ಮಾನವೀಯ ಮೌಲ್ಯದ ಶಿಕ್ಷಣ ಅಗತ್ಯ:ದಿನೇಶ್‌


Team Udayavani, Nov 1, 2021, 3:12 PM IST

ಮಾನವೀಯ ಮೌಲ್ಯದ ಶಿಕ್ಷಣ ಅಗತ್ಯ:ದಿನೇಶ್‌

ಹೊಳಲ್ಕೆರೆ: ಸ್ವಸ್ಥ ಹಾಗೂ ಸುಸ್ಥಿತರ ಸಮಾಜಕ್ಕಾಗಿ ಭಾರತೀಯ ಸಂಸ್ಕೃತಿಯಶಿಕ್ಷಣ ರೂಪಿಸುವ ಗುರಿ ಹೊಂದಿರುವರಾಷ್ಟ್ರೋತ್ಥಾನ ಪರಿಷತ್‌ ಉತ್ತಮ ಶಿಕ್ಷಣನೀಡಲು ಶ್ರಮಿಸುತ್ತಿದೆ ಎಂದು ಪರಿಷತ್‌ಪ್ರಧಾನ ಕಾರ್ಯದರ್ಶಿ ದಿನೇಶ್‌ ಹೆಗ್ಡೆ ಹೇಳಿದರು.

ಪಟ್ಟಣದ ಸದ್ಗುರು ಆಶ್ರಮದ ಆವರಣದಲ್ಲಿ ತಾಲೂಕಿನ ಶಿಕ್ಷಕರಿಗೆಏರ್ಪಡಿಸಿರುವ ಪ್ರಶಿಕ್ಷಣ ತರಬೇತಿಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು. ಭಾರತ ವಿಶ್ವಕ್ಕೆಶಿಕ್ಷಣ ನೀಡುವಂತಹ ಸಾಮರ್ಥ್ಯವನ್ನುಹೊಂದಿದೆ. ಸನಾತನ ಕಾಲದಲ್ಲಿ ವಿಶ್ವದಮಹಾನ್‌ ಜ್ಞಾನಿಗಳು, ಮೇಧಾವಿಗಳುಭಾರತದಲ್ಲಿರುವಂತ ಶಿಕ್ಷಣ ಪದ್ಧತಿಯನ್ನುಇನ್ನೆಲ್ಲಿಯೂ ಕಾಣಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದರು.

ಬ್ರಿಟಿಷರು ಸಾಮ್ರಾಜ್ಯಶಾಹಿಯ ಅಸ್ತಿತ್ವಕ್ಕಾಗಿ ದೇಶಿಯ ಶಿಕ್ಷಣದಲ್ಲಿದ್ದ ಪದ್ಧತಿಗಳನ್ನು ಪರಿವರ್ತಿಸಿದರು. ಲಾರ್ಡ್‌ ಮೆಕಾಲೆ ಭಾರತೀಯರಲ್ಲಿ ಭಾವನೆಗಳನ್ನು ಒಡೆದು ಹಾಳು ಮಾಡುವ ಶಿಕ್ಷಣ ಪದ್ಧತಿಯನ್ನು ಜಾರಿಗೆ ತಂದಿದ್ದ. ಶಿಕ್ಷಣಎಂದರೆ ಕೇವಲ ಪಠ್ಯವನ್ನು ಓದಿ ಅಂಕಗಳಿಸುವ ಕೆಲಸವಲ್ಲ. ಅದೊಂದುಭಾವನೆ, ಸಂಸ್ಕೃತಿ, ಸಂಸ್ಕಾರ, ಚಿಂತನೆ,ಮಾನವೀಯ, ಭಾತೃತ್ವ, ರಾಷ್ಟ್ರೀಯತೆಗೆಪೂರಕ ಜ್ಞಾನವನ್ನು ಶಿಕ್ಷಣ ಎನ್ನಬೇಕು.ಇಂದಿನ ಶಿಕ್ಷಣದಲ್ಲಿ ಮಾನವೀಯತೆಹಾಗೂ ಸಂಸ್ಕಾರದ ಅವಶ್ಯಕತೆ ಇದೆ ಎಂದರು.

ರಾಷ್ಟ್ರೋತ್ಥಾನ ಪರಿಷತ್‌ ಸದಸ್ಯಬಸವನಗೌಡ ಮಾತನಾಡಿ, ವಿಶ್ವದಗಮನ ಸೆಳೆಯುವಂತಹ ಶಿಕ್ಷಣವನ್ನು ನೀಡಿರುವ ಹೆಮ್ಮೆ ಭಾರತ ದೇಶಕ್ಕಿದೆ.ಅದೇ ಮಾದರಿಯಲ್ಲಿ ಪರಿಷತ್‌ ಒಂದಿಷ್ಟುಚಿಂತನೆ ಮಾಡಿದೆ. 1965 ರಿಂದ ಒಂದು ಸ್ವಯಂಸೇವಾ ಸಂಸ್ಥೆಯಾಗಿ ಸದೃಢಸಮಾಜವನ್ನು ನಿರ್ಮಿಸುವ ಹೊಣೆಗಾರಿಕೆ ಇಟ್ಟುಕೊಂಡು ಮುನ್ನಡೆಯುತ್ತಿದೆ. ಅದಕ್ಕಾಗಿ ದೇಶಿಯವಾಗಿರುವ ಶಿಕ್ಷಣವನ್ನು ಕೊಡುವ ಕೆಲಸವನ್ನು ಆರಂಭಿಸಿದೆ. ಪಠ್ಯ ಶಿಕ್ಷಣದ ಜತೆಗೆ ಭಾವನಾತ್ಮಾಕ ಶಿಕ್ಷಣವೂ ವಿದ್ಯಾರ್ಥಿಗಳಿಗೆ ದೊರೆಯಬೇಕಿದೆ. ಈ ನಿಟ್ಟಿನಲ್ಲಿ ಶಿಕ್ಷಕರನ್ನು ಸಜ್ಜುಗೊಳಿಸಲಾಗುತ್ತಿದೆ ಎಂದರು.

ಕಾರ್ಯದರ್ಶಿ ಜಿ.ಪಿ. ಹರೀಶ್‌ ಮಾತನಾಡಿ, ಪ್ರಶಿಕ್ಷಣ ತರಬೇತಿಯನ್ನು ಶಿಕ್ಷಕರಿಗೆ ನೀಡುವ ಮೂಲಕ ಶಿಕ್ಷಣದಲ್ಲಿಹೊಸತನ ಸಂಶೋಧಿ ಸುವ ಕೆಲಸಮಾಡಬೇಕೆಂದರು. ರೋಟರಿ ಕ್ಲಬ್‌ ಅಧ್ಯಕ್ಷ ಪ್ರಕಾಶ್‌ ಅಧ್ಯಕ್ಷತೆ ವಹಿಸಿ ಮಾತನಾಡಿ , ಶಿಕ್ಷಣ ಎನ್ನುವುದು ನಮ್ಮ ಬದುಕು. ಅದು ಕೇವಲ ಪಠ್ಯದಶಿಕ್ಷಣವಾಗದೆ ಮೌಲ್ಯಗಳನ್ನು ಬಿತ್ತುವ ಶಿಕ್ಷಣ ಆಗಬೇಕು. ಮಣ್ಣಿನ ಋಣತೀರಿಸುವ ಶಕ್ತಿಯನ್ನು ಬೆಳೆಸುವ ಶಿಕ್ಷಣ ಕೊಡಬೇಕೆಂದರು.

ಪರಿಷತ್‌ ಹಿರಿಯರಾದ ರಾಜಲೋಚನ್‌, ರೋಟರಿ ಕ್ಲಬ್‌ ಮಾಜಿ ಅಧ್ಯಕ್ಷ ಎಚ್‌. ಶಿವಲಿಂಗಪ್ಪ, ಎ.ಸಿ. ಗಂಗಾಧರಪ್ಪ, ಪ್ರಾಚಾರ್ಯ ರವಿ ಮತ್ತಿತರರು ಉಪಸ್ಥಿತರಿದ್ದರು. ಶಿಕ್ಷಕ ರಾಜಶೇಖರ್‌ ನಿರೂಪಿಸಿದರು.

ಬಸವರಾಜ ವಂದಿಸಿದರು. ಇದೆ ಸಮಯದಲ್ಲಿ “ಪ್ರಶಿಕ್ಷಣಭಾರತಿ’ ಕಿರುಹೊತ್ತಿಗೆ ಬಿಡುಗಡೆ ಮಾಡಲಾಯಿತು.

ರಾಷ್ಟ್ರೋತ್ಥಾನ ಪರಿಷತ್‌ ಶಿಕ್ಷಕರಿಗೆ ಪ್ರಶಿಕ್ಷಣ ತರಬೇತಿಗೆ ಮುಂದಾಗಿದೆ. ದೇಶಕ್ಕೆ ಎಂತಹ ಶಿಕ್ಷಣ ಬೇಕು, ಪಠ್ಯವನ್ನು ಹೊರತುಪಡಿಸಿ ವಿದ್ಯಾರ್ಥಿಗಳ ಸರ್ವತೊಮುಖ ಅಭಿವೃದ್ಧಿಗೆ ಏನೆಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ಚಿಂತನೆ ನಡೆಸಿದೆ. ಈ ನಿಟ್ಟಿನಲ್ಲಿ ಶಿಕ್ಷಕರಿಗೆ ಪ್ರಶಿಕ್ಷಣ ತರಬೇತಿಯನ್ನು ರಾಜ್ಯ ಹಾಗೂ ದೇಶದ ಎಲ್ಲೆಡೆ ನೀಡುವ ಗುರಿ ಹೊಂದಲಾಗಿದ್ದು, ಶಿಕ್ಷಕರು ರಾಷ್ಟ್ರೋತ್ಥಾನ ಶಿಕ್ಷಣದ ಮಹತ್ವ ಅರಿತುಕೊಳ್ಳಬೇಕು.– ದಿನೇಶ್‌ ಹೆಗ್ಡೆ, ರಾಷ್ಟ್ರೋತ್ಥಾನ ಪರಿಷತ್‌ ಪ್ರಧಾನ ಕಾರ್ಯದರ್ಶಿ

ಟಾಪ್ ನ್ಯೂಸ್

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

18

Road mishap: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ; ಓರ್ವ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.