ತಾಕತ್ತಿದ್ದರೆ ಆರ್ ಎಸ್ ಎಸ್, ಬಜರಂಗದಳ ನಿಷೇಧಿಸಲಿ: ಕಲ್ಲಡ್ಕ ಪ್ರಭಾಕರ್ ಭಟ್ ಸವಾಲು
ಗಾಂಧೀಜಿ ಅವರ ಮಾತನ್ನು ಆರ್ ಎಸ್ ಎಸ್ ಮಾತ್ರ ಪಾಲಿಸುತ್ತಿದೆ
Team Udayavani, Jan 28, 2020, 4:03 PM IST
ಚಿತ್ರದುರ್ಗ: ಹಿಂದೂಗಳ ರಕ್ಷಣೆ, ದೇಶಭಕ್ತಿ ಹಾಗೂ ಶಿಸ್ತು ಬೆಳೆಸುತ್ತಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ ಹಾಗೂ ಬಜರಂಗದಳ ಸಂಘಟನೆಗಳನ್ನು ತಾಕತ್ತಿದ್ದರೆ ನಿಷೇಧಿಸಲಿ ಎಂದು ಆರ್ ಎಸ್ ಎಸ್ ಹಿರಿಯ ಮುಖಂಡ ಡಾ.ಪ್ರಭಾಕರ್ ಭಟ್ ಕಲ್ಲಡ್ಕ ಸವಾಲು ಹಾಕಿದರು.
ಮಂಗಳವಾರ ಚಿತ್ರದುರ್ಗದ ಮಾದಾರ ಚೆನ್ನಯ್ಯ ಗುರುಪೀಠಕ್ಕೆ ಭೇಟಿ ನೀಡಿದ್ದ ವೇಳೆ ಸುದ್ದಿಗಾರರ ಜತೆ ಮಾತನಾಡಿದ ಅವರು, ಆರ್ ಎಸ್ ಎಸ್ ಹಾಗೂ ಬಜರಂಗದಳ ನಿಷೇಧಿಸುವಂತೆ ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಸಿದರು.
ಆರ್ ಎಸ್ ಎಸ್ ನಾಶಕ್ಕೆ ಸಾಕಷ್ಟು ಪ್ರಯತ್ನ ಮಾಡಲಾಗಿದೆ. ರಾಜಕೀಯ ವಿರೋಧಿಗಳಿಂದ ಈ ಹಿಂದೆ ಗಾಂಧೀಜಿ ಕೊಲೆ ಪ್ರಕರಣ ಮುಂದಿಟ್ಟುಕೊಂಡು ಸಂಘ ನಿಷೇಧ ಮಾಡಿದ್ದರು. ಆದರೆ ಜನ ಬೆಂಬಲದಿಂದ ನಿಷೇಧ ತೆರವಾಗಿದೆ.
ಆರ್ ಎಸ್ ಎಸ್ ಎಂದೂ ಕೂಡಾ ಹಿಂಸೆಯಲ್ಲಿ ನಂಬಿಕೆ ಇಟ್ಟುಕೊಂಡಿಲ್ಲ. ಗೊತ್ತಿಲ್ಲದಿದ್ದರೆ ಸಂಘದ ಇತಿಹಾಸವನ್ನು ಅಧ್ಯಯನ ಮಾಡಬೇಕು ಎಂದರು.
ಕ್ರಿಶ್ಚಿಯನ್ನರು, ಮುಸಲ್ಮಾನರು ಪಾಶ್ಚಾತ್ಯ ದೃಷ್ಟಿಕೋನ ಹೊಂದಿದ್ದಾರೆ. ಇದೇ ಕಾರಣಕ್ಕೆ ನಕ್ಸಲರಿಂದ ನಮ್ಮ ಮೇಲೆ ದಾಳಿ ಮಾಡಿಸಲಾಗುತ್ತಿದೆ ಎಂದರು.
ಹಿಂದೂ ಹೆಣ್ಣುಮಕ್ಕಳನ್ನು ಹಾರಿಸಿಕೊಂಡು ಹೋಗಲಾಗುತ್ತಿದೆ. ಗೋವುಗಳ ಮಾರಣಹೋಮ ಮಾಡಲಾಗುತ್ತಿದೆ. ಇದನ್ನು ತಡೆಯುವುದಕ್ಕೆ, ಹಿಂದೂ ಸಮಾಜದ ರಕ್ಷಣೆಗೆ ಆರ್ ಎಸ್ ಎಸ್ ಹೋರಾಟ ಮಾಡುತ್ತಿದೆ. ಗಾಂಧೀಜಿ ಹೇಳಿದ ಮತಾಂತರ, ಗೋಹತ್ಯೆ ನಿಷೇಧದ ಪರ ನಾವು ಹೋರಾಡುತ್ತಿದ್ದೇವೆ. ಆದರೆ ಈಗಿನವರು ನಕಲಿ ಗಾಂಧಿಗಳು, ಡೋಂಗಿಗಳು ಎಂದು ಕಲ್ಲಡ್ಕ ಪ್ರಭಾಕರ್ ಭಟ್ ಲೇವಡಿ ಮಾಡಿದರು.
ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಲ್ನಲ್ಲಿ ಗೋಮಾಂಸ ತಿನ್ನುವುದಾಗಿ ಹೇಳಿದ್ದರು. ಗಾಂಧೀಜಿ ಹೇಳಿದ ಮಾತನ್ನು ಕಾಂಗ್ರೆಸ್ಸಿನವರು ಸೇರಿದಂತೆ ಯಾರೂ ಪಾಲನೆ ಮಾಡುತ್ತಿಲ್ಲ ಎನ್ನುವುದು ಇದರಿಂದ ತಿಳಿಯುತ್ತದೆ. ಆದರೆ ಗಾಂಧೀಜಿ ಅವರ ಮಾತನ್ನು ಕೇವಲ ಆರ್ ಎಸ್ ಎಸ್ ಮಾತ್ರ ಪಾಲಿಸುತ್ತಿದೆ ಎಂದು ತಿಳಿಸಿದರು.
ಪಿಎಫ್ ಐ ಸಂಘಟನೆಗೆ ಹಲವು ವರ್ಷಗಳಿಂದ ಹೊರ ದೇಶದಿಂದ ಹಣ ಬರುತ್ತಿದೆ. ಇದರಿಂದಲೇ ಅವರು ಅಟ್ಟಹಾಸ ಮೆರೆಯುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು. ಇದನ್ನು ಮೆಟ್ಟಿ ನಿಲ್ಲುವುದಕ್ಕಾಗಿಯೇ ದೇಶದ ಪ್ರಧಾನಿ ಮೋದಿ ಹುಟ್ಟಿಬಂದಿದ್ದು, ಎಲ್ಲಾ ಹಿಂಸಾತ್ಮಕ ಕೃತ್ಯಗಳನ್ನು ಹಿಮ್ಮೆಟ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಬಣ್ಣಿಸಿದರು.
ಡಾ. ಅಂಬೇಡ್ಕರ್ ಅವರು ರಾಷ್ಟ್ರೀಯ ದೃಷ್ಟಿಕೋನ ಹೊಂದಿದ್ದ ಶ್ರೇಷ್ಟ ವ್ಯಕ್ತಿ. ಆರ್ ಎಸ್ ಎಸ್ ಪ್ರತಿ ಶಿಬಿರಗಳಲ್ಲಿ ಅಂಬೇಡ್ಕರ್ ವಿಚಾರ ಚಿಂತನೆಗಳನ್ನು ನಡೆಸಲಾಗುತ್ತದೆ. ಅವರ ವಿಚಾರಧಾರೆಗಳು ಎಲ್ಲರಿಗೂ ಪ್ರೇರೇಪಣೆ ಮಾಡುವಂಥದ್ದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ