ISRO ಸಾಧನೆ: ಅಂತರಿಕ್ಷ ನೌಕೆ ‘ಪುಷ್ಪಕ್’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…
Team Udayavani, Mar 22, 2024, 9:16 AM IST
ಚಿತ್ರದುರ್ಗ: ಮರು ಬಳಕೆ ಉಡ್ಡಯನ ವಾಹನ (ಆರ್ಎಲ್ವಿ) “ಪುಷ್ಪಕ್’ ರಾಕೆಟ್ನ ಲ್ಯಾಂಡಿಂಗ್ ಪರೀಕ್ಷೆಯನ್ನು ಶುಕ್ರವಾರ ಯಶಸ್ವಿಯಾಗಿ ನಡೆಸಿದೆ.
ಮರು ಬಳಕೆ ಉಡ್ಡಯನ ವಾಹನ (ಆರ್ಎಲ್ವಿ)ಯನ್ನು ಇಂದು (ಶುಕ್ರವಾರ) ಬೆಳಗ್ಗೆ 7 ಗಂಟೆಗೆ ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ ಎಂದು ಇಸ್ರೋ ಮಾಹಿತಿ ನೀಡಿದೆ. ಚಳ್ಳಕೆರೆ ರನ್ ವೇಯಿಂದ ಬೆಳಗ್ಗೆ 7 ಗಂಟೆ ಸುಮಾರಿಗೆ ರಾಕೆಟ್ ಉಡಾವಣೆಯಾಗಿದೆ. ಇದು ಆರ್ಎಲ್ವಿಯ ಮೂರನೇ ಲ್ಯಾಂಡಿಂಗ್ ಮಿಷನ್ ಆಗಿದ್ದು, ಈ ಹಿಂದೆ 2016 ರಲ್ಲಿ ಮೊದಲ ಪ್ರಯೋಗ ನಡೆಸಿದ ಬಾಹ್ಯಾಕಾಶ ಸಂಸ್ಥೆ ಕಳೆದ ವರ್ಷ ಏಪ್ರಿಲ್ನಲ್ಲಿ ಎರಡನೇ ಪ್ರಯೋಗವನ್ನು ಯಶಸ್ವಿಯಾಗಿ ನಡೆಸಿತ್ತು.
ಉಡಾವಣಾ ವಾಹನವನ್ನು ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಮೂಲಕ ಸುಮಾರು 4.5 ಕಿಮೀ ಎತ್ತರಕ್ಕೆ ಕೊಂಡೊಯ್ಯಲಾಯಿತು ಮತ್ತು ಪೂರ್ವನಿರ್ಧರಿತ ಪಿಲ್ಬಾಕ್ಸ್ ನಿಯತಾಂಕಗಳನ್ನು ಪಡೆದ ನಂತರ ಬಿಡುಗಡೆ ಮಾಡಲಾಯಿತು ಈ ವೇಳೆ ಯಶಸ್ವಿಯಾಗಿ ಲ್ಯಾಂಡಿಂಗ್ ಆಗಿದೆ ಎಂದು ಇಸ್ರೋ ಹೇಳಿದೆ.
ಏನಿದು ಪುಷ್ಪಕ್ ರಾಕೆಟ್?
ಪುಷ್ಪಕ್ ಎಂದು ಹೆಸರಿಸಲಾಗಿರುವ ರಾಕೆಟ್ ಮರು ಬಳಕೆ ಮಾಡಬಹುದಾದ ಉಡ್ಡಯನ ವಾಹನವಾಗಿದೆ (ಆರ್ಎಲ್ವಿ). ವಿಮಾನದ ಮಾದರಿಯ ಅಂತರಿಕ್ಷ ನೌಕೆ ಇದಾಗಿದ್ದು, ಈ ರಾಕೆಟ್ನಿಂದ ಕಡಿಮೆ ವೆಚ್ಚದಲ್ಲಿ ವಸ್ತುಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸಬಹುದು. ವಾಯುಪಡೆ ಹೆಲಿಕಾಪ್ಟರ್ ಸಹಾಯದಿಂದ ಇದನ್ನು ಉಡಾವಣೆ ಮಾಡಲಾಗುತ್ತದೆ. ಈಗಾಗಲೇ ಅಮೆರಿಕ, ಚೀನ ಇಂತಹ ಮರುಬಳಕೆ ಮಾಡಬಹುದಾದ ಬಾಹ್ಯಾಕಾಶ ಉಡ್ಡಯನ ವಾಹನಗಳನ್ನು ಬಳಸುತ್ತಿದ್ದು, ಭಾರತ ಕೂಡ ಈ ಪಟ್ಟಿಗೆ ಸೇರ್ಪಡೆಯಾಗಲಿದೆ.
ಲಾಭವೇನು?
ರಾಕೆಟ್ನ ಮೇಲ್ಭಾಗದಲ್ಲಿರುವ ಅತ್ಯಂತ ದುಬಾರಿ ಭಾಗಗಳನ್ನು ಮರು ಬಳಕೆ ಮಾಡುವ ರೀತಿಯಲ್ಲಿ ತಯಾರಿಸಲಾಗಿದೆ. ಕಕ್ಷೆಯಲ್ಲಿರುವ ಉಪಗ್ರಹಗಳಿಗೆ ಇಂಧನ ಮರುಪೂರಣ ಸಾಮರ್ಥ್ಯ ವನ್ನೂ ಅದು ಹೊಂದಿದೆ. ನವೀಕರಣಕ್ಕಾಗಿ ಉಪಗ್ರಹ ಗಳನ್ನು ವಾಪಸ್ ಪಡೆಯಲು ಇದು ನೆರವು ನೀಡುತ್ತದೆ. ಭಾರತವು ಬಾಹ್ಯಾಕಾಶದಲ್ಲಿ ಕನಿಷ್ಠ ತ್ಯಾಜ್ಯ ಉಳಿಸಲು ಬಯಸುತ್ತಿದ್ದು, ಪುಷ್ಪಕ ರಾಕೆಟ್ ಆ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ.
RLV-LEX-02 Experiment:
🇮🇳ISRO nails it again!🎯Pushpak (RLV-TD), the winged vehicle, landed autonomously with precision on the runway after being released from an off-nominal position.
🚁@IAF_MCC pic.twitter.com/IHNoSOUdRx
— ISRO (@isro) March 22, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್