ಹೊಳಲ್ಕೆರೆಯಲ್ಲಿ ಮೊಳಗಲಿದೆ ಪ್ರಜಾಧ್ವನಿ… ಬಿಜೆಪಿ ನಾಯಕರಲ್ಲಿ ನಡುಕ


Team Udayavani, Feb 8, 2023, 9:44 PM IST

ಹೊಳಲ್ಕೆರೆಯಲ್ಲಿ ಮೊಳಗಲಿದೆ ಪ್ರಜಾಧ್ವನಿ… ಬಿಜೆಪಿ ನಾಯಕರಲ್ಲಿ ನಡುಕ

ಹೊಳಲ್ಕೆರೆ: ಪಟ್ಟಣದಲ್ಲಿ ಫೆ.9ರಂದು ಪ್ರಜಾಧ್ವನಿ ಯಾತ್ರೆ ಆಗಮಿಸಲಿದ್ದು, ಅಂದು ಭ್ರಷ್ಟ ಬಿಜೆಪಿ ಸರ್ಕಾರದ ವಿರುದ್ಧ ಪ್ರಜೆಗಳ ಧ್ವನಿ ಮೊಳಗಲಿದೆ ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಎಚ್.ಆಂಜನೇಯ ಹೇಳಿದರು.

ಪಟ್ಡಣದಲ್ಲಿ ಸಮಾವೇಶದ ಸ್ಥಳಕ್ಕೆ ಬುಧವಾರ ಭೇಟಿ ನೀಡಿ ಸಿದ್ಧತೆ ಪರಿಶೀಲಿಸಿದ ಸಂದರ್ಭ ಮಾತನಾಡಿದರು.

ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಚರಿಸುತ್ತಿರುವ ಪ್ರಜಾಧ್ವನಿ ಯಾತ್ರೆ ಬಿಜೆಪಿಗರಲ್ಲಿ ನಡುಕು ಉಂಟು ಮಾಡಿದೆ ಎಂದರು.

ಗುತ್ತಿಗೆದಾರರು, ಬಿಜೆಪಿ ಶಾಸಕರೇ ಸರ್ಕಾರಕ್ಕೆ ಪತ್ರ ಬರೆದು ಕಾಮಗಾರಿ, ಟೆಂಡರ್ ಗಳಲ್ಲಿ ಅವ್ಯವಹಾರ ನಡೆದಿದೆ ಎಂದು ಹೇಳುತ್ತಿದ್ದಾರೆ. ಇದರಿಂದ 40 ಪರ್ಸೆಂಟೇಜ್ ಸರ್ಕಾರ ಎಂಬುದು ಬಹಿರಂಗ ಸತ್ಯ ಎಂದು ಹೇಳಿದರು.

ಸಿಲಿಂಡರ್, ಅಡುಗೆ ಎಣ್ಣೆ, ಬೇಳೆಕಾಳುಗಳ ಬೆಲೆ ಗಗನಕ್ಕೆ ಏರಿದೆ. ಸಾಮಾನ್ಯ ಜನರ ಬದುಕು ಮೂರಾಬಟ್ಟೆ ಆಗಿದೆ. ಆದರೂ ಭ್ರಷ್ಟಾಚಾರ ಹಾಗೂ ಬೆಲೆ ಏರಿಕೆಗೆ ಕಡಿವಾಣ ಹಾಕಲು ಡಬಲ್ ಇಂಜಿನ್ ಸರ್ಕಾರ ಮುಂದಾಗುತ್ತಿಲ್ಲ ಎಂದು ದೂರಿದರು.

ಭ್ರಷ್ಟಚಾರ, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಬೇಸತ್ತಿರುವ ಜನ ಸ್ವಯಂ ಪ್ರೇರಿತವಾಗಿ ಕಾಂಗ್ರೆಸ್ ಪಕ್ಷದ ಪರ ಎಲ್ಲೆಡೆ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಆಡಳಿತವನ್ನು ಸ್ಮರಿಸುತ್ತಿದ್ದಾರೆ ಎಂದರು.

ಭಾರತ್ ಜೋಡೋ, ನಾ ನಾಯಕಿ, ಈಗ ಪ್ರಜಾಧ್ವನಿ ಯಾತ್ರೆ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಜನರಲ್ಲಿ ಆತ್ಮವಿಶ್ವಾಸ ಮೂಡಿಸಿದೆ ಎಂದು ಹೇಳಿದರು.

ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ನಿರುದ್ಯೋಗದಿಂದ ಬದುಕುವ ಭರವಸೆ ಕಳೆದುಕೊಂಡಿದ್ದ ಜನರಿಗೆ ಕಾಂಗ್ರೆಸ್ ಪಕ್ಷ ಘೋಷಿಸಿರುವ  ಪ್ರತಿ ಮನೆಯ ಒಬ್ಬ ಮಹಿಳೆಗೆ ಎರಡು ಸಾವಿರ ರೂಪಾಯಿ ನೀಡಿವ ಗರಹಲಕ್ಷ್ಮಿ,  ಪ್ರತಿ ಮನೆಗೆ ಉಚಿತವಾಗಿ ಪ್ರತಿ ತಿಂಗಳು 200 ಯೂನಿಟ್ ವಿದ್ಯತ್ ನೀಡುವ ಗೃಹಜ್ಯೋತಿ ಆಶಾಭಾವನೆ ಮೂಡಿಸಿದೆ ಎಂದರು.

ರೈತರ ಸಾಲಮನ್ನ ವಿರುದ್ಧ ಮಾತನಾಡುವ ತೇಜಸ್ವಿ ಸೂರ್ಯ ಅಂತಹವರನ್ನು ಹೊಂದಿರುವ ಬಿಜೆಪಿ ಪಕ್ಷಕ್ಕೆ ಜನರ ಕಾಳಜಿ ಇಲ್ಲ. ಶ್ರೀಮಂತರನ್ನು ಶ್ರೀಮಂತರನ್ನಾಗಿಸುವ ಏಕೈಕ ಗುರಿ ಹೊಂದಿರುವ ಬಿಜೆಪಿ ಸರ್ಕಾರ ಬಡವರ ಸಮಾಧಿ ಮೇಲೆ ಉಳ್ಳವರಿಗಾಗಿ ಯೋಜನೆ ರೂಪಿಸುತ್ತಿದೆ. ಲಕ್ಷಾಂತರ ಕೋಟಿ ರೂಪಾಯಿ ವಂಚನೆ ಮಾಡಿರುವ ಮಲ್ಯ ಸೇರಿದಂತೆ ಅನೇಕರು ದೇಶ ತೊರೆಯಲು ಅವಕಾಶ ಮಾಡಿಕೊಟ್ಟ ಬಿಜೆಪಿಗೆ ಇನ್ನೂ ಸಮಾಧಾನ ಇಲ್ಲ.‌ಈಗ ಅದಾನಿ ಮೂಲಕ ದೇಶದ ಜನರ ಶ್ರಮದ ಹಣವನ್ನು ಲೂಟಿ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಡ ಜನರಿಗಾಗಿ ಕಾಂಗ್ರೇಸ್ ಸರ್ಕಾರ ಜಾರಿಗೊಳಿಸಿದ್ದ ಇಂದಿರಾ ಕ್ಯಾಂಟಿನ್, ಅನ್ನಭಾಗ್ಯ, ವಿದ್ಯಾ ಸಿರಿ ಸೇರಿದಂತೆ ಅನೇಕ ಯೋಜನೆಗಳು ಫಲಾನುವಿಗಳಿಗೆ ದೊರೆಯದಂತೆ ಮಾಡಿದೆ ಎಂದು ದೂರಿದರು.

ಇಂತಹ ಸರ್ಕಾರವನ್ನು ಕಿತ್ತು ಹಾಕಿ, ಜನಪರ ಕಾಂಗ್ರೆಸ್ ವನ್ನು ಅಧಿಕಾರಕ್ಕೆ ತರಲು ಜನ ಕಾತರರಾಗಿದ್ದು, ಪ್ರಜಾಧ್ವನಿ ಯಾತ್ರೆ ಬಲ ನೀಡುತ್ತಿದೆ ಎಂದರು.

ಯಾತ್ರೆಯ ರೂವಾರಿ ಡಿ.ಕೆ.ಶಿವಕುಮಾರ್, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್, ಕೆ.ಎಚ್.ಮುನಿಯಪ್ಪ, ಸಲೀಂ ಅಹ್ಮದ್, ಡಾ.ಎಚ್.ಸಿ.ಮಹಾದೇವಪ್ಪ ಸೇರಿದಂತೆ ಅನೇಕ ನಾಯಕರ ನೇತೃತ್ವದ ಯಾತ್ರೆ ಗುರುವಾರ ಮಧ್ಯಾಹ್ನ 2 ಗಂಟೆಗೆ ಹೊಳಲ್ಕೆರೆ ಪಟ್ಟಣಕ್ಕೆ ಆಗಮಿಸಲಿದೆ. ಸಮಾವೇಶಕ್ಕೆ ಸಹಸ್ರಾರು ಸಂಖ್ಯೆಯಲ್ಕಿ ಕಾರ್ಯಕರ್ತರು, ಜನರು ಪಾಲ್ಗೊಳ್ಳಲಿದ್ದಾರೆ. ಈ ಮೂಲಕ ವಿಧಾನಸಭಾ ಚುನಾವಣೆಯಲ್ಲಿ ದಾಖಲೆಗಳ ಸಂಖ್ಯೆಯಲ್ಲಿ ಪಕ್ಷದ ಗೆಲುವಿಗೆ ಬುನಾದಿ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ಜಿಪಂ-ತಾಪಂ ಚುನಾವಣೆ: ಫೆ.14ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಟಾಪ್ ನ್ಯೂಸ್

ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ

ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ

G PARAMESHWAR

ಒಳಮೀಸಲಾತಿ ಹೆಚ್ಚಳ ರಾಜ್ಯ ಸರ್ಕಾರದ ಚುನಾವಣಾ ಗಿಮಿಕ್-ಡಾ.ಜಿ.ಪರಮೇಶ್ವರ

ಅಲ್ಪಸಂಖ್ಯಾತ ಮೀಸಲಾತಿ ಕೋಟಾ ರದ್ದುಗೊಳಿಸಿದ್ದು ಸರಿಯಾದ ಕ್ರಮ: ಅಮಿತ್ ಶಾ

ಅಲ್ಪಸಂಖ್ಯಾತ ಮೀಸಲಾತಿ ಕೋಟಾ ರದ್ದುಗೊಳಿಸಿದ್ದು ಸರಿಯಾದ ಕ್ರಮ: ಅಮಿತ್ ಶಾ

MI

ಬುಮ್ರಾ ಬಳಿಕ ಐಪಿಎಲ್ ನಿಂದ ಹೊರಬಿದ್ದ ಮತ್ತೊಬ್ಬ ಮುಂಬೈ ಇಂಡಿಯನ್ಸ್ ಬೌಲರ್

1-sadsadsadasd

ಅಮೃತಪಾಲ್ ಸಿಂಗ್ ಜನಪ್ರಿಯತೆಗಾಗಿ ಮಂದೀಪ್ ಸಂಘಟನೆ ಪಿಗ್ಗಿಬ್ಯಾಕ್ ಮಾಡಿದನೇ?

ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ

ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ

1-sfsdf-sfsdfd

ಸ್ವಿಸ್ ಓಪನ್ ಸೂಪರ್ ಪ್ರಶಸ್ತಿ ಗೆದ್ದ ಸಾಯಿರಾಜ್-ಚಿರಾಗ್ ಜೋಡಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

d-k-shi

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾ ಮರುಸ್ಥಾಪನೆ : ಡಿಕೆಶಿ

1-sad-sadsad

ಕೆಕೆಆರ್ ಟಿಸಿ ಗೆ 802 ಬಸ್ ಸೇರ್ಪಡೆ: 28ರಂದು ಸೇಡಂದಲ್ಲಿ ಲೋಕಾರ್ಪಣೆ

basavaraj bommai ramesh jarkiholi

ಕುತೂಹಲ ಮೂಡಿಸಿದ ಭೇಟಿ: ಸಿಎಂ ಬೊಮ್ಮಾಯಿ ಜತೆ ಒಂದು ಗಂಟೆ ಚರ್ಚಿಸಿದ ಸಾಹುಕಾರ್

ಬಿಸಿಲ ಬೇಗೆಗೆ ರಾಜ್ಯದ ಜನ ತತ್ತರ! ಬೆಂಗಳೂರಿನಲ್ಲಿ ಅತ್ಯಧಿಕ ತಾಪಮಾನ ದಾಖಲು

ಬಿಸಿಲ ಬೇಗೆಗೆ ರಾಜ್ಯದ ಜನ ತತ್ತರ! ಏನೆಲ್ಲಾ ಮುನ್ನೆಚ್ಚರಿಕೆ ವಹಿಸಬೇಕು? ಇಲ್ಲಿದೆ ಮಾಹಿತಿ…

ಕೋವಿಡ್‌ ಮಹಾಮಾರಿ ಮತ್ತೆ ಸದ್ದು; ರಾಜ್ಯದಲ್ಲಿ 155 ಹೊಸ ಪ್ರಕರಣ

ಕೋವಿಡ್‌ ಮಹಾಮಾರಿ ಮತ್ತೆ ಸದ್ದು; ರಾಜ್ಯದಲ್ಲಿ 155 ಹೊಸ ಪ್ರಕರಣ ಪತ್ತೆ

MUST WATCH

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

ಹೊಸ ಸೇರ್ಪಡೆ

ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ

ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ

ಮಾಸ್‌ ಲುಕ್‌ ನಲ್ಲಿ ‘ರಾನಿ’ ಎಂಟ್ರಿ; ನಾಯಕ ನಟನಾಗಿ ಕಿರಣ್‌ ರಾಜ್‌

ಮಾಸ್‌ ಲುಕ್‌ ನಲ್ಲಿ ‘ರಾನಿ’ ಎಂಟ್ರಿ; ನಾಯಕ ನಟನಾಗಿ ಕಿರಣ್‌ ರಾಜ್‌

G PARAMESHWAR

ಒಳಮೀಸಲಾತಿ ಹೆಚ್ಚಳ ರಾಜ್ಯ ಸರ್ಕಾರದ ಚುನಾವಣಾ ಗಿಮಿಕ್-ಡಾ.ಜಿ.ಪರಮೇಶ್ವರ

ಅಲ್ಪಸಂಖ್ಯಾತ ಮೀಸಲಾತಿ ಕೋಟಾ ರದ್ದುಗೊಳಿಸಿದ್ದು ಸರಿಯಾದ ಕ್ರಮ: ಅಮಿತ್ ಶಾ

ಅಲ್ಪಸಂಖ್ಯಾತ ಮೀಸಲಾತಿ ಕೋಟಾ ರದ್ದುಗೊಳಿಸಿದ್ದು ಸರಿಯಾದ ಕ್ರಮ: ಅಮಿತ್ ಶಾ

MI

ಬುಮ್ರಾ ಬಳಿಕ ಐಪಿಎಲ್ ನಿಂದ ಹೊರಬಿದ್ದ ಮತ್ತೊಬ್ಬ ಮುಂಬೈ ಇಂಡಿಯನ್ಸ್ ಬೌಲರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.