ಸ್ವಚ್ಛತೆಗೆ ಆದ್ಯತೆ ನೀಡಲು ಸದಸ್ಯರ ಒತ್ತಾಯ


Team Udayavani, Mar 20, 2020, 2:53 PM IST

20-March-29

ಹಿರಿಯೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ನಗರದಲ್ಲಿ ಸ್ವತ್ಛತೆಗೆ ಹೆಚ್ಚು ಆದ್ಯತೆ ಕೊಡಬೇಕು ಹಾಗೂ ನಗರದ ನಾಗರಿಕರಿಗೆ ಶುದ್ಧ ಕುಡಿಯುವ ನೀರನ್ನು ಯಾವುದೇ ತಾರತಮ್ಯ ಆಗದ ರೀತಿಯಲ್ಲಿ ಪೂರೈಕೆ ಮಾಡಬೇಕು ಎಂದು ನಗರಸಭಾ ಸದಸ್ಯರುಗಳಾದ ಅನಿಲ್‌ಕುಮಾರ್‌, ಎಂ.ಡಿ. ಸಣ್ಣಪ್ಪ, ಗುಂಡೇಶ್‌ಕುಮಾರ್‌, ಮಹೇಶ್‌ ಪಲ್ಲವ್‌ ಮತ್ತಿತರರು ನಗರಸಭೆ ಪೌರಾಯುಕ್ತರನ್ನು ಒತ್ತಾಯಿಸಿದರು.

ನಗರಸಭೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ನಗರಸಭೆ ಸದಸ್ಯ ಎಚ್‌.ಎಸ್‌. ಅನಿಲ್‌ಕುಮಾರ್‌, 11ನೇ ವಾರ್ಡ್‌ನಲ್ಲಿ ನಲ್ಲಿಗಳಲ್ಲಿ ಕೊಳಕು ನೀರು ಬರುತ್ತಿದೆ. ಆರು ತಿಂಗಳಿಂದ ಹೇಳುತ್ತಿದ್ದರೂ ಸರಿಪಡಿಸಿಲ್ಲ. ಜನರಿಗೆ ನಾವು ಏನು ಉತ್ತರ ಕೊಡಬೇಕು ಎಂದು ಪ್ರಶ್ನಿಸಿದರು.

ನಗರದಲ್ಲಿ ಸ್ವಚ್ಛತೆಯ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿಬರುತ್ತಿದೆ. ಈ ಬಗ್ಗೆ ಹೇಳಿದಾಗೆಲ್ಲ ಸಿಬ್ಬಂದಿ ಕೊರತೆ ಎನ್ನುತ್ತೀರಿ. ಪೌರಾಯುಕ್ತರು ನಗರಸಭೆ ಸದಸ್ಯರು ಹಾಗೂ ನೌಕರರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಬೇಕು. ನಿಮ್ಮ ಬಗ್ಗೆ ಸಾಕಷ್ಟು ಸಾರ್ವಜನಿಕರಿಂದ ದೂರು ಬರುತ್ತಿವೆ, ಸಿಬ್ಬಂದಿ ಕೊಡುವಂತೆ ಜಿಲ್ಲಾಧಿಕಾರಿಗಳ ಬಳಿ ನಿಯೋಗ ಹೋಗೋಣ ಎಂದು ಸದಸ್ಯ ಅಜಯ್‌ ಕುಮಾರ್‌ ತಿಳಿಸಿದರು.

ಸದಸ್ಯ ಎಸ್‌.ಪಿ.ಟಿ ದಾದಾಪೀರ್‌ ಮಾತನಾಡಿ, ನಗರಸಭೆಯಲ್ಲಿ ಇ-ಸ್ವತ್ತು ಮಾಡುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕವಾಗಿ ದೂರುಗಳು ಬರುತ್ತಿದೆ. ಇ-ಸ್ವತ್ತು ಮಾಡಿಸಲು ಬೇಕಿರುವ ದಾಖಲೆಗಳ ಪಟ್ಟಿಯನ್ನು ನೋಟಿಸ್‌ ಬೋರ್ಡ್‌ನಲ್ಲಿ ಪ್ರಕಟಿಸಿ. ನಿಗದಿತ ದಿನಾಂಕದೊಳಗೆ ಖಾತೆ ಮಾಡಿ ಕೊಡಿ. ತಿಂಗಳಿಗೊಮ್ಮೆ ಜನ ಸಂಪರ್ಕ ಸಭೆ ನಡೆಸುವ ಮೂಲಕ ಜನಸ್ನೇಹಿ ಆಡಳಿತ ನೀಡಿ ಎಂದು ಸಲಹೆ ನೀಡಿದರು.

ಸದಸ್ಯೆ ಶಿವರಂಜಿನಿ ಮಾತನಾಡಿ, ನಗರದಲ್ಲಿ ಎಂಟು ಸಾರ್ವಜನಿಕ ಶೌಚಾಲಯಗಳಿದ್ದರೂ ಒಂದೆರಡು ಮಾತ್ರ ಬಳಕೆಯಲ್ಲಿವೆ. ಪ್ರಧಾನ ರಸ್ತೆಯಲ್ಲಿ ಸುಸಜ್ಜಿತ ಶೌಚಾಲಯ ನಿರ್ಮಿಸಬೇಕು. ನಗರದ ಎಲ್ಲ ವಾರ್ಡ್‌ಗಳಿಗೂ ತಾರತಮ್ಯ ಮಾಡದೆ ಕುಡಿಯುವ ನೀರು ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿದರು.

ಸದಸ್ಯರ ಮಾತಿಗೆ ಸ್ಪಂದಿಸದ ಸಿಬ್ಬಂದಿ ವಿರುದ್ಧ ಕ್ರಮ ಜರುಗಿಸಬೇಕು ಎಂದು ಸದಸ್ಯೆಯರಾದ ಎನ್‌. ಮಮತಾ, ಎಂ. ಸುರೇಖಾ ಆಗ್ರಹಿಸಿದರು.

ಪೌರಾಯುಕ್ತ ಶಿವಪ್ರಸಾದ್‌ ಮಾತನಾಡಿ, ನಮ್ಮ ನಗರಸಭೆಗೆ ಕೆಲಸ ನಿರ್ವಹಿಸಲು ಕನಿಷ್ಠ 100 ಜನ ಪೌರಕಾರ್ಮಿಕರು, 16 ಲೋಡರ್‌
ಗಳು ಬೇಕು. ಪ್ರಸ್ತುತ 34 ಕಾಯಂ ನೌಕರರು ಸೇರಿ 63 ಜನರಿದ್ದಾರೆ. ನಮ್ಮಲ್ಲಿ ಕನಿಷ್ಠ 6ಜನ ಆರೋಗ್ಯ ನಿರೀಕ್ಷಕರು ಇರಬೇಕು, ಸದ್ಯಕ್ಕೆ ಒಬ್ಬರು ಮಾತ್ರ ಕೆಲಸ ಮಾಡುತ್ತಿದ್ದು, ಸದಸ್ಯರು ಸಹಕರಿಸಬೇಕು. ಗುತ್ತಿಗೆ ಆಧಾರದ ಮೇಲೆ ನೌಕರರನ್ನು ನೇಮಿಸಿಕೊಳ್ಳಲು ಜಿಲ್ಲಾಧಿಕಾರಿಗಳ ಬಳಿ ನಿಯೋಗ ಹೋಗಲು ಸದಸ್ಯರು ಸಲಹೆ ನೀಡಿದ್ದು ಇದಕ್ಕೆ ಸಹಮತವಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರೇಣುಕಾಸ್ವಾಮಿ ಕುಟುಂಬಕ್ಕೆ ನಟ ವಿನೋದ್‌ ರಾಜ್‌ ಸಾಂತ್ವನ

Renukaswamy ಕುಟುಂಬಕ್ಕೆ ನಟ ವಿನೋದ್‌ ರಾಜ್‌ ಸಾಂತ್ವನ

1-weewq

Bharamasagara; ಸ್ಥಳೀಯ ಟಿಪ್ಪರ್ ಗಳನ್ನು ಬಳಸಿಕೊಳ್ಳಲು ಆಗ್ರಹಿಸಿ ಪ್ರತಿಭಟನೆ

Nayakanahatti

Nayakanahatti; ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಕಳ್ಳರ ಗ್ಯಾಂಗ್

Chitradurga

Congress Government; ಮೊದಲು ನಿಮ್ಮ ಕಾಲದ ಹಗರಣಕ್ಕೆ ಉತ್ತರ ಕೊಡಿ: ಬಿವೈವಿ

Renuka Swamy Case: ಎ 4 ತಾಯಿ ನಿಧನ; ವಿಡಿಯೋ ಕಾಲ್‌ನಲ್ಲಿ ಅಂತಿಮ ದರ್ಶನ

Renuka Swamy Case: ಎ 4 ತಾಯಿ ನಿಧನ; ವಿಡಿಯೋ ಕಾಲ್‌ನಲ್ಲಿ ಅಂತಿಮ ದರ್ಶನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.