ನಿರೀಕ್ಷೆ ಮೀರಿ ಮಳೆಯಾದ್ರೂ ನೀರಿಗೆ ಬರ!

ಕೆರೆ-ಕಟ್ಟೆ ಒಡೆದಿದ್ದರಿಂದ ಹರಿದು ವ್ಯರ್ಥವಾದ ನೀರುವಿವಿ ಸಾಗರ ಹಿನ್ನೀರಿನಿಂದ ನೀರು ಪೂರೈಕೆಗೆ ಪ್ರಸ್ತಾವನೆ

Team Udayavani, Mar 22, 2020, 4:23 PM IST

22-March-14

ಹೊಸದುರ್ಗ: ಕಳೆದ ಬಾರಿ ನಿರೀಕ್ಷೆಗೂ ಮೀರಿ ಸುರಿದ ಮಳೆಯಿಂದ ಪ್ರಸಕ್ತ ಸಾಲಿನಲ್ಲಿ ಸದ್ಯಕ್ಕೆ ತಾಲೂಕಿನಲ್ಲಿ ನೀರಿನ ಸಮಸ್ಯೆ ಇಲ್ಲ. ಆದರೆ ಬೇಸಿಗೆಯ ಪ್ರಖರತೆ ಹೆಚ್ಚುತ್ತ ಹೋದಂತೆ ಕುಡಿವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ.

ವಾಡಿಕೆಗಿಂತ ಹೆಚ್ಚಿನ ಮಳೆಯಾಗಿರುವುದರಿಂದ ನೀರಿನ ಸಮಸ್ಯೆ ಕಂಡು ಬಂದಿಲ್ಲ. ಆದರೆ ಹಲವು ವರ್ಷ ಮಳೆ ಬಾರದೆ ಕೆರೆ ಕಟ್ಟೆಗಳು ತುಂಬಿಲ್ಲ ಹಾಗೂ ಕೆರೆಗಳ ನಿರ್ವಹಣೆ ಮಾಡುವಲ್ಲಿನ ನಿರ್ಲಕ್ಷ್ಯದಿಂದ ನೀರಗುಂದ, ಕಡದನಕೆರೆ ಆದ್ರಕಟ್ಟೆ ಸೇರಿದಂತೆ ಹಲವು ಕೆರೆಗಳು ಭರ್ತಿಯಾಗಿದ್ದರೂ ನೀರು ಮಾತ್ರ ಸಂಗ್ರಹ ಆಗಿಲ್ಲ.

ಬರಿದಾದ ಬ್ಯಾರೇಜ್‌: ಹೊಸದುರ್ಗ ಪಟ್ಟಣಕ್ಕೆ ನೀರು ಪೂರೈಕೆ ಮಾಡುವ ಕೆಲ್ಲೋಡು ಬ್ಯಾರೇಜ್‌ ಗೆ ಹೊಂದಿಕೊಂಡಂತಿರುವ ದಡ, ಭಾರೀ ಮಳೆಯಿಂದ ನದಿ ತುಂಬಿ ಹರಿದ ಪರಿಣಾಮ ಕೊಚ್ಚಿ ಹೋಗಿತ್ತು. ಇದರಿಂದ ಕೆಲ್ಲೋಡು ಬ್ಯಾರೇಜ್‌ ಬರಿದಾಗಿದೆ. ದುರಸ್ತಿ ಕಾರ್ಯ ಕೂಡ ಮಂದಗತಿಯಲ್ಲಿ ಸಾಗುತ್ತಿದೆ. ಭದ್ರಾ ಮೇಲ್ದಂಡೆ ಯೋಜನೆಯಡಿ ಅಕ್ಟೋಬರ್‌ನಿಂದ ಎರಡು ತಿಂಗಳ ಕಾಲ ಹರಿಸಿದ ನೀರು ಸಹ ನಿಲ್ಲುತ್ತಿಲ್ಲ. ಹಾಗಾಗಿ ತಾಲೂಕಿನ ಕೆಲ್ಲೋಡು ಸುತ್ತಮುತ್ತಲಿನ ಗ್ರಾಮಗಳ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ವೇದಾವತಿ ನದಿ ಕೂಡ ಬತ್ತುತ್ತಿರುವುದರಿಂದ ಹೊಸದುರ್ಗ ಪಟ್ಟಣಕ್ಕೆ ನೀರು ಪೂರೈಕೆ ಕಷ್ಟವಾಗುತ್ತಿದೆ.

ಪಟ್ಟಣದ ಕೆಲವು ವಾರ್ಡ್‌ಗಳಿಗೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲು ಶಾಸಕರು ಕ್ರಮ ಕೈಗೊಂಡಿದ್ದರು. ವೇದಾವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಬಲ್ಲಾಳಸಮುದ್ರ ಹಾಗೂ ಕೊರಟಿಕೆರೆ ಬ್ಯಾರೇಜ್‌ನಿಂದ ನೀರು ಬಿಡುಗಡೆಯಾದ ಕಾರಣ ಸ್ವಲ್ಪ ನೀರು ಕೆಲ್ಲೋಡು ಬ್ಯಾರೇಜ್‌ ಸೇರಿದೆ. ಆದರೆ ಅದರಿಂದ ಬಹಳ ದಿನಗಳವರೆಗೆ ನೀರು ಸರಬರಾಜು ಮಾಡುವುದು ಕಷ್ಟ ಸಾಧ್ಯ ಎನ್ನಲಾಗುತ್ತಿದೆ. ಪುರಸಭೆಯಿಂದ ಈಗ ವಾರಕ್ಕೊಮ್ಮೆ ನೀರು ಬಿಡಲಾಗುತ್ತಿದೆ. ಬೇಸಿಗೆ ದಿನಗಳಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವ ಸಾಧ್ಯತೆಯೇ ಹೆಚ್ಚು.

13 ಗ್ರಾಮ ಗುರುತು: ತಾಲೂಕಿನಲ್ಲಿ ತೀವ್ರತರವಾದ ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳು ಕಂಡು ಬಂದಿಲ್ಲ. ಆದರೂ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದೆಂದು 13 ಹಳ್ಳಿಗಳನ್ನು ಸಮಸ್ಯಾತ್ಮಕ ಗ್ರಾಮಗಳನ್ನಾಗಿ ಗುರುತಿಸಲಾಗಿದೆ. ಕೆಲವೆಡೆ ಕುಡಿಯುವ ನೀರಿನ ಸರಬರಾಜು ಪೈಪ್‌ ಲೈನ್‌, ಮೋಟಾರ್‌ ಅಳವಡಿಕೆಯಂತಹ ಸಣ್ಣಪುಟ್ಟ ಸಮಸ್ಯೆಗಳಿವೆ ಎನ್ನುತ್ತಾರೆ ಕುಡಿಯುವ ನೀರು ಸರಬರಾಜು ಇಲಾಖೆ ಅಧಿಕಾರಿಗಳು.

ಶಾಸಕ ಗೂಳಿಹಟ್ಟಿ ಶೇಖರ್‌ ಅವರು ಪಟ್ಟಣ ಸೇರಿದಂತೆ ತಾಲೂಕಿನ ಕೆಲವು ಹಳ್ಳಿಗಳಿಗೆ ವಿವಿ ಸಾಗರದ ಹಿನ್ನೀರಿನಿಂದ ಪೈಪ್‌ಲೈನ್‌ ಮುಖಾಂತರ ನೀರು ಪೂರೈಕೆ ಮಾಡುವ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಈ ಮಧ್ಯೆ ರಾಜ್ಯ ಸರ್ಕಾರ ಹೊಸದುರ್ಗ ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲಾ ಹಳ್ಳಿಗಳಿಗೆ ಒಂದು ಟಿಎಂಸಿ ನೀರು ಪೂರೈಕೆ ಮಾಡುವ 350 ಕೋಟಿ ರೂ. ವೆಚ್ಚದ ಬಹುಗ್ರಾಮ ಯೋಜನೆಗೆ ಅನುಮೋದನೆ ನೀಡಿರುವುದು ಆಶಾದಾಯಕ ಬೆಳವಣಿಗೆ.

ತಾಲೂಕಿನಲ್ಲಿ 34 ಡಿಗ್ರಿ ತಾಪಮಾನವಿದ್ದು, ಬಿರು ಬಿಸಿಲಿನಿಂದ ಜನರು ಬಸವಳಿಯುತ್ತಿದ್ದಾರೆ. ಹಾಗಾಗಿ ತಾಲೂಕು ಆಡಳಿತ ಹಾಗೂ ಪುರಸಭೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.