Election Ticket ಬಿಜೆಪಿಯಲ್ಲಿ ಹಣ ಪಡೆದು ಟಿಕೆಟ್ ನೀಡಿಕೆ ಸ್ಪಷ್ಟ: ಸಚಿವ ಬಿ.ನಾಗೇಂದ್ರ
Team Udayavani, Oct 22, 2023, 8:27 PM IST
ಚಿತ್ರದುರ್ಗ: ಬಿಜೆಪಿಯಲ್ಲಿ ಹಣ ಪಡೆದು ಟಿಕೆಟ್ ನೀಡುವ ಸಂಸ್ಕೃತಿ ಇರುವುದು ಸ್ಪಷ್ಟವಾಗಿದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಬಿ.ನಾಗೇಂದ್ರ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಹಿಂದೆ ಕೆಲ ಸ್ವಾಮೀಜಿ, ಓರ್ವ ಮಹಿಳೆ ಸಿಕ್ಕಿ ಬಿದ್ದಿದ್ದರು. ಹಗರಿಬೊಮ್ಮನಹಳ್ಳಿಯಲ್ಲೂ ಟಿಕೆಟ್ಗಾಗಿ ಹಣ ಪಡೆದ ಆರೋಪವಿದೆ. ಬಿಜೆಪಿಯವರಿಗೆ ದುಡ್ಡು ಬಿಟ್ಟರೆ ಬೇರೆನೂ ಗೊತ್ತಿಲ್ಲ. ಸಾಮಾಜಿಕ ನ್ಯಾಯದ ಬಗ್ಗೆ ಅವರಿಗೆ ಅರಿವಿಲ್ಲ. ನಮ್ಮದು ಅಲ್ಪಾವಧಿ ಸರ್ಕಾರ ಎನ್ನುತ್ತಿರುವ ಮಾಜಿ ಸಚಿವರಾದ ಗೋವಿಂದ ಕಾರಜೋಳ ಹಾಗೂ ಈಶ್ವರಪ್ಪ ಭ್ರಮೆಯಲ್ಲಿದ್ದಾರೆ.
ಪಂಚ ಗ್ಯಾರಂಟಿ ಯೋಜನೆಗಳನ್ನು ನೋಡಿ ಹೊಟ್ಟೆ ಉರಿಯಿಂದ ಹೀಗೆ ಹೇಳುತ್ತಿದ್ದಾರೆ. ಸರ್ಕಾರದಲ್ಲಿ ಅನುದಾನದ ಕೊರತೆಯಿಲ್ಲ. ಹಂತ ಹಂತವಾಗಿ ಎಲ್ಲ ಯೋಜನೆಗಳಿಗೂ ಅನುದಾನ ಒದಗಿಸಲಾಗುತ್ತದೆ. ಎಲ್ಲಾ ಶಾಸಕರಿಗೂ ಸ್ಪಂದಿಸುವಂತೆ ಸಿಎಂ, ಡಿಸಿಎಂ ಸೂಚಿಸಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್