ಜಲಮೂಲ ರಕ್ಷಣೆಗೆ ಆದ್ಯತೆ
Team Udayavani, May 29, 2020, 3:28 PM IST
ಸಾಂದರ್ಭಿಕ ಚಿತ್ರ
ಹೊಳಲ್ಕೆರೆ: ನೂರು ಕೋಟಿ ರೂ. ಅನುದಾನದಲ್ಲಿ ಕ್ಷೇತ್ರದಲ್ಲಿನ ಜಲಮೂಲಗಳ ರಕ್ಷಣೆಗೆ ಆದ್ಯತೆ ನೀಡಿದೆ. ನೀರಿನ ಸಂರಕ್ಷಣೆ ಮಾಡದಿದ್ದಲ್ಲಿ ಜೀವಸಂಕುಲದ ಬದುಕು ದುಸ್ತರವಾಗಲಿದೆ ಎಂದು ಶಾಸಕ ಎಂ. ಚಂದ್ರಪ್ಪ ಹೇಳಿದರು.
ತಾಲೂಕಿನ ಮಲ್ಲಾಡಿಹಳ್ಳಿ-ಶಿವಪುರ ಮಾರ್ಗದಲ್ಲಿ ಹರಿಯುವ ಹಿರೇಹಳ್ಳದ ನೀರು ತಡೆಗಟ್ಟಲು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ ಬ್ಯಾರೇಜ್ ಕಾಮಗಾರಿ ಪರಿಶೀಲಿಸಿ ಅವರು ಮಾತನಾಡಿದರು. ಹಿರೇಹಳ್ಳ ರೈತರ ಜೀವನಾಡಿಯಾಗಿದ್ದು, ಮಳೆಗಾಲದಲ್ಲಿ ಸಾಕಷ್ಟು ನೀರು ಹಳ್ಳದಲ್ಲಿ ಹರಿದು ಹೋಗುತ್ತದೆ. ಆ ನೀರಿನ ಬಳಕೆಗೆ ಬ್ಯಾರೇಜ್ ನಿರ್ಮಿಸಲಾಗುತ್ತಿದೆ. ಗಂಗಸಮುದ್ರ, ರಾಮಗಿರಿ, ಹೊಸೂರು, ತಾಳಿಕಟ್ಟೆ, ಹನುಮಲಿ, ದೊಗ್ಗನಾಳ್, ಮಲ್ಲಾಡಿಹಳ್ಳಿ, ಶಿವಪುರ ಭಾಗದಲ್ಲಿ ಹರಿಯುವ ಹಿರೇಹಳ್ಳ ನೂರಾರು ಗ್ರಾಮಗಳ ಮೂಲಕ ಶಾಂತಿಸಾಗರವನ್ನು ಸೇರುತ್ತದೆ. ನೀರಿನ ಸದ್ಬಳಕೆಗೆ ಅಲ್ಲಲ್ಲಿ ಬ್ಯಾರೇಜ್ ನಿರ್ಮಾಣ ಮಾಡಿ ನೀರು ನಿಲ್ಲಿಸಲಾಗುತ್ತದೆ. ಇದರಿಂದ ತೋಟಗಾರಿಕೆ ಕೃಷಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ಮಾಜಿ ಶಾಸಕ ಪಿ. ರಮೇಶ್, ತಾಪಂ ಸದಸ್ಯೆ ಗಿರಿಜಾ ಅಜ್ಜಯ್ಯ, ಜಿಪಂ ಮಾಜಿ ಅಧ್ಯಕ್ಷ ಪಿ.ಆರ್. ಶಿವಕುಮಾರ್, ಮುಖಂಡರಾದ ಪರಮೇಶ್ವರಪ್ಪ, ಮರುಳಸಿದ್ಧೇಶ್ವರ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ
Road mishap: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ; ಓರ್ವ ಸಾವು