ಕೋವಿಡ್ ನಿರ್ಮೂಲನೆಗೆ ಸಂಕಲ್ಪಮಾಡಿ: ಪೂರ್ಣಿಮಾ
Team Udayavani, Jun 29, 2020, 3:37 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹಿರಿಯೂರು: ಆರೋಗ್ಯ ಇಲಾಖೆ ಹಾಗೂ ಸರ್ಕಾರದ ನಿಯಮಗಳನ್ನು ಎಲ್ಲರೂ ಪಾಲಿಸಿ ಕೋವಿಡ್ ವೈರಸ್ ಹೊಡೆದೋಡಿಸಲು ಸಂಕಲ್ಪ ಮಾಡಬೇಕು ಎಂದು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕರೆ ನೀಡಿದರು.
ನಗರದ ತಾಲೂಕು ಕ್ರೀಡಾಂಗಣದಲ್ಲಿ ಕೋವಿಡ್ ವಾರಿಯರ್ಸ್ಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಳೆದ ಮೂರು ತಿಂಗಳುಗಳಿಂದ ತಾಲೂಕು ಆಡಳಿತದ ಸಿಬ್ಬಂದಿ ವರ್ಗ, ಪೊಲೀಸ್ ಮತ್ತು ಆರೋಗ್ಯ ಇಲಾಖೆ, ಪೌರಕಾರ್ಮಿಕರು, ಆಶಾ ಕಾರ್ಯಕರ್ತೆಯರ ಸೇವೆ ಅಭಿನಂದನಾರ್ಹ. ಇವರ ಜೊತೆಗೆ ಶಿಕ್ಷಣ ಇಲಾಖೆ, ವಿವಿಧ ಇಲಾಖೆಗಳ ನೌಕರರು ಕೂಡ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಸಮಾಜದಲ್ಲಿನ ಪ್ರತಿಯೊಬ್ಬ ಯುವಕರೂ ಕೋವಿಡ್ ವಾರಿಯರ್ ಆಗಬೇಕೆಂದರು.
ಆರೋಗ್ಯ ಇಲಾಖೆಯ ಡಾ| ರಂಗನಾಥ್ ಮಾತನಾಡಿ, ಕೋವಿಡ್ ವೈರಸ್ ಬಗ್ಗೆ ಸಾರ್ವಜನಿಕರು ಭಯ ಪಡದೆ ಎಚ್ಚರಿಕೆ ವಹಿಸಿ ಮಾರ್ಗಸೂಚಿಗಳನ್ನು ಅನುಸರಿಸುವುದು ಬಹಳ ಮುಖ್ಯ. ಕೋವಿಡ್ ರೋಗಿಗಳೆಲ್ಲರೂ ಸಾಯುವುದಿಲ್ಲ. ನಮ್ಮ ದೇಶದಲ್ಲಿ ಸಾವಿನ ಪ್ರಮಾಣ ಕಡಿಮೆ ಇದೆ. ದೀರ್ಘ ಕಾಲ ಅನಾರೋಗ್ಯಪೀಡಿತರಾಗಿದ್ದು ರೋಗ ನಿರೋಧಕ ಶಕ್ತಿ ಕಡಿಮೆ ಇದ್ದಂಥವರು ಮಾತ್ರ ಸಾವನ್ನಪ್ಪುತ್ತಾರೆ. ಯಾವುದೇ ಕಾಯಿಲೆಗೆ ಔಷಧಿ ಕಂಡು ಹಿಡಿದು ಪ್ರಯೋಗ ಮಾಡಿ ಬಿಡುಗಡೆ ಮಾಡಲು ಕನಿಷ್ಠ ಎಂಟು ತಿಂಗಳು ಬೇಕು. ಈ ಕಾಯಿಲೆ ಬಂದು ಕೇವಲ ನಾಲ್ಕು ತಿಂಗಳಾಗಿದೆ. ಕಾಯಿಲೆ ಗುಣಪಡಿಸುವಂತಹ ಲಸಿಕೆಯ ಪ್ರಯೋಗ ನಡೆದಿದೆ ಎಂದು ತಿಳಿಸಿದರು.
ಬಿಜೆಪಿ ಮುಖಂಡ ಡಿ.ಟಿ. ಶ್ರೀನಿವಾಸ್, ತಾಲೂಕು ಆರೋಗ್ಯ ಅಧಿಕಾರಿ ಡಾ| ವೆಂಕಟೇಶ್, ತಾಪಂ ಇಒ ಹನುಮಂತಪ್ಪ, ಡಿವೈಎಸ್ಪಿ ರೋಷನ್ ಜಮೀರ್, ಪೌರಾಯುಕ್ತರಾದ ಲೀಲಾವತಿ, ಬಿಇಒ ಪಿ. ರಾಮಯ್ಯ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ. ಶಿವಾನಂದ, ಕೇಶವಮೂರ್ತಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ