![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
ISRO ಸಾಧನೆ: ಅಂತರಿಕ್ಷ ನೌಕೆ ‘ಪುಷ್ಪಕ್’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…
Team Udayavani, Mar 22, 2024, 9:16 AM IST
![ISRO Success: ಅಂತರಿಕ್ಷ ನೌಕೆ ‘ಪುಷ್ಪಕ್’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…](https://www.udayavani.com/wp-content/uploads/2024/03/pushpak-620x349.jpg)
ಚಿತ್ರದುರ್ಗ: ಮರು ಬಳಕೆ ಉಡ್ಡಯನ ವಾಹನ (ಆರ್ಎಲ್ವಿ) “ಪುಷ್ಪಕ್’ ರಾಕೆಟ್ನ ಲ್ಯಾಂಡಿಂಗ್ ಪರೀಕ್ಷೆಯನ್ನು ಶುಕ್ರವಾರ ಯಶಸ್ವಿಯಾಗಿ ನಡೆಸಿದೆ.
ಮರು ಬಳಕೆ ಉಡ್ಡಯನ ವಾಹನ (ಆರ್ಎಲ್ವಿ)ಯನ್ನು ಇಂದು (ಶುಕ್ರವಾರ) ಬೆಳಗ್ಗೆ 7 ಗಂಟೆಗೆ ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ ಎಂದು ಇಸ್ರೋ ಮಾಹಿತಿ ನೀಡಿದೆ. ಚಳ್ಳಕೆರೆ ರನ್ ವೇಯಿಂದ ಬೆಳಗ್ಗೆ 7 ಗಂಟೆ ಸುಮಾರಿಗೆ ರಾಕೆಟ್ ಉಡಾವಣೆಯಾಗಿದೆ. ಇದು ಆರ್ಎಲ್ವಿಯ ಮೂರನೇ ಲ್ಯಾಂಡಿಂಗ್ ಮಿಷನ್ ಆಗಿದ್ದು, ಈ ಹಿಂದೆ 2016 ರಲ್ಲಿ ಮೊದಲ ಪ್ರಯೋಗ ನಡೆಸಿದ ಬಾಹ್ಯಾಕಾಶ ಸಂಸ್ಥೆ ಕಳೆದ ವರ್ಷ ಏಪ್ರಿಲ್ನಲ್ಲಿ ಎರಡನೇ ಪ್ರಯೋಗವನ್ನು ಯಶಸ್ವಿಯಾಗಿ ನಡೆಸಿತ್ತು.
ಉಡಾವಣಾ ವಾಹನವನ್ನು ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಮೂಲಕ ಸುಮಾರು 4.5 ಕಿಮೀ ಎತ್ತರಕ್ಕೆ ಕೊಂಡೊಯ್ಯಲಾಯಿತು ಮತ್ತು ಪೂರ್ವನಿರ್ಧರಿತ ಪಿಲ್ಬಾಕ್ಸ್ ನಿಯತಾಂಕಗಳನ್ನು ಪಡೆದ ನಂತರ ಬಿಡುಗಡೆ ಮಾಡಲಾಯಿತು ಈ ವೇಳೆ ಯಶಸ್ವಿಯಾಗಿ ಲ್ಯಾಂಡಿಂಗ್ ಆಗಿದೆ ಎಂದು ಇಸ್ರೋ ಹೇಳಿದೆ.
ಏನಿದು ಪುಷ್ಪಕ್ ರಾಕೆಟ್?
ಪುಷ್ಪಕ್ ಎಂದು ಹೆಸರಿಸಲಾಗಿರುವ ರಾಕೆಟ್ ಮರು ಬಳಕೆ ಮಾಡಬಹುದಾದ ಉಡ್ಡಯನ ವಾಹನವಾಗಿದೆ (ಆರ್ಎಲ್ವಿ). ವಿಮಾನದ ಮಾದರಿಯ ಅಂತರಿಕ್ಷ ನೌಕೆ ಇದಾಗಿದ್ದು, ಈ ರಾಕೆಟ್ನಿಂದ ಕಡಿಮೆ ವೆಚ್ಚದಲ್ಲಿ ವಸ್ತುಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸಬಹುದು. ವಾಯುಪಡೆ ಹೆಲಿಕಾಪ್ಟರ್ ಸಹಾಯದಿಂದ ಇದನ್ನು ಉಡಾವಣೆ ಮಾಡಲಾಗುತ್ತದೆ. ಈಗಾಗಲೇ ಅಮೆರಿಕ, ಚೀನ ಇಂತಹ ಮರುಬಳಕೆ ಮಾಡಬಹುದಾದ ಬಾಹ್ಯಾಕಾಶ ಉಡ್ಡಯನ ವಾಹನಗಳನ್ನು ಬಳಸುತ್ತಿದ್ದು, ಭಾರತ ಕೂಡ ಈ ಪಟ್ಟಿಗೆ ಸೇರ್ಪಡೆಯಾಗಲಿದೆ.
ಲಾಭವೇನು?
ರಾಕೆಟ್ನ ಮೇಲ್ಭಾಗದಲ್ಲಿರುವ ಅತ್ಯಂತ ದುಬಾರಿ ಭಾಗಗಳನ್ನು ಮರು ಬಳಕೆ ಮಾಡುವ ರೀತಿಯಲ್ಲಿ ತಯಾರಿಸಲಾಗಿದೆ. ಕಕ್ಷೆಯಲ್ಲಿರುವ ಉಪಗ್ರಹಗಳಿಗೆ ಇಂಧನ ಮರುಪೂರಣ ಸಾಮರ್ಥ್ಯ ವನ್ನೂ ಅದು ಹೊಂದಿದೆ. ನವೀಕರಣಕ್ಕಾಗಿ ಉಪಗ್ರಹ ಗಳನ್ನು ವಾಪಸ್ ಪಡೆಯಲು ಇದು ನೆರವು ನೀಡುತ್ತದೆ. ಭಾರತವು ಬಾಹ್ಯಾಕಾಶದಲ್ಲಿ ಕನಿಷ್ಠ ತ್ಯಾಜ್ಯ ಉಳಿಸಲು ಬಯಸುತ್ತಿದ್ದು, ಪುಷ್ಪಕ ರಾಕೆಟ್ ಆ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ.
RLV-LEX-02 Experiment:
🇮🇳ISRO nails it again!🎯Pushpak (RLV-TD), the winged vehicle, landed autonomously with precision on the runway after being released from an off-nominal position.
🚁@IAF_MCC pic.twitter.com/IHNoSOUdRx
— ISRO (@isro) March 22, 2024
ಟಾಪ್ ನ್ಯೂಸ್
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
MUST WATCH
ಹೊಸ ಸೇರ್ಪಡೆ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.