ಜನವರಿಯಲ್ಲಿ ವಿವಿ ಸಾಗರಕ್ಕೆ ಭದ್ರಾ ನೀರು ಹರಿಸಿ


Team Udayavani, Dec 9, 2018, 4:18 PM IST

cta-1.jpg

ಚಿತ್ರದುರ್ಗ/ಚಳ್ಳಕೆರೆ: ಭದ್ರಾ ಮೇಲ್ದಂಡೆ ಯೋಜನೆಯಡಿ ಹಿರಿಯೂರಿನ ವಿವಿ ಸಾಗರಕ್ಕೆ ಹೊಸ ವರ್ಷದ ಮೊದಲ ತಿಂಗಳಲ್ಲಿ ನೀರು ಹರಿಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸಂಸದ ಬಿ.ಎನ್‌. ಚಂದ್ರಪ್ಪ, ಭದ್ರಾ ಮೇಲ್ದಂಡೆ ಯೋಜನೆಯ ಅನುಷ್ಠಾನಾಧಿಕಾರಿಗಳಿಗೆ ಸೂಚಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ನಡೆಯುತ್ತಿರುವ ಸ್ಥಳಗಳಿಗೆ ಶನಿವಾರ ಭೇಟಿ ನೀಡಿದ್ದ ಅವರು ಕಾಮಗಾರಿಯನ್ನು ಪರಿಶೀಲಿಸಿದ ಬಳಿಕ ಮಾತನಾಡಿದರು. ನೀರು ಹರಿಸುವ ವಿಚಾರ ಪದೇ ಪದೇ ಮುಂದಕ್ಕೆ ಹೋಗುವುದು ಬೇಡ. ಈ ತಿಂಗಳಾಂತ್ಯದೊಳಗೆ ಎಲ್ಲ ರೀತಿಯ ಆಡಳಿತಾತ್ಮಕ ವಿಷಯಗಳಿಗೆ ಮತ್ತು ಬಾಕಿ ಇರುವ ವಿದ್ಯುತ್‌ ಮತ್ತು ರೈಲ್ವೆ ಕಾಮಗಾರಿಗಳನ್ನು ಪೂರ್ಣಗೊಳಿಸಿ 2019ರ ಜನವರಿ ತಿಂಗಳಲ್ಲಿ ನೂರಕ್ಕೆ ನೂರಷ್ಟು ನೀರು ಹರಿಸುವ ಕಾರ್ಯ ಮಾಡಬೇಕು ಎಂದರು. ಭದ್ರಾ ಮೇಲ್ದಂಡೆ ಯೋಜನೆ ಅಡಿ ಬಯಲುಸೀಮೆಗೆ ಭದ್ರಾ ನೀರು ಹರಿದು ಬರುವುದಿಲ್ಲ ಎನ್ನುವ ಅನುಮಾನ ಕೆಲವರಲ್ಲಿ ವ್ಯಕ್ತವಾಗುತ್ತಿದೆ. ಆ ರೀತಿಯ ನಕಾರಾತ್ಮಕ ಮನಸ್ಥಿತಿ ಬೇಡ. ಭದ್ರಾ ನೀರನ್ನು ಹರಿಸಲು ಸರ್ಕಾರ ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದರು.

ಭದ್ರಾ ಮೇಲ್ದಂಡೆ ನಾಲೆಯ ಮೂಲಕ ವಾಣಿವಿಲಾಸ ಸಾಗರಕ್ಕೆ ನೀರು ಹರಿಯಲಿದೆ. ಅಲ್ಲದೆ ಹೊಸದುರ್ಗ, ಹಿರಿಯೂರು, ಚಳ್ಳಕೆರೆ, ಹೊಳಲ್ಕೆರೆ, ಚಿತ್ರದುರ್ಗ, ಮೊಳಕಾಲ್ಮೂರು ಮತ್ತು ಪಾವಗಡ ತಾಲೂಕಿನ ಹಲವು ಭಾಗಗಳಿಗೆ ಪೈಪ್‌ಲೈನ್‌ ಮೂಲಕ ನೀರು ಹರಿಸಲಾಗುತ್ತದೆ. ತುಂಗಾ ನದಿಯಿಂದ 19 ಟಿಎಂಸಿ ನೀರನ್ನು ಎತ್ತಿ ಭದ್ರಾ ಡ್ಯಾಂಗೆ ಹಾಕುವ ಎರಡು ಲಿಫ್ಟ್‌ ಕಾಮಗಾರಿ ವೇಗವಾಗಿ ನಡೆಯಬೇಕು. 

ಮುತ್ತಿನಕೊಪ್ಪ ಬಳಿಯ ಕಾಮಗಾರಿಗೂ ವೇಗ ನೀಡಬೇಕು ಎಂದರು. ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಮಾತನಾಡಿ, ಜಿಲ್ಲೆಯನ್ನು ನಿರಂತರವಾಗಿ ಬರ ಕಾಡುತ್ತಿರುವುದರಿಂದ ಭದ್ರಾ ಕಾಮಗಾರಿಯನ್ನು ತುರ್ತಾಗಿ ಪೂರ್ಣಗೊಳಿಸಬೇಕು. ವಿದ್ಯುತ್‌ ಮತ್ತು ರೈಲ್ವೆ ಕಾಮಗಾರಿಗಳನ್ನು ಸಮರೋಪಾದಿಯಲ್ಲಿ ಮಾಡಬೇಕು. ಜನವರಿಯೊಳಗೆ ಕಾಮಗಾರಿ ಪೂರ್ಣ ಗೊಳಿಸುವಂತೆ ರೈಲ್ವೆ ಇಲಾಖೆಯವರಿಗೆ ಒತ್ತಡ ಹೇರಬೇಕು. ಕಾಮಗಾರಿಗಳು ಪೂರ್ಣಗೊಂಡರೆ ಜನವರಿ ಅಂತ್ಯದೊಳಗೆ ಭದ್ರಾ ನೀರು ವಿವಿ ಸಾಗರಕ್ಕೆ ಹರಿಯಲು ಯಾವುದೇ ಅಡ್ಡಿ, ಆತಂಕವಿಲ್ಲ ಎಂದು
ತಿಳಿಸಿದರು. ಅಜ್ಜಂಪುರ ಸಮೀಪದಲ್ಲಿನ ಸುರಂಗ ಮಾರ್ಗ, ರೈಲ್ವೆ ಕಾಮಗಾರಿ, ತುಂಗಾ ನದಿಯ ಸಮೀಪ ನಡೆಯುತ್ತಿರುವ ಕಾಮಗಾರಿ ಹಾಗೂ ವಿದ್ಯುತ್‌ ಕಾಮಗಾರಿಗಳನ್ನು ಸಂಸದರು ಹಾಗೂ ಶಾಸಕರು ವೀಕ್ಷಿಸಿದರು. ಹೊಸದುರ್ಗದ ಮಾಜಿ ಶಾಸಕ ಬಿ.ಜಿ. ಗೋವಿಂದಪ್ಪ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಫಾತ್ಯರಾಜನ್‌, ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಇಂಜಿನಿಯರ್‌ ಎಂ.ಜಿ. ಶಿವಕುಮಾರ್‌, ಅಧಿಧೀಕ್ಷಕ ಇಂಜಿನಿಯರ್‌ ಪಾಳೇಗಾರ್‌, ಕ್ಯಾದಿಗುಂಟೆ ನಾಗರಾಜ್‌, ಜಿಪಂ ಸದಸ್ಯರಾದ ಪ್ರಕಾಶ್‌ಮೂರ್ತಿ, ಕೃಷ್ಣಮೂರ್ತಿ, ಡಿ.ಎನ್‌. ಮೈಲಾರಪ್ಪ ಮತ್ತಿತರರು ಇದ್ದರು.

ಟಾಪ್ ನ್ಯೂಸ್

4 children found alive in Colombian Amazon rain forest

ವಿಮಾನ ಅಪಘಾತದಲ್ಲಿ ನಾಪತ್ತೆ: 40 ದಿನಗಳ ಬಳಿಕ ಅಮೆಜಾನ್ ಕಾಡಿನಲ್ಲಿ ಪತ್ತೆಯಾದ 4 ಮಕ್ಕಳು

Balasore Tragedy; ಭೀಕರ ರೈಲ್ವೆ ದುರಂತದಲ್ಲಿ ಶವಾಗಾರವಾಗಿದ್ದ ಶಾಲೆ ನೆಲಸಮ

Balasore Tragedy; ಭೀಕರ ರೈಲ್ವೆ ದುರಂತದಲ್ಲಿ ಶವಾಗಾರವಾಗಿದ್ದ ಶಾಲೆ ನೆಲಸಮ

BIPARJOY ಚಂಡಮಾರುತ 24ಗಂಟೆಯಲ್ಲಿ ತೀವ್ರ ಸ್ವರೂಪ-ಕರಾವಳಿ ಭಾಗದಲ್ಲಿ ತೀವ್ರ ಮಳೆ ಸಾಧ್ಯತೆ

BIPARJOY ಚಂಡಮಾರುತ 24ಗಂಟೆಯಲ್ಲಿ ತೀವ್ರ ಸ್ವರೂಪ-ಕರಾವಳಿ ಭಾಗದಲ್ಲಿ ತೀವ್ರ ಮಳೆ ಸಾಧ್ಯತೆ

Human Milk Bank: ಎದೆ ಹಾಲು ಕೊರತೆ: 4 ಜಿಲ್ಲೆಯಲ್ಲಿ ಅಮೃತಧಾರೆ ಕೇಂದ್ರ

Human Milk Bank: ಎದೆ ಹಾಲು ಕೊರತೆ: 4 ಜಿಲ್ಲೆಯಲ್ಲಿ “ಅಮೃತಧಾರೆ ಕೇಂದ್ರ”

Tokyo airport

Tokyo airport ರನ್ ವೇಯಲ್ಲಿ ಮುಖಾಮುಖಿಯಾದ ಎರಡು ಪ್ಯಾಸೆಂಜರ್ ವಿಮಾನಗಳು

Vijayapura; 5ನೇ ಸ್ನಾತಕೋತ್ತರ ಪರೀಕ್ಷೆ ಬರೆಯುತ್ತಿರುವ 81ರ ವೃದ್ಧ

Vijayapura; 5ನೇ ಸ್ನಾತಕೋತ್ತರ ಪರೀಕ್ಷೆ ಬರೆಯುತ್ತಿರುವ 81ರ ವೃದ್ಧ

Shardul Thakur joins a list of elite names with his third successive fifty-plus score at The Oval

WTC Final 2023: ಬ್ರಾಡ್ಮನ್-  ಬಾರ್ಡರ್‌ ದಾಖಲೆ ಸರಿಗಟ್ಟಿದ ಶಾರ್ದೂಲ್ ಠಾಕೂರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asddasd

Chitradurga : 39 ರ ಹರೆಯದ ಪೊಲೀಸ್ ಅಧಿಕಾರಿ ಹೃದಯಾಘಾತದಿಂದ ಮೃತ್ಯು

2-chitradurga

Chitradurga: ಲಾರಿಗೆ ಅಂಬ್ಯುಲೆನ್ಸ್ ಢಿಕ್ಕಿ; ತಮಿಳುನಾಡು ಮೂಲದ ಮೂವರು ಸಾವು

1-wqeqewqe

Environment Day ಮುರುಘಾ ಮಠದ ಆಡಳಿತಾಧಿಕಾರಿ ವಿರುದ್ದ ಜನಾಕ್ರೋಶ

1-saddsaddadsadasd

BJP ತತ್ ಕ್ಷಣವೇ ಶಾಸಕ ಎಂ.ಚಂದ್ರಪ್ಪ ರನ್ನು ಉಚ್ಚಾಟಿಸಬೇಕು: ದಸಂಸ

narayanswamy

ಮತದಾರರನ್ನು ಭಿಕ್ಷುಕರ ಸಾಲಿನಲ್ಲಿ ನಿಲ್ಲಿಸಲು ಕಾಂಗ್ರೆಸ್ ಷಡ್ಯಂತ್ರ: ಎ.ನಾರಾಯಣಸ್ವಾಮಿ

MUST WATCH

udayavani youtube

ಮನೆಯಲ್ಲಿಯೇ ಮಾಡಿ ರುಚಿಕರವಾದ ಎಗ್‌ ಘೀ ರೋಸ್ಟ್‌

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

ಹೊಸ ಸೇರ್ಪಡೆ

4 children found alive in Colombian Amazon rain forest

ವಿಮಾನ ಅಪಘಾತದಲ್ಲಿ ನಾಪತ್ತೆ: 40 ದಿನಗಳ ಬಳಿಕ ಅಮೆಜಾನ್ ಕಾಡಿನಲ್ಲಿ ಪತ್ತೆಯಾದ 4 ಮಕ್ಕಳು

Balasore Tragedy; ಭೀಕರ ರೈಲ್ವೆ ದುರಂತದಲ್ಲಿ ಶವಾಗಾರವಾಗಿದ್ದ ಶಾಲೆ ನೆಲಸಮ

Balasore Tragedy; ಭೀಕರ ರೈಲ್ವೆ ದುರಂತದಲ್ಲಿ ಶವಾಗಾರವಾಗಿದ್ದ ಶಾಲೆ ನೆಲಸಮ

Kannada movie darbar review

Movie Review: ದರ್ಬಾರ್‌ ಒಳಗೊಂದು ನಗೆಹಬ್ಬ

BIPARJOY ಚಂಡಮಾರುತ 24ಗಂಟೆಯಲ್ಲಿ ತೀವ್ರ ಸ್ವರೂಪ-ಕರಾವಳಿ ಭಾಗದಲ್ಲಿ ತೀವ್ರ ಮಳೆ ಸಾಧ್ಯತೆ

BIPARJOY ಚಂಡಮಾರುತ 24ಗಂಟೆಯಲ್ಲಿ ತೀವ್ರ ಸ್ವರೂಪ-ಕರಾವಳಿ ಭಾಗದಲ್ಲಿ ತೀವ್ರ ಮಳೆ ಸಾಧ್ಯತೆ

Human Milk Bank: ಎದೆ ಹಾಲು ಕೊರತೆ: 4 ಜಿಲ್ಲೆಯಲ್ಲಿ ಅಮೃತಧಾರೆ ಕೇಂದ್ರ

Human Milk Bank: ಎದೆ ಹಾಲು ಕೊರತೆ: 4 ಜಿಲ್ಲೆಯಲ್ಲಿ “ಅಮೃತಧಾರೆ ಕೇಂದ್ರ”