ರಾತ್ರಿ ಊಟ ಮಾಡಿ ಮಲಗಿದ್ದ ಫೋಟೋಗ್ರಾಫರ್ ಬೆಳಗಾಗುತ್ತಲೇ ಭೀಕರ ಹತ್ಯೆ
Team Udayavani, Jan 14, 2023, 9:45 PM IST
ಚಿತ್ರದುರ್ಗ: ಅಕ್ಕನ ಮನೆಯಲ್ಲಿ ರಾತ್ರಿ ಊಟ ಮಾಡಿ ಮಲಗಿದ್ದ ವ್ಯಕ್ತಿ ಬೆಳಗಾಗುತ್ತಲೇ ಭೀಕರವಾಗಿ ಹತ್ಯೆಯಾಗಿರುವ ಘಟನೆ ಹೊಳಲ್ಕೆರೆ ತಾಲೂಕಿನ ಶಿವಗಂಗ ಗ್ರಾಮದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಬಸವರಾಜ್ ಎನ್ನಲಾಗಿದೆ. ವೃತ್ತಿಯಲ್ಲಿ ಫೋಟೋಗ್ರಾಫರ್ ಆಗಿರುವ ಬಸವರಾಜ್ ಅಕ್ಕನ ಜೊತೆ ಊಟ ಮಾಡಿ ಮಲಗಿದ್ದರು ಬೆಳಿಗ್ಗೆ ಎದ್ದು ನೋಡುವಾಗ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಮುಖದ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ ಮಾಡಲಾಗಿದೆ ಎನ್ನಲಾಗಿದೆ.
ಈ ಸಂಬಂಧ ಹೊಳಲ್ಕೆರೆ ತಾಲ್ಲೂಕು ಚಿತ್ರಹಳ್ಳಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಹೊಳಲ್ಕೆರೆ ವೃತ್ತ ನಿರೀಕ್ಷಕ ರವೀಶ್ ಸೇರಿದಂತೆ ಹಲವಾರು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸ್ಥಳಪರಿಶೀಲನೆ ನಡೆಸಿದ್ದು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಹತ್ಯೆಯಾದ ಬಸವರಾಜನಿಗೆ ಮೂರು ಮಕ್ಕಳಿದ್ದು ,ಹೆಂಡತಿ ತವರು ಮನೆಗೆ ಹೆರಿಗೆಗೆ ಹೋಗಿ 2 ತಿಂಗಳಾಗಿತ್ತು. ಈ ಸಂದರ್ಭದಲ್ಲಿ ನಡೆದ ಹತ್ಯೆಯಿಂದ ಸಾಕಷ್ಟು ಅನುಮಾನಗಳು ಮೂಡಿದ್ದು ಪೊಲೀಸರ ತನಿಖೆಯಿಂದ ಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಾಗಿದೆ.
ಈ ಹತ್ಯೆಯಿಂದ ಶಿವಗಂಗ ಗ್ರಾಮ ಸೇರಿದಂತೆ ಸುತ್ತಮುತ್ತಲ ಹಳ್ಳಿಗಳ ನಾಗರಿಕರು ಬೆಚ್ಚು ಬಿದ್ದಿದ್ದು, ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.
ಇದನ್ನೂ ಓದಿ: ವಾಡಿ: ಗೂಡ್ಸ್ ರೈಲು ಅಪಘಾತ… ತಪ್ಪಿದ ದುರಂತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ