ನೀರಿನ ಸಮಸ್ಯೆಗೆ ಅಧಿಕಾರಿಗಳೇ ಕಾರಣ


Team Udayavani, May 2, 2020, 3:25 PM IST

2-May-19

ಹಿರಿಯೂರು: ನಗರದ ಗ್ರಾಮಾಂತರ ಪೊಲೀಸ್‌ ಠಾಣೆ ಆವರಣದಲ್ಲಿ ರೈತ ಮುಖಂಡರ ಸಭೆ ನಡೆಯಿತು.

ಹಿರಿಯೂರು: ತಾಲೂಕಿನ ವಾಣಿವಿಲಾಸ ಜಲಾಶಯದಿಂದ ವೇದಾವತಿ ನದಿ ಮೂಲಕ ಚಳ್ಳಕೆರೆ ತಾಲೂಕಿನ ನದಿ ಪಾತ್ರದ ಹಳ್ಳಿಗಳಿಗೆ ನೀರು ಹರಿಸುವ ವಿಚಾರದಲ್ಲಿ ಸವಾಲು, ಪ್ರತಿ ಸವಾಲು ಹಾಕಿ ಸಮಸ್ಯೆಯನ್ನು ಇನ್ನಷ್ಟು ಜಟಿಲಗೊಳಿಸಬಾರದು. ಬದಲು ಸೂಕ್ತ ಪರಿಹಾರಕ್ಕೆ ಮುಂದಾಗಬೇಕು ಎಂದು ರೈತ ಮುಖಂಡ ಆರನಕಟ್ಟೆ ಶಿವಕುಮಾರ್‌ ಹೇಳಿದರು.

ನಗರದ ಗ್ರಾಮಾಂತರ ಪೊಲೀಸ್‌ ಠಾಣೆ ಆವರಣದಲ್ಲಿ ವೇದಾವತಿ ನದಿಗೆ ನೀರು ಬಿಡುಗಡೆ ವಿಚಾರದಲ್ಲಿ ಉಂಟಾಗಿರುವ ಸಮಸ್ಯೆ ಹಿನ್ನೆಲೆಯಲ್ಲಿ ತಹಶೀಲ್ದಾರ್‌ ಸತ್ಯನಾರಾಯಣ ಅಧ್ಯಕ್ಷತೆಯಲ್ಲಿ ನಡೆದ ರೈತ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು. ಜಲಾಶಯ ನಿರ್ವಹಣೆ ಮತ್ತು ನೀರನ್ನು ಸಂರಕ್ಷಣೆ ಮಾಡುವ ಹೊಣೆಗಾರಿಕೆ ಜಲಸಂಪನ್ಮೂಲ ಇಲಾಖೆಗೆ ಸಂಬಂಧಿಸಿದೆ. ಚಳ್ಳಕೆರೆ ತಾಲೂಕಿಗೆ ನೀರು ಬಿಡುವ ಬಗ್ಗೆ ಪ್ರಾದೇಶಿಕ ಆಯುಕ್ತರು ಹಾಗೂ ನೀರಾವರಿ ಸಲಹಾ ಸಮಿತಿ ತೀರ್ಮಾನ ಮಾಡಬೇಕು ಎಂದರು.

ಈ ಮೊದಲು ಚಳ್ಳಕೆರೆ ತಾಲೂಕಿನ ವೇದಾವತಿ ನದಿ ಪಾತ್ರದ ಹಳ್ಳಿಗಳಿಗೆ ಕುಡಿಯುವ ನೀರಿಗಾಗಿ 0.25 ಟಿಎಂಸಿ ನೀರು ಬಿಡುವ ಕುರಿತು ಪ್ರಾದೇಶಿಕ ಆಯುಕ್ತರು ಎರಡು ಬಾರಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಜಿಲ್ಲೆಯ ಶಾಸಕರ ಅಭಿಪ್ರಾಯ ಪಡೆದು ಆದೇಶ ಹೊರಡಿಸಿದ್ದಾರೆ. ಈಗ ಹೆಚ್ಚುವರಿ ನೀರು ಬಿಡಬೇಕಾದರೂ ಇದೇ ನಿಯಮ ಅನುಸರಿಸಬೇಕಿತ್ತು. ನೀರಾವರಿ ಸಲಹಾ ಸಮಿತಿ ಆದೇಶವಿಲ್ಲದೆ ನೀರು ಹರಿಸಲು ಹೋಗಿ ಅಧಿಕಾರಿಗಳು ಗೊಂದಲ ಉಂಟು ಮಾಡಿದ್ದಾರೆ ಎಂದು ಆರೋಪಿಸಿದರು.

ವಾಣಿವಿಲಾಸ ಜಲಾಶಯದಿಂದ 0.25 ಟಿಎಂಸಿ ನೀರು ವೇದಾವತಿ ನದಿ ಮೂಲಕ ಹರಿದು ಚಳ್ಳಕೆರೆಯನ್ನು ತಲುಪುತ್ತದೆಯೋ ಇಲ್ಲವೋ ಎಂಬ ಅಂದಾಜು ಇರಬೇಕಾಗಿತ್ತು. ಅದನ್ನು ಅಂದಾಜಿಸದೆ ಆದೇಶ ಹೊರಡಿಸಿದ್ದು ಎಷ್ಟು ಸರಿ ಎಂದರು. ಡಿವೈಎಸ್‌ಪಿ ರಮೇಶ್‌ ಮಾತನಾಡಿ,ಸರ್ಕಾರ ಲಾಕ್‌ಡೌನ್‌ ಘೋಷಣೆ ಮಾಡಿದೆ. ಇಂತಹ ಪರಿಸ್ಥಿತಿಯಲ್ಲಿ ರೈತರು ಪ್ರತಿಭಟನೆ ನಡೆಸದೆ ಶಾಂತಿ ಕಾಪಾಡಬೇಕು. ಇದೆಲ್ಲಾ ಮುಗಿದ ನಂತರ ಕ್ಷೇತ್ರದ ಶಾಸಕರು, ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು, ರೈತ ಮುಖಂಡರು ಚರ್ಚೆ ನಡೆಸೋಣ ಎಂದರು. ಕಸವನಹಳ್ಳಿ ರಮೇಶ್‌, ಎಚ್‌.ಆರ್‌. ತಿಮಯ್ಯ, ಆಲೂರು ಸಿದ್ದರಾಮಣ್ಣ, ನಾರಾಯಣಾಚಾರ್‌, ಪಿ.ಕೆ. ಗೌಡ, ಕೆ.ಟಿ. ತಿಪ್ಪೇಸ್ವಾಮಿ, ಸಿಪಿಐ ರಾಘವೇಂದ್ರ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.