ಮದ್ಯ ನಿಷೇಧಕ್ಕೆ ಒತ್ತಾಯ
Team Udayavani, May 11, 2020, 6:09 PM IST
ಸಾಂದರ್ಭಿಕ ಚಿತ್ರ
ಹಿರಿಯೂರು: ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಆರಂಭಿಸಿರುವ ಮದ್ಯದಂಗಡಿಗಳನ್ನು ಮುಚ್ಚಿ ರಾಜ್ಯದಲ್ಲಿ ಮದ್ಯಪಾನವನ್ನು ಸಂಪೂರ್ಣ ನಿಷೇಧ ಮಾಡಬೇಕೆಂದು ಒತ್ತಾಯಿಸಿ ಅಖೀಲ ಭಾರತ ವೀರಶೈವ ಮಹಾಸಭಾದ ಮಹಿಳಾ ಘಟಕದ ವತಿಯಿಂದ ತಹಶೀಲ್ದಾರ್ ಜಿ.ಎಚ್. ಸತ್ಯನಾರಾಯಣ ಅವರಿಗೆ ಮನವಿ ಸಲ್ಲಿಸಲಾಯಿತು.
ಸರ್ಕಾರ ಮದ್ಯವನ್ನು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅವಕಾಶ ನೀಡಿರುವುದು ಆಘಾತಕಾರಿ ಬೆಳವಣಿಗೆ. ಕುಡಿತದ ಗೀಳಿಗೆ ಒಳಗಾದವರು ಸಮಾಜದ ಸ್ವಾಸ್ತ್ಯವನ್ನೇ ಹಾಳು ಮಾಡುತ್ತಿದ್ದಾರೆ. ಮದ್ಯ ನಿಷೇಧಕ್ಕೆ ಮಾಡುತ್ತಿರುವ ಹೋರಾಟ ಇಂದು ನಿನ್ನೆಯದಲ್ಲ. ರಾಜ್ಯದಲ್ಲಿ ಕೆಲವೇ ತಿಂಗಳುಗಳ ಹಿಂದೆ ಬಿರುಬಿಸಿಲಿನಲ್ಲಿ ಬರಿಗಾಲಿನಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಮಹಿಳೆಯರು ತಮ್ಮ ಚಿಕ್ಕ ಮಕ್ಕಳನ್ನು ಹೊತ್ತುಕೊಂಡು ವಿಧಾನಸೌಧದ ಹೊಸ್ತಿಲು ತುಳಿದು ಮದ್ಯ ನಿಷೇಧಕ್ಕೆ ಆಗ್ರಹಿಸಿದ್ದರು. ನೋವಿನಿಂದ ದಣಿದ ಹೆಜ್ಜೆಯ ಪಸೆ ಆರುವ ಮೊದಲೇ ಸರ್ಕಾರ ಮದ್ಯದಂಗಡಿಗಳಿಗೆ ಪರವಾನಗಿ ಕೊಟ್ಟಿರುವುದು ಖಂಡನೀಯ ಎಂದು ಮನವಿಯಲ್ಲಿ ಆಕ್ಷೇಪಿಸಲಾಗಿದೆ.
ಅಖೀಲ ಭಾರತ ವೀರಶೈವ ಮಹಾಸಭಾದ ಮಹಿಳಾ ಘಟಕದ ಅಧ್ಯಕ್ಷೆ ಶಶಿಕಲಾ ರವಿಶಂಕರ್, ಸರ್ವಮಂಗಳ ರಮೇಶ್, ಶ್ಯಾಮಲಾ ಸತೀಶ್, ತ್ರಿವೇಣಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು