ಸಂಘಟಿತರಾಗದಿದ್ರೆ ಬೇಡಿಕೆ ಈಡೇರಲ್ಲ; ಮಂಜುನಾಥ್‌

ಮುಷ್ಕರ ಎಂದಾಕ್ಷಣ ಎಲ್ಲಾ ಬೇಡಿಕೆಗಳು ಈಡೇರುವುದಿಲ್ಲ. ಕಾನೂನು ತೊಡಕುಗಳಿರುತ್ತವೆ.

Team Udayavani, Jul 5, 2022, 6:29 PM IST

ಸಂಘಟಿತರಾಗದಿದ್ರೆ ಬೇಡಿಕೆ ಈಡೇರಲ್ಲ; ಮಂಜುನಾಥ್‌

ಚಿತ್ರದುರ್ಗ: ಟೆಂಡರ್‌ ಪದ್ಧತಿಯಡಿ ಕೆಲಸ ಮಾಡುವ ಎಲ್ಲ ಕಾರ್ಮಿಕರೂ ಸಂಘಟನೆಯೊಳಗೆ ಬರದಿದ್ದರೆ ಎಷ್ಟು ಹೋರಾಟ ಮಾಡಿದರೂ ನಿಮ್ಮ ಬೇಡಿಕೆಗಳನ್ನು ಯಾವ ಸರ್ಕಾರಗಳು ಈಡೇರಿಸುವುದಿಲ್ಲ ಎಂದು ಕೆಪಿಸಿಸಿ ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಜಿ.ಎಸ್‌. ಮಂಜುನಾಥ್‌, ಪೌರ ಕಾರ್ಮಿಕರಿಗೆ ಸಲಹೆ ನೀಡಿದರು.

ಸೇವೆ ಕಾಯಂ ಹಾಗೂ ಇತರೆ ಬೇಡಿಕೆಗಳ ಈಡೇರಿಕೆಗಾಗಿ ದಿನಗೂಲಿ ಹಾಗೂ ಹೊರಗುತ್ತಿಗೆ ಪೌರ ಕಾರ್ಮಿಕರು ಜಿಲ್ಲಾ ಕಾರಿ ಕಚೇರಿ ವೃತ್ತದಲ್ಲಿ ನಡೆಸುತ್ತಿರುವ ಧರಣಿಗೆ ಕಾಂಗ್ರೆಸ್‌ನಿಂದ ಬೆಂಬಲ ವ್ಯಕ್ತಪಡಿಸಿ ಅವರು ಮಾತನಾಡಿದರು. ಇದು ರಾಜ್ಯ ಮಟ್ಟದ ಸಮಸ್ಯೆಯಾಗಿದ್ದು ಅಷ್ಟು ಸುಲಭವಾಗಿ ಬಗೆಹರಿಯುವುದಿಲ್ಲ.

1994ರಲ್ಲಿ ಪ್ರಥಮವಾಗಿ ಮುಷ್ಕರ ನಡೆಸಿದಾಗ ಅಂದಿನ ಮುಖ್ಯಮಂತ್ರಿಯಾಗಿದ್ದ ಎಚ್‌ .ಡಿ.ದೇವೇಗೌಡರು ಹತ್ತು ಸಾವಿರ ದಿನಗೂಲಿ ನೌಕರರನ್ನು ಕಾಯಂ ಮಾಡಿದ್ದರು. 1998ರಲ್ಲಿ ಮುಷ್ಕರ ಆರಂಭಿಸಿದಾಗ ಆಗಿನ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಮತ್ತೆ ಹತ್ತು ಸಾವಿರ ಪೌರ ಕಾರ್ಮಿಕರನ್ನು ಕಾಯಂಗೊಳಿಸಿದರು. ನಮ್ಮ ಹೋರಾಟಗಳಿಂದ ಕೆಲವು ದಿನಗೂಲಿಗಳು ಈಗ ಕಮಿಷನರ್‌ಗಳಾಗಿದ್ದಾರೆ. ಸಂಘಟನೆಗೆ ಅಂತಹ ಶಕ್ತಿಯಿದೆ. ಅದಕ್ಕಾಗಿ ದಿನಗೂಲಿ ಹಾಗೂ
ಹೊರಗುತ್ತಿಗೆ ಪೌರ ಕಾರ್ಮಿಕರು, ವಾಹನ ಚಾಲಕರು, ಲೋಡರ್, ವಾಲ್‌ಮಾನ್‌ಗಳು ಯಾವುದೇ ಕಾರಣಕ್ಕೂ ಹೋರಾಟದಿಂದ ಹಿಂದೆ ಸರಿಯಬಾರದು ಎಂದರು.ಮುಷ್ಕರ ಎಂದಾಕ್ಷಣ ಎಲ್ಲಾ ಬೇಡಿಕೆಗಳು ಈಡೇರುವುದಿಲ್ಲ. ಕಾನೂನು ತೊಡಕುಗಳಿರುತ್ತವೆ.

ಎಸ್ಸೆಸ್ಸೆಲ್ಸಿ ಪಾಸಾದ 27 ಪೌರ ಕಾರ್ಮಿಕರು ನಮ್ಮ ಹೋರಾಟದ ಫಲವಾಗಿ ಚೀಫ್‌ ಆಫೀಸರ್‌ ಗಳಾಗಿದ್ದಾರೆ. 27 ಸಾವಿರ ಪೌರ ಕಾರ್ಮಿಕರು ಟೆಂಡರ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಬೆಂಗಳೂರು ನಗರ ಒಂದರಲ್ಲಿಯೇ ಹನ್ನೊಂದು ಸಾವಿರ ಪೌರ ಕಾರ್ಮಿಕರು ದಿನಗೂಲಿಗಳಾಗಿದ್ದಾರೆ. ಟೆಂಡರ್‌ ಬೇಡವೇ ಬೇಡ ಎನ್ನುವ ಹೋರಾಟ ಮೊದಲಿನಿಂದಲೂ ಇದೆ. ಅದಕ್ಕೆ ನೀವು ಬೆಂಬಲಿಸಲಿಲ್ಲ. ಕಾಯಂ ಕೆಲಸಕ್ಕೆ ಟೆಂಡರ್‌ ಕರೆಯಬಾರದು ಎಂದು ಸುಪ್ರೀಂ ಕೋರ್ಟ್‌ ಆದೇಶವಿದೆ. ಆದರೂ ಟೆಂಡರ್‌ ಮೂಲಕವೇ ಪೌರ ಕಾರ್ಮಿಕರನ್ನು ಕೆಲಸಕ್ಕೆ ತೆಗೆದುಕೊಳ್ಳಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಂ.ಕೆ. ತಾಜ್‌ಪೀರ್‌ ಮಾತನಾಡಿ, ಪೌರ ಕಾರ್ಮಿಕರು ಹಾಗೂ ಹೊರಗುತ್ತಿಗೆ ನೌಕರರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ನಾಲ್ಕು ದಿನಗಳಿಂದಲೂ ಧರಣಿ ನಡೆಸುತ್ತಿದ್ದಾರೆ. ಸರ್ಕಾರ ಗಮನ ಹರಿಸಿ ಕಾಯಂಗೊಳಿಸಬೇಕು. ಒಂದು ವೇಳೆ ಬೇಡಿಕೆ ಈಡೇರಿಸದಿದ್ದರೆ ನಮ್ಮ ಪಕ್ಷ ರಾಜ್ಯದಲ್ಲಿ ಅ ಧಿಕಾರಕ್ಕೆ ಬಂದರೆ ದಿನಗೂಲಿ ಹಾಗೂ ಹೊರಗುತ್ತಿಗೆ ಪೌರ ಕಾರ್ಮಿಕರು, ವಾಹನ ಚಾಲಕರು, ಲೋಡರ್ಗಳನ್ನು ಕಾಯಂ ಮಾಡುತ್ತೇವೆ. ಈ ವಿಚಾರವನ್ನು ಚುನಾವಣಾ ಪ್ರಣಾಳಿಕೆಯಲ್ಲಿ ಸೇರಿಸಬೇಕು ಎಂದು ಜಿ.ಎಚ್‌. ಮಂಜುನಾಥ್‌ ಅವರಿಗೆ ಮನವಿ ಮಾಡಿದರು.

ಕಾಂಗ್ರೆಸ್‌ ಮುಖಂಡರಾದ ಹಾಲಸ್ವಾಮಿ, ಕೆ.ಪಿ. ಸಂಪತ್‌ಕುಮಾರ್‌, ಡಿ.ಎನ್‌. ಮೈಲಾರಪ್ಪ, ಎಸ್‌.ಎನ್‌. ರವಿಕುಮಾರ್‌, ಎನ್‌.ಡಿ. ಕುಮಾರ್‌, ಮೋಹನ್‌ ಪೂಜಾರಿ, ಗೀತಾನಂದಿನಿ ಗೌಡ, ಜಿಪಂ ಮಾಜಿ ಸದಸ್ಯ ಶಿವಮೂರ್ತಿ ಮತ್ತಿತರರು ಇದ್ದರು.

ಪೌರ ಕಾರ್ಮಿಕರು ಹಾಗೂ ಕಮೀಷನರ್‌ಗಳು ನಿರಂತರವಾಗಿ ಹೋರಾಟದಲ್ಲಿದ್ದುಕೊಂಡು ಸಂಘಟನೆಯೊಳಗೆ ಬಂದರೆ ನೀವು ಕಾಯಂ ನೌಕರರಾಗುತ್ತೀರಿ. ಇಲ್ಲವಾದರೆ ಎಷ್ಟು ಹೋರಾಟ ಮಾಡಿದರೂ ಪ್ರಯೋಜನವಿಲ್ಲ. ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಎಲ್ಲಾ ಸರ್ಕಾರಗಳಲ್ಲಿಯೂ ಪೌರ ಕಾರ್ಮಿಕರ ಸೇವೆ ಕಾಯಂಗೆ ಹೋರಾಟ ಮಾಡಿಕೊಂಡು ಬಂದಿದ್ದೇನೆ.
ಜಿ.ಎಸ್‌. ಮಂಜುನಾಥ್‌,ಕೆಪಿಸಿಸಿ ಅಸಂಘಟಿತ ಕಾರ್ಮಿಕರ ವಿಭಾಗದ ಅಧ್ಯಕ್ಷ

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

18

Road mishap: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ; ಓರ್ವ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.