ಡಾಬಾಗಳ ಮೇಲೆ ನಿಗಾ ಇರಲಿ
Team Udayavani, Apr 11, 2020, 4:47 PM IST
ಹೊನ್ನಾಳಿ: ಜಾಗೃತಿ ಪರಿಶೀಲನಾ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾಶಂಕರ್ ಮಾತನಾಡಿದರು.
ಹೊನ್ನಾಳಿ: ಡಾಬಾ ತೆರೆಯಲು ಅವಕಾಶ ನೀಡಿರುವುದರಿಂದ ತಾಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆಗಳು ಸಂಪೂರ್ಣ ನಿಗಾವಹಿಸಿ ನಿತ್ಯ ಪರಿಶೀಲಿಸುವ ಕಾರ್ಯ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾಶಂಕರ್ ಸೂಚಿಸಿದರು.
ತಾ.ಪಂ ಸಾಮಾರ್ಥ್ಯಸೌಧದಲ್ಲಿ ಶುಕ್ರವಾರ ಕೊರೊನಾ ಮುನ್ನೆಚ್ಚರಿಕೆ ಜಾಗೃತಿ ಪರಿಶೀಲನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ತಾಲೂಕು ಆಡಳಿತದಿಂದ ಡಾಬಾಗಳ ಸ್ಯಾನಿಟೈಸ್ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಹಾಗೂ ಡಾಬಾಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲ್ಲ ಸಿಬ್ಬಂದಿ ಸ್ಕ್ರೀನಿಂಗ್ ಮಾಡಬೇಕು ಎಂದರು. ಅನೇಕ ಸಂದರ್ಭಗಳಲ್ಲಿ ಬೇರೆ ರಾಜ್ಯಗಳಿಂದ ಲಾರಿ, ಸೇರಿದಂತೆ ಸಮಾಗ್ರಿ ಸಾಗಿಸುವ ಇತರ ವಾಹನಗಳ ಚಾಲಕರು ಹಾಗೂ ಇತರರು ಡಾಬಾಗಳಲ್ಲಿ ಊಟ ಮಾಡಿ ತೆರಳುತ್ತಾರೆ. ಇದರಿಂದ ಅವಘಡಗಳು ಜರುಗುವ ಸಂಭವವುಂಟು ಮುನ್ನೆಚ್ಚರಿಕೆ ಕ್ರಮ ವಹಿಸುವುದು ಉತ್ತಮ ಎಂದು ಹೇಳಿದರು.
ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮಾತನಾಡಿ, ಅನಾವಶ್ಯಕವಾಗಿ ತಿರುಗಾಡುವ ಪೆಡ್ಡೆ ಹುಡುಗರ ವಾಹನಗಳನ್ನು ವಶಪಡಿಸಿಕೊಂಡು ದೂರು ದಾಖಲು ಮಾಡಬೇಕು ಎಂದು ಪೊಲೀಸ್ ಇಲಾಖೆಗೆ ಸೂಚಿಸಿದರು. ತಹಶೀಲ್ದಾರ್ ತುಷಾರ್ ಬಿ.ಹೊಸೂರು ತಾಲೂಕಿನಲ್ಲಿ ಕೊರೊನಾ ಬಗ್ಗೆ ತೆಗೆದುಕೊಂಡು ಕ್ರಮಗಳ ಬಗ್ಗೆ ವಿವರಿಸಿದರು. ಜಿ.ಪಂ ಸಿಇಒ ಪದ್ಮಾಬಸಂತಪ್ಪ, ತಾ.ಪಂ ಇಒ ಎಸ್.ಎಲ್.ಗಂಗಾಧರಮೂರ್ತಿ, ನ್ಯಾಮತಿ ತಹಶೀಲ್ದಾರ್ ತನುಜಾ, ಡಿವೈಎಸ್ಪಿ ಪ್ರಶಾಂತಮನೊಳ್ಳಿ, ಸಿಪಿಐ ದೇವರಾಜ್, ತಾಲೂಕು ವೈದ್ಯಾಧಿ ಕಾರಿ ಡಾ| ಕೆಂಚಪ್ಪ, ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ