ಬಾಗೂರಿಗೆ ನೀರು ಶುದ್ಧೀಕರಣ ಘಟಕ ಮಂಜೂರು: ಗೂಳಿಹಟ್ಟಿ
Team Udayavani, Apr 26, 2020, 5:28 PM IST
ಹೊಸದುರ್ಗ: ತಾಲೂಕಿನ ಬಾಗೂರು ಗ್ರಾಮದಲ್ಲಿ ಶಾಸಕ ಗೂಳಿಹಟ್ಟಿ ಶೇಖರ್ ಶುದ್ಧ ಕುಡಿಯುವ ನೀರಿನ ಘಟಕ ಪರಿಶೀಲಿಸಿದರು
ಹೊಸದುರ್ಗ: ಬಾಗೂರು ಗ್ರಾಮದ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ಹೋಗಿದೆ. ಹಾಗಾಗಿ ಎರಡು ಕುಡಿಯುವ ನೀರು ಶುದ್ಧೀಕರಣ ಘಟಕಗಳನ್ನು ಮಂಜೂರು ಮಾಡುವುದಾಗಿ ಶಾಸಕ ಗೂಳಿಹಟ್ಟಿ ಶೇಖರ್ ಭರವಸೆ ನೀಡಿದರು.
ಬಾಗೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಬಹು ದಿನಗಳಿಂದ ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿಯಲ್ಲಿರುವ ಕಾರಣ ಬಹು ಬೇಡಿಕೆಯಾದ ಶುದ್ಧ ಕುಡಿಯುವ ನೀರಿನ ಘಟಕ ಶೀಘ್ರದಲ್ಲಿ ಸ್ಥಾಪಿಸುವುದಾಗಿ ಹೇಳಿದರು. ಗ್ರಾಮದಲ್ಲಿ ಎರಡು ಕಡೆ ನೀರು ಕೆರೆ ಇರುವುದರಿಂದ ಭದ್ರಾ ಮೇಲ್ದಂಡೆ ಯೋಜನೆ ಅಡಿ ನೀರು ತುಂಬಿಸಲಾಗುವುದು.ನೀರು ಬಸಿಯುವಿಕೆಯಿಂದ ಬರುವ ನೀರನ್ನು ಹೊರ ಹಾಕಲು ರಾಜಕಾಲುವೆ ನಿರ್ಮಾಣ ಮಾಡಲಾಗುವುದು. ಗ್ರಾಮದ ಮೂಡಲ ಕೆರೆ ಏರಿ ದುರಸ್ತಿ ಅಗತ್ಯವಿದ್ದು ಸಣ್ಣ ನೀರಾವರಿ ಇಲಾಖೆಯಿಂದ ಮಣ್ಣು ಹಾಕುವುದು, ಕಲ್ಲು ಪಿಚ್ಚಿಂಗ್ ಮಾಡಿಸುವ ಮೂಲಕ ಏರಿ ಭದ್ರತೆಗೆ ಆದ್ಯತೆ ನೀಡುವುದಾಗಿ ತಿಳಿಸಿದರು.
ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸುತ್ತಿದ್ದ ಆಶಾ ಕಾರ್ಯಕರ್ತೆಯರಾದ ಶೋಭಾ ಹಾಗೂ ಪದ್ದಮ್ಮ ಅವರನ್ನು ಅಭಿನಂದಿಸಿದ ಶಾಸಕರು, ಅವರಿಂದ ಬಾಗೂರು ಗ್ರಾಮದ ಮಾಹಿತಿ ಪಡೆದರು. ನಿಮ್ಮೆಲ್ಲರ ಸೇವೆಯನ್ನು ದೇಶದ ಜನತೆ ಅಭಿನಂದಿಸುತ್ತಿದೆ ಎಂದರು. ಇದೇ ಸಂದರ್ಭದಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ಬಾಗೂರಿನ ನೀರಗಂಟಿ ರಾಘವೇಂದ್ರ ಮನೆಗೆ ಭೇಟಿ ನೀಡಿದ ಗೂಳಿಹಟ್ಟಿ, ಚಿಕಿತ್ಸೆಗಾಗಿ 50 ಸಾವಿರ ರೂ. ನೀಡಿದರು. ಪರಪ್ಪಸ್ವಾಮಿ ಗ್ರಾಮಾಂತರ ಪ್ರೌಢಶಾಲೆ ಅಧ್ಯಕ್ಷ ವಾಸುದೇವ್, ಮುಖಂಡರಾದ ಪುರುಷೋತ್ತಮ, ವಿಜಯಕುಮಾರ್, ಭಜರಂಗದಳದ ಅರುಣ್, ಬಿ.ಟಿ. ಸುರೇಶ್, ಆಂಜಿನಪ್ಪ, ರುದ್ರೇಶ್, ರಾಜು ಹೋವಳೆ, ಮಧು, ರಂಗನಾಥ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ