Holalkere: ರೈಲಿನಿಂದ ಕೆಳಗೆ ಬಿದ್ದು ಮಹಿಳೆ ಸಾವು


Team Udayavani, May 26, 2024, 11:15 AM IST

2-holalkere

ಹೊಳಲ್ಕೆರೆ: ಚೀಟಿ ಹಣದಿಂದ ಒಂದು ವಾರ ಕುಟುಂಬಸ್ಥರ ಜತೆ ತಮಿಳುನಾಡು ಪ್ರವಾಸ ಕೈಗೊಂಡಿದ್ದ, ಹೊಳಲ್ಕೆರೆ ನಿರ್ಮಲಮ್ಮ ರೈಲಿನಿಂದ ಕಾಲುಜಾರಿ ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ ವರದಿಯಾಗಿದೆ.

ಈ ಘಟನೆ ತಮಿಳುನಾಡಿನ ಮಧುರೈ ಮಾರ್ಗದ ಧರ್ಮಪುರಿ ಸಮಿಪದ ಟೋನೂರು ಹತ್ತಿರ ಶುಕ್ರವಾರ ತಡರಾತ್ರಿ ಸಂಭವಿಸಿದೆ.

ಮೃತ ದುರ್ದೈವಿ ಹೊಳಲ್ಕೆರೆ ಪಟ್ಟಣದ ಒಂದನೇ ವಾರ್ಡ್‌ ಮುಷ್ಟಿಗರ ಹಟ್ಟಿಯ ರೈತ ಮುಖಂಡ ಕುಮಾರ್‌ ಆಚಾರ್‌ ಅವರ ಧರ್ಮಪತ್ನಿ ನಿರ್ಮಲಮ್ಮ (55) ಎನ್ನಲಾಗಿದೆ.

ಮೃತ ನಿರ್ಮಲಮ್ಮ ತಾನು ಸಂಗ್ರಹಿಸಿದ ಚೀಟಿ ಹಣದಿಂದ ಕುಟುಂಬಸ್ಥರಾದ 50 ಜನರ ತಂಡ ತಮಿಳುನಾಡು ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಿಸಲು ಪ್ರವಾಸ ಕೈಗೊಂಡಿದ್ದರು. ಪ್ರವಾಸ ಮುಗಿಸಿ ವಾಪಸ್‌ ಬರುವಾಗ ಮಧುರೈ ಮಾರ್ಗದಲ್ಲಿ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸುತ್ತಿರುವಾಗ ತಡರಾತ್ರಿ ಮೂತ್ರ ವಿಸರ್ಜನೆಗೆ ಶೌಚಾಲಯಕ್ಕೆ ಹೋದಾಗ ಆಕಸ್ಮಿಕವಾಗಿ ಕಾಲು ಜಾರಿ ಬೋಗಿಯಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ.

ಜತೆಯಲ್ಲಿದ್ದ ಪತಿ ಕುಮಾರ್‌ಆಚಾರ ಮುಂದಿನ ರೈಲ್ವೆ ನಿಲ್ದಾಣದಲ್ಲಿ ನಿದ್ದೆಯಿಂದ ಎಚ್ಚರಗೊಂಡಾಗ ಪತ್ನಿ ಕಾಣಿಸಲಿಲ್ಲ ಎಂದು ಗಾಬರಿಗೊಂಡು ಬೋಗಿ ಪರಿಶೀಲಿಸಿದಾಗ ಅವರ ಚಪ್ಪಲ್ಲಿ ಮತ್ತು ಫೋನ್‌ ಬೋಗಿಯ ಶೌಚಾಲಯದ ಹತ್ತಿರ ಬಿದ್ದಿರುವುದನ್ನು ನೋಡಿ ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ.

ತಕ್ಷಣ ಅದೇ ನಿಲ್ದಾಣದಲ್ಲಿ ಇಳಿದ ಕುಮಾರ್‌ ಆಚಾರ್‌ ಮತ್ತು ಅಳಿಯಂದಿರುವ ಹತ್ತಿರದ ಧರ್ಮಪುರಿ ಪೊಲೀಸ್‌ ಠಾಣೆಗೆ ದೂರು ನೀಡಿದಾಗ ಪೊಲೀಸ್‌ ಜತೆ ರೈಲ್ವೆ ಹಳಿ ಪರಿಶೀಲಿಸಿದಾಗ ಟೋನೂರು ಎಂಬಲ್ಲಿ ನಿರ್ಮಲಮ್ಮ ಶವವಾಗಿ ಪತ್ತೆಯಾಗಿದ್ದಾರೆ.

ನಿರ್ಮಲಮ್ಮ ನಿಧನಕ್ಕೆ ಕುಟುಂಬಸ್ಥರು ಸೇರಿ ಪಟ್ಟಣದ ಒಂದನೇ ವಾರ್ಡ್‌ ನಾಗರಿಕರು ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಧರ್ಮಪುರಿ ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದೆ.

ಮೃತರ ಶವವನ್ನು ಹೊಳಲ್ಕೆರೆಗೆ ತರಲು ಹೆಚ್ಚಿನ ಸಹಕಾರ ನೀಡಬೇಕೆಂದು ತಹಶೀಲ್ದಾರ್‌ ಬೀಬಿ ಪಾತೀಮ ಹಾಗೂ ಜಿಲ್ಲಾಧಿಕಾರಿಗಳಿಗೆ ಪುರಸಭೆ ಸದಸ್ಯೆ ಎಚ್‌.ಆರ್‌. ನಾಗರತ್ನಮ್ಮ ಮಾಹಿತಿ ನೀಡಿದ್ದಾರೆ. ಇದಕ್ಕೆ ಪೂರಕವಾಗಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರೇಣುಕಾಸ್ವಾಮಿ ಕುಟುಂಬಕ್ಕೆ ನಟ ವಿನೋದ್‌ ರಾಜ್‌ ಸಾಂತ್ವನ

Renukaswamy ಕುಟುಂಬಕ್ಕೆ ನಟ ವಿನೋದ್‌ ರಾಜ್‌ ಸಾಂತ್ವನ

1-weewq

Bharamasagara; ಸ್ಥಳೀಯ ಟಿಪ್ಪರ್ ಗಳನ್ನು ಬಳಸಿಕೊಳ್ಳಲು ಆಗ್ರಹಿಸಿ ಪ್ರತಿಭಟನೆ

Nayakanahatti

Nayakanahatti; ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಕಳ್ಳರ ಗ್ಯಾಂಗ್

Chitradurga

Congress Government; ಮೊದಲು ನಿಮ್ಮ ಕಾಲದ ಹಗರಣಕ್ಕೆ ಉತ್ತರ ಕೊಡಿ: ಬಿವೈವಿ

Renuka Swamy Case: ಎ 4 ತಾಯಿ ನಿಧನ; ವಿಡಿಯೋ ಕಾಲ್‌ನಲ್ಲಿ ಅಂತಿಮ ದರ್ಶನ

Renuka Swamy Case: ಎ 4 ತಾಯಿ ನಿಧನ; ವಿಡಿಯೋ ಕಾಲ್‌ನಲ್ಲಿ ಅಂತಿಮ ದರ್ಶನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.