ತೇರುಮಲ್ಲೇಶ್ವರಸ್ವಾಮಿಗೆ ಕರ್ಪೂರದಾರತಿ


Team Udayavani, Feb 23, 2019, 10:52 AM IST

cta-1.jpg

ಹಿರಿಯೂರು: ತೇರುಮಲ್ಲೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ರಾತ್ರಿ ಕರ್ಪೂರದಾರತಿ ಕಾರ್ಯಕ್ರಮ ನಡೆಯಿತು. ರಾತ್ರಿ 9ಗಂಟೆ ವೇಳೆಗೆ ತೇರುಮಲ್ಲೇಶ್ವರ, ಚಂದ್ರಮೌಳೇಶ್ವರ ಹಾಗೂ ಉಮಾ ಮಹೇಶ್ವರಸ್ವಾಮಿ ರಥಾವರೋಹಣದ ನಂತರ ಈ ಕಾರ್ಯಕ್ರಮ ಜರುಗಿತು. ದೇವಸ್ಥಾನದ ಒಳ ಆವರಣದಲ್ಲಿರುವ ಸುಮಾರು 56 ಅಡಿ ಎತ್ತರದ ಕಲ್ಲು ಕಂಬದ ಮೇಲೆ ಜಗದೀಶ್‌ ಎಂಬುವವರು ಹತ್ತಿ ಕಂಬದ ಸುತ್ತ ಇರುವ
ಎಂಟು ಕಬ್ಬಿಣದ ಸೌಟುಗಳಿಗೆ ಬತ್ತಿ, ಎಣ್ಣೆ ಹಾಕಿ ಕರ್ಪೂರ ಬಳಸಿ ದೀಪ ಹಚ್ಚಿದರು. ಇದಾದ ತಕ್ಷಣ ದೀಪಸ್ತಂಭದ ಸುತ್ತ ನೆರೆದಿದ್ದ ಸಾವಿರಾರು ಭಕ್ತರು ಕರ್ಪೂರವನ್ನು ಹಚ್ಚಿ ಸಂತಸ ಪಟ್ಟರು.

ಹಿಂದೆ ನಾಡನ್ನು ಆಳುತ್ತಿದ್ದ ದೊರೆಗಳು ಕರ್ಪೂರದ ಆರತಿ ಕಾರ್ಯಕ್ರಮವನ್ನು ಶೌರ್ಯದ ಪ್ರತೀಕವೆಂದೇ ಪರಿಗಣಿಸಿದ್ದರು. ವಿಧೀರ ಪುರುಷರು 56 ಅಡಿ ಎತ್ತರದ ದೀಪಸ್ತಂಭವನ್ನು ಚಕಚಕನೆ ಏರಿ ಕರ್ಪೂರ ಹಚ್ಚಿ ನೆರದಿದ್ದ ಹೆಂಗಳೆಯರ ಮನ ಗೆಲ್ಲುವುದು ವಾಡಿಕೆಯಾಗಿತ್ತು. ಕಾರ್ತಿಕ ಮಾಸ ಹಾಗೂ ಜಾತ್ರೆಯ ಸಂದರ್ಭದಲ್ಲಿ ಕರ್ಪೂರ ಹಚ್ಚುವ ಸಂಪ್ರದಾಯ ಹಿಂದಿನಿಂದಲೂ ನಡೆದು ಬಂದಿದೆ.

ಕಂಬದ ಮೇಲಿನ ದೀಪ ಹಲವಾರು ಮೈಲು ದೂರ ಕಾಣುತ್ತದೆ. ದೂರದ ಗ್ರಾಮಗಳ ಗ್ರಾಮಸ್ಥರು ದೂರದಿಂದಲೇ ಕರ್ಪೂದಾರತಿಯ ಬೆಳಕನ್ನು ನೋಡಿ ದೇವರಿಗೆ ಕೈ ಮುಗಿಯುತ್ತಾರೆ. ವಿಶೇಷವಾಗಿ ಬಬ್ಬೂರು ಹಾಗೂ ಸುತ್ತಮುತ್ತಲಿನ ಗ್ರಾಮದ ಮಹಿಳೆಯರು ಆರತಿ ಮಾಡಲು ಬರುತ್ತಾರೆ. ದೇವರಿಗೆ ಮೊದಲ ಮೂರು ಆರತಿ ಮಾಡಲು ಹರಾಜಿನ ಮೂಲಕ ಹಣ ಪಡೆಯುತ್ತಾರೆ. 

ಈ ಬಾರಿ ಮೊದಲನೆ ಆರತಿಯನ್ನು 1.29 ಲಕ್ಷ ರೂ. ಗಳಿಗೆ ನಗರಸಭೆ ಸದಸ್ಯ ಈ. ಮಂಜುನಾಥ್‌, ಎರಡನೇ ಆರತಿಯನ್ನು 55 ಸಾವಿರ ರೂ. ಗಳಿಗೆ ಎಪಿಎಂಸಿ ಮಾಜಿ ಅಧ್ಯಕ್ಷ ಈರಲಿಂಗೇಗೌಡ ಹಾಗೂ ಮೂರನೇ ಆರತಿಯನ್ನು ಜಿಪಂ ಸದಸ್ಯ ಪಾಪಣ್ಣ 45 ಸಾವಿರ ರೂ.ಗಳಿಗೆ ಪಡೆದು ದೇವರಿಗೆ ಪೂಜೆ ಸಲ್ಲಿಸಿದರು. ನಂತರ ಸುಮಂಗಲಿಯರು ಸಾಲಿಗಿ ನಿಂತು ಆರತಿ ಬೆಳಗಿದರು. 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.