ಭಾರೀ ಮಳೆಗೆ ನೆಲ ಕಚ್ಚಿದ ಬೆಳೆ-ಜನರಿಗೆ ಆತಂಕ
ಮೊಳಕಾಲ್ಮೂರು ಪಟ್ಟಣ-ತಾಲೂಕಿನಲ್ಲಿ ಗಾಳಿ-ಮಳೆಯಿಂದ ಸಮಸ್ಯೆ ಸೃಷ್ಟಿ
Team Udayavani, May 23, 2022, 4:31 PM IST
ಮೊಳಕಾಲ್ಮೂರು: ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಪಟ್ಟಣ ಹಾಗೂ ತಾಲೂಕಿನ ಜನಜೀವನ ಅಸ್ತವ್ಯಸ್ತಗೊಂಡಿದೆ.
ಬಿರುಗಾಳಿ ಸಹಿತದ ಮಳೆಯಿಂದ ತಾಲೂಕಿನ ನಾಗಸಮುದ್ರ ಗ್ರಾಮದಲ್ಲಿ ಪಪ್ಪಾಯಿ ಹಾಳಾಗಿದೆ. ಇನ್ನುಳಿದ ಕಡೆ ತರಕಾರಿ, ಬಾಳೆ ಹಾಗೂ ಇನ್ನಿತರ ಬೆಳೆ ಹಾನಿಯಾಗುವ ಸಾಧ್ಯತೆ ಇದೆ. ಕರಡಿಹಳ್ಳಿ ಗ್ರಾಮದಲ್ಲಿ ವಾಸದ ಮನೆಯೊಂದಕ್ಕೆ ಭಾಗಶಃ ಹಾನಿಯಾಗಿದೆ. ಮಳೆಯಿಂದ ಪಟ್ಟಣ ಹಾಗೂ ತಾಲೂಕಿನ ಬಹುತೇಕ ಗ್ರಾಮಗಳಲ್ಲಿರುವ ಹಳೆ ಮನೆಗಳು, ಶಾಲಾ-ಕಾಲೇಜು ಹಾಗೂ ಕಚೇರಿಗಳ ಕಟ್ಟಡಗಳು ಕುಸಿಯುವ ಆತಂ ಎದುರಾಗಿದೆ. ರಸ್ತೆಗಳಲ್ಲಿನ ಗುಂಡಿಗಳಲ್ಲಿ ನೀರು ತುಂಬಿಕೊಂಡು ಸಂಚಾರ ಸಮಸ್ಯೆ ಉಂಟಾಗಿದೆ. ಮೊಳಕಾಲ್ಮೂರು ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ಕಾಮಗಾರಿ ಆಮೆಗತಿಯಲ್ಲಿ ನಡೆಯುತ್ತಿದೆ. ಕೆಸರು ಗದ್ದೆಯಂತಿರುವ ರಸ್ತೆಯಲ್ಲಿ ಸಂಚರಿಸುವ ದುಸ್ಥಿತಿ ನಿರ್ಮಾಣವಾಗಿದೆ.
ಮಳೆಯಿಂದ ವ್ಯಾಪಾರ ವಹಿವಾಟು ಕುಂಠಿತಗೊಂಡು ವ್ಯಾಪಾರಸ್ಥರಿಗೆ ಸಮಸ್ಯೆ ತಂದೊಡ್ಡಿದೆ. ತಾಲೂಕಿನಲ್ಲಿ ಕೂಲಿ ಕೆಲಸವನ್ನೇ ನಂಬಿಕೊಂಡು ಬದುಕುತ್ತಿರುವ ಕೂಲಿ ಕಾರ್ಮಿಕರಿಗೆ ಕೂಲಿ ಕೆಲಸವಿಲ್ಲದೆ ಜೀವನ ನಡೆಸಲು ಪರದಾಡುವಂತಾಗಿದೆ. ರಸ್ತೆ ಅಗಲೀಕರಣಕ್ಕಾಗಿ ರಸ್ತೆ ಬದಿಯಲ್ಲಿನವರ ಮನೆಗಳನ್ನು ತೆರವು ಮಾಡಿದ್ದರಿಂದ ಅಳಿದುಳಿದ ಮನೆಗಳಲ್ಲೇ ಜನರು ವಾಸಿಸುತ್ತಿದ್ದಾರೆ. ಆದರೆ ತಾಲೂಕು ಆಡಳಿತ ಹಾಗೂ ಪಟ್ಟಣ ಪಂಚಾಯಿತಿ ಭರವಸೆಗಳನ್ನು ಮಾತ್ರ ನೀಡುತ್ತಿವೆ. ಈವರೆಗೂ ಯಾವೊಬ್ಬ ಜನಪ್ರತಿನಿಧಿಗಳು ಸೂಕ್ತ ಪರ್ಯಾಯ ಮಾರ್ಗದ ಬಗ್ಗೆ ಚಕಾರ ಎತ್ತುತ್ತಿಲ್ಲ. ಪರಿಹಾರ ಕಲ್ಪಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಮೊಳಕಾಲ್ಮೂರು ಪಟ್ಟಣ ಹಾಗೂ ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ತಾಲೂಕಿನ ಬಹುತೇಕ ಗ್ರಾಮಗಳ ರಸ್ತೆಗಳು ಹಾಳಾಗಿದ್ದು ಸುಗಮ ಸಂಚಾರಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ಪಟ್ಟಣದಲ್ಲಿ ನಡೆಯುವ ರಸ್ತೆ ಕಾಮಗಾರಿಯಿಂದ ಮನೆ ಕಳೆದುಕೊಂಡವರಿಗೆ ಈವರೆಗೂ ತಾಲೂಕು ಆಡಳಿತ ಹಾಗೂ ಪಟ್ಟಣ ಪಂಚಾಯಿತಿ ಪರಿಹಾರ ನೀಡದೆ ಸುಳ್ಳು ಭರವಸೆ ನೀಡುತ್ತಿವೆ. -ಆರ್. ರವಿಚಂದ್ರ, ರಾಷ್ಟ್ರೀಯ ವಾಲ್ಮೀಕಿ ನಾಯಕ ಮಹಾವೇದಿಕೆ ರಾಜ್ಯಾಧ್ಯಕ್ಷ
ಮಳೆಯಿಂದ ಬಡವರ ಜೀವನ ಅಸ್ತವ್ಯಸ್ತಗೊಂಡಿದೆ. ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಜನಸಾಮಾನ್ಯರಿಗೆ ಯಾವುದೇ ಅನಾಹುತವಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. -ಎಂ. ರಾಮಾಂಜನೇಯ, ಕರ್ನಾಟಕ ನವನಿರ್ಮಾಣ ಸೇನಾ ಸಮಿತಿ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ