ಕಂಟೇನ್ಮೆಂಟ್‌ ಝೋನ್‌ ಘೋಷಣೆ: ಜನರಲ್ಲಿ ಹೆಚ್ಚಿದ ಆತಂಕ


Team Udayavani, May 21, 2020, 5:22 PM IST

21-May-25

ಸಾಂದರ್ಭಿಕ ಚಿತ್ರ

ಹೊಳಲ್ಕೆರೆ: ತಾಲೂಕಿನ ತಾಳಿಕಟ್ಟೆ ಗ್ರಾಮದ ಯುವತಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಯುವತಿ ಮನೆಯಿಂದ ಒಂದು ಕಿಮೀ ಪ್ರದೇಶವನ್ನು ತಾಲೂಕು ಆಡಳಿತ ಕಂಟೇನ್ಮೆಂಟ್‌ ಝೋನ್‌ ಆಗಿ ಘೋಷಣೆ ಮಾಡಿದೆ. ಇದರಿಂದ ಗ್ರಾಮ ಹಾಗೂ ತಾಲೂಕಿನ ಜನರಲ್ಲಿ ಆತಂಕ ಮೂಡಿದೆ. ಸೋಂಕಿತ ಯುವತಿಯ ಮನೆ ಹೊಸದುರ್ಗ ಮತ್ತು ಚನ್ನಗಿರಿ ಮಾರ್ಗದ ಮುಖ್ಯ ರಸ್ತೆಯಲ್ಲಿದೆ. ಹಾಗಾಗಿ ಮನೆಯ ಮುಂದಿರುವ ರಸ್ತೆಯನ್ನು ಬ್ಯಾರಿಕೇಡ್‌ ಗಳಿಂದ ಲಾಕ್‌ ಮಾಡಲಾಗಿದೆ. ಮನೆಯ ಸುತ್ತಮುತ್ತ ಯಾರೂ ತಿರುಗಾಡದಂತೆ ಗ್ರಾಮಸ್ಥರಿಗೆ ಎಚ್ಚರಿಕೆ ನೀಡಿ ಪೊಲೀಸ್‌ ಪಹರೆ ಹಾಕಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಇಲಾಖೆ ಹಾಗೂ ಗ್ರಾಮ ಪಂಚಾಯತ್‌ ವತಿಯಿಂದ 100 ಮೀಟರ್‌ ಅಂತರದಲ್ಲಿ ಹೈಪೋಕ್ಲೋರೈಡ್‌ ದ್ರಾವಣ ಸಿಂಪಡಣೆ ಮಾಡಲಾಗಿದೆ. ಯುವತಿ ಮನೆಯಿಂದ ಒಂದು ಕಿಮೀ ವ್ಯಾಪ್ತಿಯನ್ನ ಕಂಟೇನ್ಮೆಂಟ್‌ ಝೋನ್‌ ಆಗಿ ಪರಿವರ್ತಿಸಲಾಗಿದ್ದು, ಇಲ್ಲಿರುವ ಹೋಟೆಲ್‌, ಬೇಕರಿ, ಅಂಗಡಿಗಳನ್ನು ಮುಚ್ಚಿಸಲಾಗಿದೆ. ಈ ಭಾಗದ ಜನರು ಅನಗತ್ಯವಾಗಿ ಹೊರಬ ರದಂತೆ ಸೂಚಿಸಲಾಗಿದೆ. ಅಗತ್ಯ ವಸ್ತುಗಳನ್ನು ಖರೀದಿಸುವುದಾದರೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಅನ್ಯ ಗ್ರಾಮಗಳ ಜನರು ತಾಳಿಕಟ್ಟೆ ಮೇಲೆ ಸಂಚರಿಸದಂತೆ ಪೊಲೀಸ್‌ ಇಲಾಖೆ ಮಾರ್ಗ ಬದಲಾವಣೆ ಮಾಡಿದೆ.

ಯುವತಿಯಲ್ಲಿ ಸೋಂಕು ಇರುವ ಬಗ್ಗೆ ವರದಿ ಬರುತ್ತಿದ್ದಂತೆಯೇ ಯುವತಿಯ ಪ್ರಾಥಮಿಕ ಸಂಪರ್ಕದಲ್ಲಿದ್ದ ಆಕೆಯ ಅಜ್ಜ, ಅಜ್ಜಿ, ಮಾವ, ಅತ್ತೆ, ಇಬ್ಬರು ತಂಗಿಯರು, ಆಸ್ಪತ್ರೆಗೆ ಕರೆದೊಯ್ದಿದ್ದ ಕಾರು ಚಾಲಕ ಹಾಗೂ ಪ್ರಾಥಮಿಕ ಹಂತದಲ್ಲಿ ಚಿಕಿತ್ಸೆ ನೀಡಿದ್ದ ಆರೋಗ್ಯ ಇಲಾಖೆಯ ನಾಲ್ವರು ಸಿಬ್ಬಂದಿಯನ್ನು ತಾಲೂಕಿನ ಬೊಮ್ಮನಕಟ್ಟೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕ್ವಾರಂಟೈನ್‌ ಮಾಡಲಾಗಿದೆ. ದ್ವಿತೀಯ ಹಂತದ ಸಂಪರ್ಕದಲ್ಲಿದ್ದ ಯುವತಿಯ ಅತ್ತೆ, ಮಕ್ಕಳು, ಅತ್ತಿಗೆ, ತಂದೆ, ತಾಯಿ, ಹಾಗೂ ಚಾಲಕನ ಪತ್ನಿಯನ್ನು ಸ್ಕ್ರೀನಿಂಗ್‌ಗೆ ಒಳಪಡಿಸಿ ಹೋಂ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಚಾಲಕನ ಪತ್ನಿ ಗರ್ಭಿಣಿಯಾಗಿದ್ದು, ಆಕೆಯ ಆರೈಕೆ ಬಗ್ಗೆ ಆರೋಗ್ಯ ಇಲಾಖೆ ಕಾಳಜಿ ವಹಿಸಿದೆ.

ಚನ್ನಗಿರಿ ಜನ ಜಾಸ್ತಿ ಬರ್ತಾರೆ
ತಾಳಿಕಟ್ಟೆ ಗ್ರಾಮ, ಚನ್ನಗಿರಿ ಹಾಗೂ ಹೊಳಲ್ಕೆರೆ ತಾಲೂಕಿನ ಗಡಿ ಭಾಗದಲ್ಲಿದೆ. ಇಲ್ಲಿಗೆ ಚನ್ನಗಿರಿ ತಾಲೂಕಿನ ಜನತೆಯ ಓಡಾಟ ಹೆಚ್ಚು. ಅಲ್ಲದೆ ಚನ್ನಗಿರಿ ತಾಲೂಕಿನಲ್ಲಿ ಹೋಟೆಲ್‌ಗ‌ಳು ಬಂದ್‌ ಆಗಿರುವ ಕಾರಣ ತಾಳಿಕಟ್ಟೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುತಿದ್ದರು. ಅಲ್ಲದೆ ಈ ಗ್ರಾಮದಿಂದ ಕೂಲಿ ಕಾರ್ಮಿಕರು ಕೂಡ ಚನ್ನಗಿರಿ ತಾಲೂಕಿಗೆ ಹೋಗುತ್ತಿದ್ದರು. ಈಗ ಅದೆಲ್ಲದಕ್ಕೂ ಬ್ರೇಕ್‌ ಬಿದ್ದಂತಾಗಿದೆ.

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.