ಹೊಳಲ್ಕೆರೆ: ದಿಢೀರ್ ಕುಸಿದು ಬಿದ್ದ ಮನೆಯ ಗೋಡೆ : ಮನೆಮಂದಿ ಅದೃಷ್ಟವಶಾತ್ ಪಾರು
Team Udayavani, Nov 6, 2022, 7:55 AM IST
ಹೊಳಲ್ಕೆರೆ : ಇತ್ತೀಚೆಗೆ ಸುರಿದ ಮಳೆಯಿಂದ ಗೊಡೆಗಳು ಹಸಿಯಾಗಿದ್ದ ಪರಿಣಾಮ ಮನೆಯ ಗೋಡೆಗಳು ಇದ್ದಕ್ಕಿದ್ದಂತೆ ಕುಸಿದು ಬಿದ್ದ ಪರಿಣಾಮ ಮನೆಯಲ್ಲಿದ್ದ ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ದೊಗ್ಗನಾಳ್ ಗ್ರಾಮದಲ್ಲಿ ಸಂಭವಿಸಿದೆ.
ಇತ್ತೀಚೆಗೆ ಹಲವಾರು ದಿನಗಳಿಂದ ಸುರಿದ ಧಾರಾಕಾರ ಮಳೆಯಿಂದ ಮನೆಯ ಗೋಡೆಯೊಳಗೆ ನೀರು ಹೋದ ಪರಿಣಾಮ ಗೋಡೆ ಸಂಪೂರ್ಣವಾಗಿ ಹಸಿಯಾಗಿ ದಿಢೀರ್ ಗೋಡೆ ಕುಸಿದು ಬಿದ್ದಿದೆ. ಗೋಡೆ ಕುಸಿದು ಬಿದ್ದ ಪರಿಣಾಮ ಮನೆಯಲ್ಲಿದ್ದ ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಹಲವಾರು ಮನೆಗಳ ಗೋಡೆಗಳು ಮಳೆಗೆ ಹಸಿಯಾಗಿದ್ದು ನೆಲಕ್ಕೆ ಉರುಳುವ ಸಾಧ್ಯತೆಯಿದ್ದು ಗ್ರಾಮದಲ್ಲಿ ಆತಂಕ ಸೃಷ್ಟಿಯಾಗಿದೆ. ಹಾಗಾಗಿ ಸ್ಥಳಕ್ಕೆ ತಾಲೂಕು ಆಡಳಿತ ಭೇಟಿ ನೀಡಬೇಕು. ಮನೆಗಳನ್ನು ಪರಿಶೀಲಿಸಿ ದುರಸ್ತಿಗೊಳಿಸಲು ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಇನ್ನು ಹಲವಾರು ದಿನಗಳಿಂದ ಸುರಿದ ಮಳೆಯಿಂದಾಗಿ ಹಲವಾರು ವರ್ಷಗಳ ಹಿಂದೆ ಕಟ್ಟಿದ ಮನೆಗಳು ಶಿಥಿಲಗೊಂಡಿವೆ .ಹಾಗಾಗಿ ತಾಲೂಕು ಆಡಳಿತ ಸ್ಥಳಕ್ಕೆ ಭೇಟಿ ನೀಡಿ, ಶಿಥಿಲಗೊಂಡ ಮನೆಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮದ ಮುಖಂಡರಾದ ಧೋತಿ ಗೋವಿಂದಪ್ಪ, ಕುಮಾರಸ್ವಾಮಿ ಸೇರಿದಂತೆ ಹಲವಾರು ಜನರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ಬ್ಯಾಂಡ್ನೊಂದಿಗೆ ಎತ್ತಿನ ಗಾಡಿಯಲ್ಲಿ ಮಾಹಿತಿ ಒಯ್ದ ಆರ್ಟಿಐ ಕಾರ್ಯಕರ್ತ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ
Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ