆ ಸೆಲ್ಫಿ ತೆಗೆದುಕೊಳ್ಳಲು ಕಾರ್ಯಕರ್ತರು,
ಸಾರ್ವಜನಿಕರು ಮುಗಿ ಬಿದ್ದಿದ್ದರು. ಅಲ್ಲಿಂದ ಮುಖ್ಯ ರಸ್ತೆಗೆ ತೆರಳುವಾಗ ವಾಹನವೊಂದರಿಂದ ಮಿಂಚು ಹಾಗೂ ಕೇಸರಿ ಬಣ್ಣದ ಪೌಡರ್‌ ಸ್ಪ್ರೆ ಮಾಡುವ ಮೂಲಕ ಕೇಸರಿ ಬಣ್ಣದ ಮಳೆ ಸುರಿಸಿದರು. ಅಲ್ಲಿದ್ದ ಬಹುತೇಕರ ತಲೆ, ಮೈಕೈ, ಬಟ್ಟೆ, ವಾಹನಗಳೆಲ್ಲಾ ಕೇಸರಿ ಬಣ್ಣದಿಂದ ಮಿಂದು ಹೋಗಿದ್ದವು. ಹತ್ತಾರು ವಾಹನಗಳಲ್ಲಿ ಬಿಜೆಪಿ ಕಚೇರಿಗೆ ಬಂದ ಗೋವಿಂದ ಕಾರಜೋಳ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರ ಜೊತೆಗೆ ಸಂಭ್ರಮಿಸಿದರು.

ನಂತರ ಶ್ರೀ ನೀಲಕಂಠೇಶ್ವರ ದೇವಸ್ಥಾನ, ಜೆಸಿಆರ್‌ ಬಡಾವಣೆಯ ಗಣಪತಿ ದೇವಸ್ಥಾನ, ಮಾದಾರ ಚನ್ನಯ್ಯ ಗುರುಪೀಠಕ್ಕೆ ಭೇಟಿ ನೀಡಿದರು. ತೀವ್ರ ಪೈಪೋಟಿ ಏರ್ಪಟ್ಟಿದ್ದ ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಯಾರು ಗೆದ್ದರೂ ಅಚ್ಚರಿ ಇಲ್ಲ ಎನ್ನುವ
ವಾತಾವರಣ ಸೃಷ್ಟಿಯಾಗಿತ್ತು. ಬಿಜೆಪಿ ಗೆಲುವಿನ ದಡ ಮುಟ್ಟುತ್ತಲೇ ಕಾರ್ಯಕರ್ತರು ಮೊಬೈಲ್‌ ವಾಟ್ಸ್‌ಆ್ಯಪ್‌, ಸ್ಟೇಟಸ್‌ ಹಾಕಿಕೊಂಡು ಸಂಭ್ರಮಿಸಿದರು.

ಟಾಪ್ ನ್ಯೂಸ್

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Protest across the state if Ramanagara name is changed: pramod muthalik

Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರೇಣುಕಾಸ್ವಾಮಿ ಕುಟುಂಬಕ್ಕೆ ನಟ ವಿನೋದ್‌ ರಾಜ್‌ ಸಾಂತ್ವನ

Renukaswamy ಕುಟುಂಬಕ್ಕೆ ನಟ ವಿನೋದ್‌ ರಾಜ್‌ ಸಾಂತ್ವನ

1-weewq

Bharamasagara; ಸ್ಥಳೀಯ ಟಿಪ್ಪರ್ ಗಳನ್ನು ಬಳಸಿಕೊಳ್ಳಲು ಆಗ್ರಹಿಸಿ ಪ್ರತಿಭಟನೆ

Nayakanahatti

Nayakanahatti; ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಕಳ್ಳರ ಗ್ಯಾಂಗ್

Chitradurga

Congress Government; ಮೊದಲು ನಿಮ್ಮ ಕಾಲದ ಹಗರಣಕ್ಕೆ ಉತ್ತರ ಕೊಡಿ: ಬಿವೈವಿ

Renuka Swamy Case: ಎ 4 ತಾಯಿ ನಿಧನ; ವಿಡಿಯೋ ಕಾಲ್‌ನಲ್ಲಿ ಅಂತಿಮ ದರ್ಶನ

Renuka Swamy Case: ಎ 4 ತಾಯಿ ನಿಧನ; ವಿಡಿಯೋ ಕಾಲ್‌ನಲ್ಲಿ ಅಂತಿಮ ದರ್ಶನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.