ಅಬಕಾರಿ ಉಪ ಆಯುಕ್ತರ ಅಕ್ರಮ ಆಸ್ತಿ ತನಿಖೆಯಾಗಲಿ

ಮದ್ಯ ಮಾರಾಟಗಾರರಿಂದ ವಸೂಲಿ ಮಾಡಿದ ಹಣದಲ್ಲಿ ನಾಗಶಯನರಿಂದ ಆಸ್ತಿ ಸಂಪಾದನೆ: ಬಾಬು ರೆಡ್ಡಿ

Team Udayavani, May 12, 2022, 4:32 PM IST

chithradurga

ಚಿತ್ರದುರ್ಗ: ಲಂಚ ಸ್ವೀಕರಿಸುವಾಗ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದಿರುವ ಅಬಕಾರಿ ಉಪ ಆಯುಕ್ತ ನಾಗಶಯನ ಅಕ್ರಮವಾಗಿ ಸಂಪಾದಿಸಿರುವ ಆಸ್ತಿಯನ್ನು ತನಿಖೆಗೆ ಒಳಪಡಿಸಬೇಕು. ಎಸಿಬಿ ಅಧಿಕಾರಿಗಳು ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು ಎಂದು ಕರ್ನಾಟಕ ರಾಜ್ಯ ಮದ್ಯ ಮಾರಾಟಗಾರರ ಸಂಘದ ಸದಸ್ಯರು ಒತ್ತಾಯಿಸಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ ಬಾಬು ರೆಡ್ಡಿ, ಮದ್ಯ ಮಾರಾಟಗಾರರಿಂದ ವಸೂಲಿ ಮಾಡಿದ ಲಂಚದಲ್ಲಿ ನಾಗಶಯನ ಸಾಕಷ್ಟು ಆಸ್ತಿ ಸಂಪಾದಿಸಿದ್ದಾರೆ. ಈ ಸಂಬಂಧ ನಮ್ಮ ಸಂಘದ ಬಳಿ ದಾಖಲೆಗಳಿವೆ. ಇದರ ಬಗ್ಗೆ ಎಸಿಬಿ ಬೆಳಕು ಚೆಲ್ಲಬೇಕು ಎಂದರು.

ಪ್ರತಿ ಮದ್ಯದ ಅಂಗಡಿಯಿಂದ ಮಾಸಿಕ ಲಂಚಕ್ಕಾಗಿ ಪೀಡಿಸಲಾಗುತ್ತಿದೆ. ಈ ಬಗ್ಗೆ ಅಬಕಾರಿ ಇಲಾಖೆ ಅಧಿಕಾರಿ ಜೊತೆಗೆ ಹಲವು ಬಾರಿ ಚರ್ಚೆ ನಡೆಸಿದ್ದೇವೆ. ಮದ್ಯ ಮಾರಾಟಗಾರರ ಸಮಸ್ಯೆಗಳನ್ನು ವಿವರಿಸುವ ಪ್ರಯತ್ನ ಮಾಡಿದ್ದೇವೆ. ಇದಕ್ಕೆ ಮಣಿಯದಿದ್ದಾಗ ಎಸಿಬಿಗೆ ದೂರು ನೀಡಬೇಕಾಯಿತು ಎಂದು ವಿವರಿಸಿದರು. ನಾಗಶಯನ ಅಬಕಾರಿ ಇಲಾಖೆಗೆ ಸೇರಿದಾಗಿನಿಂದ ಸಮಸ್ಯೆ ಸೃಷ್ಟಿಯಾಗಿದೆ. ಅವರು ಕರ್ತವ್ಯ ನಿರ್ವಹಿಸಿದ ಎಲ್ಲ ಸ್ಥಳಗಳಲ್ಲೂ ಇಂತಹ ಆರೋಪಗಳು ಕೇಳಿ ಬಂದಿವೆ. 2017ರಲ್ಲಿ ಮೊದಲ ಬಾರಿ ಜಿಲ್ಲೆಗೆ ನಿಯೋಜನೆಗೊಂಡಾಗ ಅಧಿಕಾರಿಯ ನೈಜ ಸ್ವರೂಪ ಗೊತ್ತಾಯಿತು. 2020ರಲ್ಲಿ ಮತ್ತೆ ಜಿಲ್ಲೆಗೆ ಮರಳಿದಾಗ ಸಮಸ್ಯೆ ಬಿಗಡಾಯಿಸಿದೆ ಎಂದು ದೂರಿದರು.

ಮದ್ಯ ಮಾರಾಟಕ್ಕೆ ಸರ್ಕಾರದಿಂದ ಅನುಮತಿ ಪಡೆದಿರುತ್ತೇವೆ. ಇದು ಕೆಟ್ಟ ದಂಧೆಯಲ್ಲ, ಇದೊಂದು ಉದ್ಯಮ. ಆದರೂ ಸಮಾಜ ನಮ್ಮನ್ನು ಕೆಟ್ಟ ದೃಷ್ಟಿಯಿಂದ ನೋಡುತ್ತಿದೆ. ಮದ್ಯ ಮಾರಾಟಕ್ಕೆ ಸರ್ಕಾರ ಕಡಿವಾಣ ಹಾಕಿದರೆ ನಮ್ಮ ತಕರಾರಿಲ್ಲ. ದೇಶದ ಇತರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದ ಮದ್ಯ ಮಾರಾಟ ವ್ಯವಸ್ಥೆ ಪಾರದರ್ಶಕವಾಗಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ರಾಜ್ಯ ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷ ಎಸ್‌. ಗುರುಸ್ವಾಮಿ ಮಾತನಾಡಿ, ರಾಜ್ಯದ ಹಲವೆಡೆ ಮದ್ಯ ಮಾರಾಟಗಾರರಿಗೆ ಕಿರುಕುಳ ನೀಡಲಾಗುತ್ತಿದೆ. ಅಬಕಾರಿ ಇಲಾಖೆಯಲ್ಲಿ ಭ್ರಷ್ಟರ ಸಂಖ್ಯೆ ಬೆರಳೆಣಿಕೆಯಷ್ಟಿದೆ. ಅಂಥಹ ಭ್ರಷ್ಟರ ವಿರುದ್ಧ ಇದೇ ಮಾದರಿಯಲ್ಲಿ ಹೋರಾಟ ಮುಂದುವರೆಸಲಾಗುವುದು ಎಂದು ಎಚ್ಚರಿಸಿದರು.

ಎಲ್ಲ ಕಾಲದಲ್ಲೂ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದುಕೊಂಡು ಬಂದಿದೆ. ಕೆಲ ಅಧಿಕಾರಿಗಳು ಮಿತಿ ಮೀರಿ ವಸೂಲಿ ಮಾಡುತ್ತಿದ್ದಾರೆ. ನಮಗೆ ಸರ್ಕಾರ ನಿಗದಿ ಮಾಡಿರುವ ಶೇ. 10ರಷ್ಟು ಕಮೀಷನ್‌ನಲ್ಲಿ ತೆರಿಗೆ ತೆಗೆದು ಶೇ. 7 ರಷ್ಟು ಮಾತ್ರ ಉಳಿಯುತ್ತದೆ. ಕಟ್ಟಡದ ಬಾಡಿಗೆ, ಸಿಬ್ಬಂದಿಗಳ ವೇತನ ಮತ್ತಿತರೆ ಖರ್ಚುಗಳನ್ನು ತೆಗೆದರೆ ಲಂಚವನ್ನು ಎಲ್ಲಿಂದ ನೀಡಬೇಕು ಎಂದು ಪ್ರಶ್ನಿಸಿದರು.

ರಾಜ್ಯ ಮದ್ಯ ಮಾರಾಟಗಾರರ ಸಂಘದ ಉಪಾಧ್ಯಕ್ಷ ಗೋವಿಂದರಾಜ ಹೆಗಡೆ ಮಾತನಾಡಿ, ಅಬಕಾರಿ ಕಾಯ್ದೆಗಳನ್ನು ಅಧಿಕಾರಿಗಳು ತಮ್ಮಿಷ್ಟದಂತೆ ಬಳಕೆ ಮಾಡುತ್ತಿದ್ದಾರೆ. ಅಬಕಾರಿ ಕಾಯ್ದೆ ಸಂಪೂರ್ಣ ದುರುಪಯೋಗವಾಗುತ್ತಿದೆ. ಇಂತಹ ನೀತಿಗಳನ್ನು ಸರ್ಕಾರ ಸರಳೀಕರಿಸಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಮದ್ಯ ಮಾರಾಟಗಾರರ ಸಂಘದ ಉಪಾಧ್ಯಕ್ಷ ತಿಪ್ಪೇಸ್ವಾಮಿ, ಮಾಜಿ ಅಧ್ಯಕ್ಷ ಪ್ರಸನ್ನಕುಮಾರ್‌ ಇದ್ದರು.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.