ಆರ್ ಎಸ್ಎಸ್ ಬಗ್ಗೆ ಮಾತು ಬೆಂಕಿ ಜತೆ ಸರಸವಾಡಿದಂತೆ: ಸಚಿವ ಈಶ್ವರಪ್ಪ
Team Udayavani, Oct 11, 2021, 3:49 PM IST
ಹೊಸದುರ್ಗ: ಆರ್ ಎಸ್ಎಸ್ ಬಗ್ಗೆ ನೆಹರು, ಇಂದಿರಾ ಗಾಂಧಿ ಮಾತಾಡಿ ಅನುಭವಿಸಿದ್ದಾರೆ. ಸಿದ್ಧರಾಮಯ್ಯ, ಡಿಕೆ ಶಿವಕುಮಾರ್, ಹೆಚ್ ಡಿ ಕುಮಾರಸ್ವಾಮಿ ಅವರೇ ಆರ್ ಎಸ್ಎಸ್ ಬಗ್ಗೆ ಮಾತು ಬೆಂಕಿ ಜತೆ ಸರಸವಾಡಿದಂತೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು,.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮನ ಬಗ್ಗೆ ರಾವಣನಿಗೆ ಎಲ್ಲಾ ಗೊತ್ತಿತ್ತು. ಶಿವಾಜಿ ಬಗ್ಗೆ ಔರಂಗಜೇಬ್ ಗೆ ಏನೂ ಗೊತ್ತಿರಲಿಲ್ಲ. ಶಿವಾಜಿ ಹುಟ್ಟಿಲ್ಲದಿದ್ದರೆ ದೇಶದಲ್ಲಿ ಹಿಂದೂಗಳು ಇರುತ್ತಿರಲಿಲ್ಲ. ಆರ್ ಎಸ್ಎಸ್ ಇಲ್ಲದಿದ್ದರೆ ಯೋಚನೆ ಮಾಡಬೇಕಿತ್ತು. ಈ ದೇಶ ಪಾಕಿಸ್ತಾನವೋ ಇನ್ನೊಂದು ಆಗುತ್ತಿತ್ತು ಎಂದರು.
ಮುಸ್ಲಿಂ ಮತಕ್ಕಾಗಿ ಸಿದ್ಧರಾಮಯ್ಯ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಕ್ರೈಸ್ತರ ಸಭೆಗೆ ಹೋಗಿ ಅವರ ಸಂತೃಪ್ತಿಗೊಳಿಸಲು ಹೆಚ್ ಡಿ ಕುಮಾರಸ್ವಾಮಿ ಮಾತನಾಡುತ್ತಿದ್ದಾರೆ. ರಾಜಕೀಯಕ್ಕೆ ಮಾಡಲು ಬೇಕಾದಷ್ಟು ವಿಚಾರಗಳು ಇವೆ. ರಾಷ್ಟ್ರೀಯ ವಿಚಾರಗಳ ಬಗ್ಗೆ ರಾಜಕಾರಣ ಬೇಡ ಎಂದರು.
ಇದನ್ನೂ ಓದಿ:ವಿದ್ಯುತ್ ಉತ್ಪಾದನಾ ಘಟಕಗಳ ಖಾಸಗೀಕರಣಕ್ಕೆ ಹುನ್ನಾರ : ಸಿದ್ದರಾಮಯ್ಯ ಗಂಭೀರ ಆರೋಪ
ಆರ್ ಎಸ್ಎಸ್ ಯುವಕರಿಗೆ ರಾಷ್ಟ್ರೀಯ ವಿಚಾರ ತಿಳಿಸುತ್ತಿದೆ. ಗಾಂಧೀಜಿ ಅವರೇ ಆರ್ ಎಸ್ಎಸ್ ಕ್ಯಾಂಪಿಗೆ ಬಂದಿದ್ದರು. ಬಹಳ ಒಳ್ಳೆಯ ಕೆಲಸ ಮಾಡುತ್ತಿದ್ದೀರಿ ಎಂದಿದ್ದರು. ಕೊಲೆಗಡುಕರು ಕಾಂಗ್ರೆಸ್ಸಿಗರು, ಬಿಜೆಪಿಯವರು ಅಲ್ಲ ಎಂದು ಸಚಿವ ಈಶ್ವರಪ್ಪ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ
Road mishap: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ; ಓರ್ವ ಸಾವು