ಟೆಂಡರ್ ಕೊಡಿಸದ್ದಕ್ಕೆ ಕಮಿಷನ್ ಆರೋಪ: ಶಾಸಕ ತಿಪ್ಪಾರೆಡ್ಡಿ
Team Udayavani, Jan 16, 2023, 11:32 PM IST
ಚಿತ್ರದುರ್ಗ: ಕರ್ನಾಟಕ ಆರೋಗ್ಯ ವ್ಯವಸ್ಥೆ ಅಭಿವೃದ್ಧಿ ಯೋಜನೆ(ಕೆಎಚ್ಎಸ್ಡಿಪಿ)ಯ ಟೆಂಡರ್ ಕೊಡಿಸದ ಕಾರಣಕ್ಕೆ ಕಮಿಷನ್ ಆರೋಪ ಮಾಡಿದ್ದಾರೆ. ಈ ಕುರಿತು ಎರಡು ದಿನಗಳಲ್ಲಿ ಕಾನೂನಾತ್ಮಕ ಹೋರಾಟ ಮಾಡುತ್ತೇನೆ ಎಂದು ಶಾಸಕ ಜಿ.ಎಚ್. ತಿಪ್ಪಾ ರೆಡ್ಡಿ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಕೆಎಚ್ಎಸ್ಡಿಪಿ ಟೆಂಡರ್ ಕೊಡಿಸದ ಕಾರಣಕ್ಕೆ ವೈಯಕ್ತಿಕ ದ್ವೇಷದಿಂದ ಕಮಿಷನ್ ಆರೋಪ ಮಾಡಿದ್ದಾರೆ. ಅಷ್ಟು ಕೊಟ್ಟಿದ್ದೇನೆ, ಇಷ್ಟು ಕೊಟ್ಟಿದ್ದೇನೆ ಅಂತ ಹೇಳಿದ್ದಾರೆ. ಆದರೆ ಯಾರಿಗೆ ಕೊಟ್ಟಿದ್ದಾರೆ. ಅಂತ ಗೊತ್ತಿಲ್ಲ. ಮಂಜುನಾಥ್ ಸ್ವಭಾವವೇ ಹೆದರಿಸಿ ಕೆಲಸ ಮಾಡಿಸುವುದಾಗಿದೆ.
ಈ ಹಿಂದೆ ಲೋಕೋಪಯೋಗಿ ಸಚಿವರ ಎದುರೇ ನನ್ನ ವಿರುದ್ಧ ಆರೋಪ ಮಾಡಿದ್ದರು. ಆಗ ಅವರ ಭಾಷಣವನ್ನು ಸಚಿವರೇ ಅರ್ಧಕ್ಕೆ ನಿಲ್ಲಿಸಿದ್ದರು. ಯಾವುದೇ ಕಾಮಗಾರಿ ವಿಚಾರದಲ್ಲಿ ಮಂಜುನಾಥ್ ಹೇಳುವುದೇ ಅಂತಿಮವಾಗಿತ್ತು. ಅಧಿಕಾರಿಗಳಿಗೆ ನಾನು ಜಿಲ್ಲಾಧ್ಯಕ್ಷ ಅಂತ ಬೆದರಿಕೆ ಹಾಕುವುದೂ ಮಾಮೂಲಿಯಾಗಿತ್ತು. ಸಣ್ಣಪುಟ್ಟ ಗುತ್ತಿಗೆದಾರರು ಕೆಲಸ ಕೇಳಿದಾಗ ತಾರತಮ್ಯ ಮಾಡುವ ಜತೆ ನೀವು ಯಾರ ಬೆಂಬಲಿಗರು, ಯಾವ ಪಕ್ಷ ಅಂತ ಕೇಳುತ್ತಿದ್ದ. ಕಾಮಗಾರಿಗಳ ವಿಚಾರದಲ್ಲಿ ಮೊದಲಿನಿಂದಲೂ ನಮ್ಮಿಬ್ಬರ ನಡುವೆ ದ್ವೇಷವಿದೆ. ಚಿತ್ರದುರ್ಗದ ಉಚ್ಚಂಗಿ ಯಲ್ಲಮ್ಮ ದೇಗುಲ ರಸ್ತೆ ಕಾಮಗಾರಿ ಕಳಪೆಯಾಗಿತ್ತು. ಅದನ್ನು ಈಗ ಆರೋಪಿಸುವುದು ಸರಿಯಲ್ಲ. ಈ ವಿಚಾರದಲ್ಲಿ ಕಾನೂನಾತ್ಮಕ ಹೋರಾಟ ನಡೆಸುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ