ಮರೆಯಾದ ಸಾಮಾಜಿಕ ಅಂತರ
Team Udayavani, Jun 3, 2020, 1:03 PM IST
ಸಾಂದರ್ಭಿಕ ಚಿತ್ರ
ಹೊನ್ನಾಳಿ: ಲಾಕ್ಡೌನ್ ಸಡಿಲಿಕೆ ಆದ ದಿನಗಳಿಂದ ಪಟ್ಟಣದಲ್ಲಿ ಜನರು ಸಾಗರೋಪಾದಿಯಲ್ಲಿ ಸಂಚರಿಸುತ್ತಿರುವುದು ಕೋವಿಡ್ ಮುಂದಿನ ದಿನಗಳಲ್ಲಿ ಯಾವ ರೀತಿ ತಗಲಿಕೊಳ್ಳಲಿದೆ ಎನ್ನುವ ಆತಂಕ ಸೃಷ್ಟಿಯಾಗಿದೆ.
ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ಮಾರ್ಚ್ ಕೊನೆ ವಾರದಿಂದ ಮೇ 31ರವರೆಗೆ ಕೇಂದ್ರ ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಿತ್ತು. ಲಾಕ್ ಡೌನ್ ಹಿನ್ನೆಲೆಯಲ್ಲಿ ಜನ, ವಾಹನ ಸಂಚಾರ ಹಿಡಿತದಲ್ಲಿತ್ತು. ಜೂನ್ 1ರಿಂದ ಲಾಕ್ಡೌನ್ ಸಡಿಲವಾದ ಕಾರಣ ಜನರು ಪಟ್ಟಣದಲ್ಲಿ ವ್ಯಾಪಕವಾಗಿ ಸಂಚಾರ ಪ್ರಾರಂಭಿಸಿದ್ದಾರೆ. ಪಟ್ಟಣದಲ್ಲಿ ಇದುವರೆಗೂ ತೆರೆಯದ ಬಟ್ಟೆ ಅಂಗಡಿಗಳು, ಸೆಲೂನ್ ಶಾಪ್ ಗಳು ತೆರೆದಿವೆ. ಜೂನ್ 8ರಿಂದ ಹೋಟೆಲ್ಗಳು ತೆರೆಯಲು ಅವಕಾಶ ನೀಡುವುದರಿಂದ ಜನದಟ್ಟಣೆ ಇನ್ನೂ ಹೆಚ್ಚಾಗಲಿದೆ. ರಸ್ತೆಯಲ್ಲಿ ಜನರು ಓಡಾಡುವಾಗ ಬಹಳಷ್ಟು ಜನರು ಮಾಸ್ಕ್ ಧರಿಸದೇ ಅಂತರ ಕಾಪಾಡದೇ ಸಂಚರಿಸುತ್ತಿದ್ದಾರೆ. ಇದು ಅವಘಡಕ್ಕೆ ಎಡೆ ಮಾಡಿಕೊಟ್ಟಂತಾಗಿದೆ ಎಂದು ಜನರು ಅಳಲು ತೋಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ