ಅಂತರ್ಗತವಾಗಿರುವ ಆತ್ಮವಿಶ್ವಾಸ ಮುಖ್ಯ: ಪುಷ್ಪಲತಾ


Team Udayavani, Nov 10, 2018, 2:50 PM IST

shiv-2.jpg

ಸಿರಿಗೆರೆ: ಪ್ರತಿಯೊಬ್ಬರ ಒಳಗೆ ಅಂತರ್ಗತವಾಗಿರುವ, ಎಲ್ಲ ಬಲಗಳಿಗಿಂತ ದೊಡ್ಡ ಬಲ ಆತ್ಮವಿಶ್ವಾಸ. ಜ್ಞಾನ ಇದ್ದಲ್ಲಿ ಆತ್ಮವಿಶ್ವಾಸ ಬಲವರ್ಧನೆಯಾಗುತ್ತದೆ. ಆತ್ಮವಿಶ್ವಾಸವನ್ನು ಕಟ್ಟಿಕೊಡುವ ಶಕ್ತಿ ರಂಗಕಲೆಗಿದೆ. ಅರಿವು, ಕಲಿಕೆ ಬೇರೆಲ್ಲೂ ಇಲ್ಲ; ನಮ್ಮೊಳಗೇ ಇದೆ ಎನ್ನುವುದನ್ನು ತಿಳಿಸುವುದೇ ಆತ್ಮವಿಶ್ವಾಸ ಎಂದು ದಾವಣಗೆರೆಯ ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಲತಾ ಹೇಳಿದರು.

ಸಾಣೇಹಳ್ಳಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ನಾಟಕೋತ್ಸವದ ಅಂಗವಾಗಿ ಶುಕ್ರವಾರ ಏರ್ಪಡಿಸಿದ್ದ ಚಿಂತನಾ ಸಭೆಯಲ್ಲಿ ಅವರು ಮಾತನಾಡಿದರು.
 ಭಗವಂತನ ಸೃಷ್ಟಿಯಲ್ಲಿ ವ್ಯರ್ಥವೆನ್ನುವುದು ಯಾವುದೂ ಇಲ್ಲ. ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ಪ್ರತಿಭೆ ಇದ್ದೇ ಇರುತ್ತದೆ. ಅದನ್ನು ಗುರುತಿಸಿಕೊಂಡು ಮುನ್ನುಗುವುದೇ ಆತ್ಮವಿಶ್ವಾಸ. ಆತ್ಮವಿಶ್ವಾಸದ ಕೊರೆತೆಯೇ ಹಿನ್ನಡೆ, ವೃದ್ಧಿಯೇ ಮುನ್ನಡೆ. ಇಂದಿನ ಮಕ್ಕಳೇ ನಾಳಿನ ಪ್ರಜೆಗಳು. ಮಕ್ಕಳು ಎಂದಿಗೂ ಆತ್ಮವಿಶ್ವಾಸವನ್ನು ಕಳೆದುಕೊಳ್ಳಬಾರದು ಎಂದರು.

ಭಾರತೀಯ ಪರಂಪರೆಯಲ್ಲಿ ಗುರು ಸ್ಥಾನ ಅತ್ಯಂತ ಮಹತ್ವದ್ದು. ಈ ಗುರುಪರಂಪರೆ ಮಾಡಿದ ಮೊದಲ ಕೆಲಸ ಜನರಲ್ಲಿ ಆತ್ಮವಿಶ್ವಾಸ ಮೂಡಿಸುವಂಥದ್ದು. ಗುರುವೋರ್ವ ಹುಲಿ ಬಂದಾಗ ತನ್ನ ಶಿಷ್ಯ “ಸಳ ನಿಗೆ “ಹೊಯ್‌? ಹೇಳಿ ಪ್ರೇರೇಪಿಸಿದ್ದರ ಪರಿಣಾಮ ಮುಂದೆ ಹೊಯ್ಸಳ
ಸಾಮ್ರಾಜ್ಯವಾಯಿತು. ತಾಯಿ ಜೀಜಾಬಾಯಿ ಮಗ ಶಿವಾಜಿಗೆ “ನನಗೆ ನೀನು ಕೊಡುಗೆಯೊಂದನ್ನು ಕೊಡಲೇ ಬೇಕೆಂದರೆ ರಾಯಘಡದ ಕೋಟೆಯನ್ನು ಗೆದ್ದು ತಾ ಎನ್ನುವ ಮಾತು ಪ್ರೇರಣೆ ಮುಂದೆ ಮರಾಠ ಸಾಮ್ರಾಜ್ಯಕ್ಕೆ ಭದ್ರ ಬುನಾದಿಯಾಯಿತು ಎಂದರು.

ಸಾಮಾನ್ಯ ಕುಟುಂಬಗಳಲ್ಲಿ ನೋವು ಮತ್ತು ಅವಮಾನಗಳನ್ನೇ ಅನುಭವಿಸುತ್ತ ಬಂದಿರುವ ಹಲವರು ಅಸಮಾನ್ಯವಾದುದನ್ನು ಸಾಧಿಸಿರುವುದಕ್ಕೆ ಅವರಲ್ಲಿನ ಆತ್ಮವಿಶ್ವಾಸವೇ ಕಾರಣವಾಗಿದೆ. ಸಾಧಿಸಬೇಕೆಂಬ ಛಲ ಮತ್ತು ಮನೋಬಲವಿದ್ದರೆ ಏನೆಲ್ಲವನ್ನೂ ಮಾಡಬಹುದು ಎಂದು ಹೇಳಿದರು.

ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಛಲ ಮತ್ತು ಮನೋಬಲವಿದ್ದರೆ ಸಂಪತ್ತು ತಾನಾಗಿಯೇ ತನ್ನ ಕಾಲಬಳಿ ಬಂದು ನಿಲ್ಲುವುದು. ಸಾಧನೆ ಮಾಡಿದ ಬಹುತೇಕರು ಬಡತನ, ಅಜ್ಞಾನ, ಅವಮಾನಗಳಲ್ಲೇ ಹುಟ್ಟಿದವರೂ ಅವರು ಅಸಾಮಾನ್ಯವಾದುದನ್ನು ಸಾಸಿದ್ದಾರೆ.
ಇದಕ್ಕೆ ಕಾರಣ ಅವರ ಅತ್ಮವಿಶ್ವಾಸ ಎಂದರು. ನಮ್ಮ ಹಳ್ಳಿಗರು ಮನಸ್ಸಿದ್ದಲ್ಲಿ ಮಾರ್ಗ ಎನ್ನುವರು. ಮನಸ್ಸನ್ನು ಹಿಡಿದಿಟ್ಟುಕೊಳ್ಳುವ ಏಕಮಾತ್ರ
ಸಾಧನ ಆತ್ಮವಿಶ್ವಾಸ. ದೇಹದ ಮೇಲಿನ ಹತೋಟಿ ಸಾಧ್ಯ. ಮನಸ್ಸಿನ ಹತೋಟಿ ಕಷ್ಟಸಾಧ್ಯ. ಇಂದು ಬಾಹ್ಯವಾಗಿ ಹೆಚ್ಚು ಚಲನಶೀಲತೆ ಕಾಣುವೆವು. ಆದರೆ, ಆಂತರಿಕವಾಗಿ ಇಂಥ ಚಲನಶೀಲತೆ ಕಡಿಮೆಯಾಗಿದೆ. ಆದುದರಿಂದಲೇ ನಿರೀಕ್ಷಿತ ಫಲಿತಾಂಶ ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.

ಎಷ್ಟೇ ಬಡತನವಿದ್ದರೂ ನಮ್ಮ ಹಿರಿಯರು ಆತ್ಮಹತ್ಯೆಯ ದಾರಿ ಹಿಡಿಯಲಿಲ್ಲ. ಆದರೆ ಇಂದು ಏನೆಲ್ಲ ಸೌಲಭ್ಯಗಳು ಇದ್ದರೂ ಸಣ್ಣಪುಟ್ಟ ವಿಷಯಗಳಿಗೆ
ವಿದ್ಯಾರ್ಥಿಗಳು, ಯುವಕ-ಯುವತಿಯರು ಆತ್ಮಹತ್ಯೆಗೆ ಶರಣಾಗುತ್ತಿರುವುದಕ್ಕೆ ಅವರಲ್ಲಿನ ಆತ್ಮವಿಶ್ವಾಸದ ಕೊರತೆ ಕಾರಣವಾಗಿದೆ. ಸಕಾರಾತ್ಮಕ ಚಿಂತನೆಗಳು ಆತ್ಮಸ್ಥೈರ್ಯವನ್ನು ಹೆಚ್ಚಿಸುತ್ತವೆ ಎಂದು ಹೇಳಿದರು.

ಟಾಪ್ ನ್ಯೂಸ್

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.